ಮೈಸೂರು : ವೀರ ಸಾವಾರ್ಕರ್ ಯುವ ಬಳಗದ ವತಿಯಿಂದ ಇಂದು ಸಾವಾರ್ಕರ್ ರವರ ೧೪೪ ನೇ ಜಯಂತಿಯನ್ನು ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದ ಬಳಿ ವೀರ ಸಾವರ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅಮರ್ ರಹೇ, ಅಮರ್ ರಹೇ ವೀರ ಸಾವರ್ಕರ್ ಅಮರ ರಹೇ ಎಂದು ವಿವಿಧ ಘೋಷಣೆ ಕೂಗುತ್ತಾ ಆಚರಿಸಲಾಯಿತು.
ಇದೆ ಸಂದರ್ಭದಲ್ಲಿ ಶ್ರೀರಾಮ ಸೇನೆ ಯ ರಾಜ್ಯ ಕಾರ್ಯದರ್ಶಿಗಳಾದ ಸಂಜಯ್ ಮಾತನಾಡಿ, ವೀರ ಸಾವರ್ಕರ್ ರವರು 2 ಬಾರಿ ಅನುಭವಿಸಿದ ಕರಿನೀರ ಶಿಕ್ಷೆ ಯನ್ನು ಇಂದಿನ ಯುವ ಪೀಳಿಗೆ ನೆನೆಯಬೇಕಿದೆ, ಹಾಗೆ ಸ್ವಾತಂತ್ರ ಹೋರಾಟಕ್ಕೆ ಕ್ರಾಂತಿಕಾರಿಗಳ
ಕೊಡುಗೆ ಮರೆಯಬಾರದು ಎಂದು ತಿಳಿಸಿದರು
ನಂತರ ಮಾತನಾಡಿದ ಯುವ ಮುಖಂಡ ಮಧು ಸೋಮಶೇಖರ್ ಇಂದಿನ ಯುವಕರು ಹೆಚ್ಚು ಸ್ವತಂತ್ರ ಕ್ಕೆ ಹೋರಾಡಿದವರ ಬಗ್ಗೆ ತಿಳಿಯಬೇಕು ಅವರ ಪುಸ್ತಕಗಳನ್ನು ಖರಿದಿಸಿ ಓದಬೇಕು ಚಿಕ್ಕ ವಯಸ್ಸಿನಲ್ಲೆ ನಾವು ದೇಶಾಭಿಮಾನ ಹೆಚ್ಚಿಸುವಂತಹ ಶಾಲೆಗಳಲ್ಲಿ ಕೆಲಸವಾಗಬೇಕಿದೆ ಇದಕ್ಕೆ ನಮಗೆ ಇಸ್ರೇಲ್ ದೇಶ ಮಾದರಿಯಾಗಿ ತೆಗೆದುಕೊಳ್ಳಬೇಕು, ಹಾಗೆ ಸ್ವತಂತ್ರ ಕ್ಕೆ ಹೊರಾಡಿದ ಯಾವುದೆ ವ್ಯಕ್ತಿ ಇರಲಿ ಅವರ ಬಗ್ಗೆ ಗೌರವ ಇಟ್ಟುಕೊಳ್ಳ ಬೇಕಿದೆ ಎಂದು ತಿಳಿಸಿದರು.
ಈ ಸಂಧರ್ಭದಲ್ಲಿ ವೀರ ಸಾವರ್ಕರ್ ಯುವ ಬಳಗದ ಸಂದೇಶ್ ಪವಾರ್, ಮಹೇಶ್ ರಾಜೇ ಅರಸ್, ವಿಕ್ರಂ ಅಯ್ಯಂಗಾರ್, ಮನೋಜ್, ಪ್ರಮೋದ್ ಗೌಡ, ಅಭಿಷೇಕ್ ಗೌಡ,ರವಿ, ಕಾರ್ತಿಕ್ ಸಿದ್ದೇಗೌಡ, ಚಂದನ್ ಗೌಡ, ರಂಗರಾಜು ಬಳಗದ ಮತ್ತಿತ್ತರು ಭಾಗವಹಿಸಿದ್ದರು.
ಮೈಸೂರು: ರೈತರು ಸಡಗರದಿಂದ ಕೃಷಿ ಚಟುವಟಿಕೆ ಆರಂಭಿಸುವ ಮೊದಲ ಹೆಜ್ಜೆ ಯುಗಾದಿಯಾಗಿದ್ದು, ಜಿಲ್ಲೆಯ ಹಲವೆಡೆ ಅನ್ನದಾತರು ಹೊನ್ನೇರು ಕಟ್ಟಿ ಭೂಮಿ…
ಮೈಸೂರು: ಇಂದು ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆಮಾಡಿದೆ. ಬೆಲೆ ಏರಿಕೆ, ಮಧ್ಯಪ್ರಾಚ್ಯ ಯುದ್ಧ ಭೀತಿಯ ನಡುವೆಯೂ ಜನರು ಸಾಂಪ್ರದಾಯಿಕವಾಗಿ…
ಸಾಂಸ್ಕೃತಿಕ ನಗರಿ ಮೈಸೂರು ಆಹಾರ ಪ್ರಿಯರ ಸ್ವರ್ಗವೂ ಹೌದು. ಮೈಸೂರು ಪಾಕ್ನಿಂದ ಹಿಡಿದು ಮೈಲಾರಿ ದೋಸೆಯವರೆಗೆ ಇಲ್ಲಿನ ರುಚಿ ಪ್ರಸಿದ್ಧವಾಗಿದೆ.…
ಪ್ರೇಮ್ ನಿರ್ದೇಶನದ ಕನ್ನಡ ಕೆಡಿ ಚಿತ್ರದ ಸರ್ಸೆ ನಿನ್ನ ಸೆರಗ ಸರ್ಸೆ.. ಎಂಬ ಗೀತೆ ದ್ವಂದ್ವಾರ್ಥದ ಕೀಳು ಅಭಿರುಚಿಯ ಹಾಡು…
ಮಾರ್ಚ್ ತಿಂಗಳು ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸುವ ಪರೀಕ್ಷಾ ಸಮಯ. ಇಂತಹ ಸಂದರ್ಭದಲ್ಲಿ ರಾಜ್ಯಾದ್ಯಂತ ಎಸ್ಕಾಂಗಳು ವಿದ್ಯುತ್ ಕಡಿತ ಮಾಡುತ್ತಿರುವುದು ಸರಿಯಲ್ಲ.…
ನವೀನ್ ಡಿಸೋಜ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಗೃಹಬಳಕೆ ಎಲ್ಪಿಜಿ ಸಿಲಿಂಡರ್ಗಳು ಸಾಕಷ್ಟು ಸಂಗ್ರಹ ವಿದ್ದು, ಅನಧಿಕೃತ ಗ್ಯಾಸ್ ಸಿಲಿಂಡರ್ ಸಂಗ್ರಹಣೆ…