ಮೈಸೂರು : ವೀರ ಸಾವಾರ್ಕರ್ ಯುವ ಬಳಗದ ವತಿಯಿಂದ ಇಂದು ಸಾವಾರ್ಕರ್ ರವರ ೧೪೪ ನೇ ಜಯಂತಿಯನ್ನು ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದ ಬಳಿ ವೀರ ಸಾವರ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅಮರ್ ರಹೇ, ಅಮರ್ ರಹೇ ವೀರ ಸಾವರ್ಕರ್ ಅಮರ ರಹೇ ಎಂದು ವಿವಿಧ ಘೋಷಣೆ ಕೂಗುತ್ತಾ ಆಚರಿಸಲಾಯಿತು.
ಇದೆ ಸಂದರ್ಭದಲ್ಲಿ ಶ್ರೀರಾಮ ಸೇನೆ ಯ ರಾಜ್ಯ ಕಾರ್ಯದರ್ಶಿಗಳಾದ ಸಂಜಯ್ ಮಾತನಾಡಿ, ವೀರ ಸಾವರ್ಕರ್ ರವರು 2 ಬಾರಿ ಅನುಭವಿಸಿದ ಕರಿನೀರ ಶಿಕ್ಷೆ ಯನ್ನು ಇಂದಿನ ಯುವ ಪೀಳಿಗೆ ನೆನೆಯಬೇಕಿದೆ, ಹಾಗೆ ಸ್ವಾತಂತ್ರ ಹೋರಾಟಕ್ಕೆ ಕ್ರಾಂತಿಕಾರಿಗಳ
ಕೊಡುಗೆ ಮರೆಯಬಾರದು ಎಂದು ತಿಳಿಸಿದರು
ನಂತರ ಮಾತನಾಡಿದ ಯುವ ಮುಖಂಡ ಮಧು ಸೋಮಶೇಖರ್ ಇಂದಿನ ಯುವಕರು ಹೆಚ್ಚು ಸ್ವತಂತ್ರ ಕ್ಕೆ ಹೋರಾಡಿದವರ ಬಗ್ಗೆ ತಿಳಿಯಬೇಕು ಅವರ ಪುಸ್ತಕಗಳನ್ನು ಖರಿದಿಸಿ ಓದಬೇಕು ಚಿಕ್ಕ ವಯಸ್ಸಿನಲ್ಲೆ ನಾವು ದೇಶಾಭಿಮಾನ ಹೆಚ್ಚಿಸುವಂತಹ ಶಾಲೆಗಳಲ್ಲಿ ಕೆಲಸವಾಗಬೇಕಿದೆ ಇದಕ್ಕೆ ನಮಗೆ ಇಸ್ರೇಲ್ ದೇಶ ಮಾದರಿಯಾಗಿ ತೆಗೆದುಕೊಳ್ಳಬೇಕು, ಹಾಗೆ ಸ್ವತಂತ್ರ ಕ್ಕೆ ಹೊರಾಡಿದ ಯಾವುದೆ ವ್ಯಕ್ತಿ ಇರಲಿ ಅವರ ಬಗ್ಗೆ ಗೌರವ ಇಟ್ಟುಕೊಳ್ಳ ಬೇಕಿದೆ ಎಂದು ತಿಳಿಸಿದರು.
ಈ ಸಂಧರ್ಭದಲ್ಲಿ ವೀರ ಸಾವರ್ಕರ್ ಯುವ ಬಳಗದ ಸಂದೇಶ್ ಪವಾರ್, ಮಹೇಶ್ ರಾಜೇ ಅರಸ್, ವಿಕ್ರಂ ಅಯ್ಯಂಗಾರ್, ಮನೋಜ್, ಪ್ರಮೋದ್ ಗೌಡ, ಅಭಿಷೇಕ್ ಗೌಡ,ರವಿ, ಕಾರ್ತಿಕ್ ಸಿದ್ದೇಗೌಡ, ಚಂದನ್ ಗೌಡ, ರಂಗರಾಜು ಬಳಗದ ಮತ್ತಿತ್ತರು ಭಾಗವಹಿಸಿದ್ದರು.
ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ದೂರ ಗ್ರಾಮಕ್ಕೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಶನಿವಾರ ಆಗಮಿಸಿದ್ದರು. ಅವರು ಮೊದಲು…
ರಿಯಾಧ್: ಸೌದಿ ಅರಾಮ್ಕೊ ತೈಲ ಕಂಪನಿಗೆ ಸೇರಿದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ರಾಸ್…
ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…
ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…
ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…
ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…