ಮೈಸೂರು

ವೀರ ಸಾವಾರ್ಕರ್ ಯುವ ಬಳಗದ ವತಿಯಿಂದ ೧೪೪ ನೇ ಸಾವಾರ್ಕರ್ ಜಯಂತಿ ಆಚರಣೆ

ಮೈಸೂರು : ವೀರ ಸಾವಾರ್ಕರ್ ಯುವ ಬಳಗದ ವತಿಯಿಂದ ಇಂದು ಸಾವಾರ್ಕರ್ ರವರ ೧೪೪ ನೇ ಜಯಂತಿಯನ್ನು ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದ ಬಳಿ ವೀರ ಸಾವರ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅಮರ್ ರಹೇ, ಅಮರ್ ರಹೇ ವೀರ ಸಾವರ್ಕರ್ ಅಮರ ರಹೇ ಎಂದು ವಿವಿಧ ಘೋಷಣೆ ಕೂಗುತ್ತಾ ಆಚರಿಸಲಾಯಿತು.

ಇದೆ ಸಂದರ್ಭದಲ್ಲಿ ಶ್ರೀರಾಮ ಸೇನೆ ಯ ರಾಜ್ಯ ಕಾರ್ಯದರ್ಶಿಗಳಾದ ಸಂಜಯ್ ಮಾತನಾಡಿ, ವೀರ ಸಾವರ್ಕರ್ ರವರು 2 ಬಾರಿ ಅನುಭವಿಸಿದ ಕರಿನೀರ ಶಿಕ್ಷೆ ಯನ್ನು ಇಂದಿನ ಯುವ ಪೀಳಿಗೆ ನೆನೆಯಬೇಕಿದೆ, ಹಾಗೆ ಸ್ವಾತಂತ್ರ ಹೋರಾಟಕ್ಕೆ ಕ್ರಾಂತಿಕಾರಿಗಳ
ಕೊಡುಗೆ ಮರೆಯಬಾರದು ಎಂದು ತಿಳಿಸಿದರು

ನಂತರ ಮಾತನಾಡಿದ ಯುವ ಮುಖಂಡ ಮಧು ಸೋಮಶೇಖರ್ ಇಂದಿನ ಯುವಕರು ಹೆಚ್ಚು ಸ್ವತಂತ್ರ ಕ್ಕೆ ಹೋರಾಡಿದವರ ಬಗ್ಗೆ ತಿಳಿಯಬೇಕು ಅವರ ಪುಸ್ತಕಗಳನ್ನು ಖರಿದಿಸಿ ಓದಬೇಕು ಚಿಕ್ಕ ವಯಸ್ಸಿನಲ್ಲೆ ನಾವು ದೇಶಾಭಿಮಾನ ಹೆಚ್ಚಿಸುವಂತಹ ಶಾಲೆಗಳಲ್ಲಿ ಕೆಲಸವಾಗಬೇಕಿದೆ ಇದಕ್ಕೆ ನಮಗೆ ಇಸ್ರೇಲ್ ದೇಶ ಮಾದರಿಯಾಗಿ ತೆಗೆದುಕೊಳ್ಳಬೇಕು, ಹಾಗೆ ಸ್ವತಂತ್ರ ಕ್ಕೆ ಹೊರಾಡಿದ ಯಾವುದೆ ವ್ಯಕ್ತಿ ಇರಲಿ ಅವರ ಬಗ್ಗೆ ಗೌರವ ಇಟ್ಟುಕೊಳ್ಳ ಬೇಕಿದೆ ಎಂದು ತಿಳಿಸಿದರು.

ಈ ಸಂಧರ್ಭದಲ್ಲಿ ವೀರ ಸಾವರ್ಕರ್ ಯುವ ಬಳಗದ ಸಂದೇಶ್ ಪವಾರ್, ಮಹೇಶ್ ರಾಜೇ ಅರಸ್, ವಿಕ್ರಂ ಅಯ್ಯಂಗಾರ್, ಮನೋಜ್, ಪ್ರಮೋದ್ ಗೌಡ, ಅಭಿಷೇಕ್ ಗೌಡ,ರವಿ, ಕಾರ್ತಿಕ್ ಸಿದ್ದೇಗೌಡ, ಚಂದನ್ ಗೌಡ, ರಂಗರಾಜು ಬಳಗದ ಮತ್ತಿತ್ತರು ಭಾಗವಹಿಸಿದ್ದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಓದುಗರ ಪತ್ರ: ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣ ಪ್ರಶ್ನಾರ್ಹ

ಇತ್ತೀಚೆಗೆ ರಾಜ್ಯಸಭಾ ಸದಸ್ಯ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಉತ್ತರಾಖಂಡ್ ರಾಜ್ಯದ ಹಲ್ ದ್ವಾನಿಯ ರಾಮಲೀಲಾ…

5 hours ago

ಓದುಗರ ಪತ್ರ: ಎನ್‌ಕೌಂಟರ್ ನಿಗೂಢತೆ?

ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ಮೃತಪಟ್ಟಿರುವ ಪ್ರಕರಣ ಹಲವಾರು…

6 hours ago

ಓದುಗರ ಪತ್ರ: ಜಂಬೂಸವಾರಿಯ ಹೊಸ ಸಾರಥಿ ಯಾರು?

ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ೭೫೦ ಕೆಜಿ ತೂಕದ ಅಂಬಾರಿ ಹೊತ್ತು ಸಾಗುತ್ತಿದ್ದ ಅಭಿಮನ್ಯು ಆನೆ ಇನ್ನುಮುಂದೆ ಬರುವುದಿಲ್ಲ…

6 hours ago

ಧ್ವನಿಹೀನರಿಗೆ ಧ್ವನಿಯಾಗಿದ್ದ ದೇವರಾಜ ಅರಸು

ಎಚ್.ಹಾಲಪ್ಪ ಇಂದು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಜಯಂತಿ ದೇಶದಲ್ಲಿ ಜನಪ್ರತಿನಿಧಿಗಳ ಸಂಖ್ಯೆ ಸಾವಿರಾರು. ಆದರೆ, ಕಾಲದ ಪರೀಕ್ಷೆಯಲ್ಲಿ ಮುತ್ಸದ್ದಿ…

6 hours ago

ನೀರಿಲ್ಲದಿದ್ದರೂ ಭರ್ತಿಯಾಗುತ್ತಿದೆ ಕಸುವಿನಹಳ್ಳಿ ಕೆರೆ!

ಎಸ್.ಎಸ್.ಭಟ್ ಸುತ್ತಲಿನ ಕ್ರಷರ್‌ನಿಂದ ತಂದು ಹಾಕುತ್ತಿರುವ ರಾಶಿ ದೂಳಿನಿಂದ ತುಂಬುತ್ತಿದೆ ಕೆರೆ; ಗ್ರಾಮಸ್ಥರ ಆಕ್ರೋಶ ನಂಜನಗೂಡು: ಮಳೆ ಬಂದರೆ ನೀರಿನಿಂದ…

6 hours ago