ಮೈಸೂರು

ಚಿರತೆ ದಾಳಿಗೆ ಬಲಿಯಾದ ಬಾಲಕಿ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ

ಮೈಸೂರು : ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಗ್ಗಲಿಗುಂದಿ ಗ್ರಾಮದಲ್ಲಿ ಚಿರತೆ ದಾಳಿಯಿಂದ ತೀವ್ರ ಗಾಯಗೊಂಡಿದ್ದ ಬಾಲಕಿ ಮೃತಪಟ್ಟಿದ್ದು, ಬಾಲಕಿ ಕುಟುಂಬಕ್ಕೆ ಅರಣ್ಯ ಇಲಾಖೆ ಸಚಿವ ಈಶ್ವರ್​ ಖಂಡ್ರೆ 15 ಲಕ್ಷ ರೂ. ಪರಿಹಾರ ನೀಡುವಂತೆ ಸೂಚನೆ ನೀಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಗ್ಗಲಿಗುಂದಿ ಗ್ರಾಮದಲ್ಲಿ ಚಿರತೆ ದಾಳಿಗೆ ಬಾಲಕಿ ಸುಶೀಲಾ ಸಾವು ವಿಚಾರ ಕೇಳಿ ಬೇಸರ ಆಗಿದ್ದು, ಸರ್ಕಾರದ ವತಿಯಿಂದ 15 ಲಕ್ಷ ರೂ. ಪರಿಹಾರ ನೀಡಲು ಸೂಚನೆ ನೀಡಿ, 4 ಸಾವಿರ ಮಾಸಾಶನ ಬರುವಂತೆ ಸರ್ಕಾರಕ್ಕೆ ಬೇಡಿಕೆ ಇಟ್ಟು ಜಾರಿಗೊಳಿಸಲು ಪ್ರಯತ್ನ ಪಡುತ್ತೇನೆ ಎಂದರು.

ಜೂ.26ರ ರಾತ್ರಿ ತಮ್ಮ ಮನೆ ಬಳಿ ಚಿರತೆ ದಾಳಿಗೆ ಸಿಲುಕಿದ್ದ ಬಾಲಕಿಯನ್ನು ಮೈಸೂರಿನ ಚೆಲುವಾಂಬ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಸುಶೀಲಾ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ರಾತ್ರಿ ಮೃತಪಟ್ಟಿದ್ದಾಳೆ.

lokesh

Recent Posts

ಗ್ರಾಹಕರಿಕೆ ಶಾಕ್‌ : ಪೆಟ್ರೋಲ್‌, ಡಿಸೇಲ್‌ ಬೆಲೆ ಮತ್ತೆ ಏರಿಕೆ

ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‍ಗೆ…

2 hours ago

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ:ಈಶ್ವರ ಖಂಡ್ರೆ

ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…

2 hours ago

ಪಶ್ಚಿಮ ಬಂಗಾಳ : ಒಬಿಸಿ ಪಟ್ಟಿ ಮರುಸಂರಚನೆ

ಆರ್‌ಎಸ್‌ಎಸ್‌ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್‌ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…

3 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ | ಆಳುವ ಸರ್ಕಾರ ಎಚ್ಚರ ತಪ್ಪಿದರೆ ಪ್ರತಿರೋಧ ಖಚಿತ

ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…

4 hours ago

ಆಂದೋಲನ ಸಂಪಾದಕೀಯ | ಇಂಧನ ದರ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಮುಂದಾಗಲಿ

ಕೇವಲ ಹತ್ತು ದಿನಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಮೂರು ಬಾರಿ ಹೆಚ್ಚಳವಾಗಿದೆ. ಇದು ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ…

4 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.25 ಸೋಮವಾರ

6 hours ago