ಮೈಸೂರು: ಮಹಿಳಾ ಕ್ರಿಕೆಟ್ ಆಧರಿತ ಸಹಾರಾ ಸಿನಿಮಾ ಇದೇ ಜೂ. 7 ರಂದು ರಾಜ್ಯದಾದ್ಯಂತ ತೆರೆಕಾಣಲಿದೆ. ಹೀಗಾಗಿ ಜನತೆ ಚಿತ್ರಮಂದಿರಗಳಿಗೆ ತೆರಳಿ ವೀಕ್ಷಿಸುವ ಮೂಲಕ ಪ್ರೋತ್ಸಾಹ ನೀಡಬೇಕೆಂದು ಚಿತ್ರದ ನಾಯಕಿ ನಟಿ ಸಾರಿಕಾ ರಾವ್ ಮನವಿ ಮಾಡಿದರು.
ಅವರು ಇಂದು(ಜೂನ್.೫) ನಗರದಲ್ಲಿ ಸುದ್ದಿಗಾರರೊಡನ ಮಾತನಾಡಿ, ಪುರುಷರ ಕ್ರಿಕೆಟ್ಗೆ ಹೆಚ್ಚು ಪ್ರಾಧಾನ್ಯತೆ ನೀಡಿ, ಮಹಿಳಾ ಕ್ರಿಕೆಟ್ ಕಡೆಗಣಿಸಲಾಗಿದೆ. ಹೀಗಾಗಿ ಮಂಡ್ಯ ಮೂಲಕ ಗ್ರಾಮೀಣ ಪ್ರದೇಶದ ಯುವತಿಯೊಬ್ಬರು ಕ್ರಿಕೆಟ್ನಲ್ಲಿ ಸಮಸ್ಯೆ ಎದುರಿಸಿ ಮಾಡುವ ಸಾಧನೆಯ ಎಳೆ ಎಳೆಯನ್ನು ಚಿತ್ರದಲ್ಲಿ ತೋರಿಸಲಾಗಿದೆ ಎಂದದರು.
ಇನ್ನು ಭಾರತ ತಂಡದ ಮಾಜಿ ಆಟಗಾರ ಡೇವಿಡ್ ಜಾನ್ಸ್ ಸುನಿಲ್ ಕೂಡ ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಮಂಜೇಶ್ ಭಗವತ್ ಚಿತ್ರದ ನಿರ್ಮಾಣದ ಜೊತೆಗೆ ಆಕ್ಸನ್ ಕಟ್ ಹೇಳಿದ್ದಾರೆ. ನಂಜನಗೂಡಿನ ಕಳಲೆ ಗ್ರಾಮ ಮತ್ತು ನಗರದ ಸುತ್ತಮುತ್ತ ಚಿತ್ರೀಕಣರ ನಡೆದಿದೆ ಎಂದು ಮಾಹಿತಿ ನೀಡಿದರು.
ಪತ್ರಿಕಗೋಷ್ಠಿಯಲ್ಲಿ ಚಿತ್ರದ ನಿರ್ಮಾಪಕರು ಹಾಗೂ ನಿರ್ದೇಶಕ ಮಂಜೇಶ್ ಭಗವತ್, ನಮ್ಮೂರು ನಮ್ಮೋರು ಸಮಾಜ ಸೇವಾ ಟ್ರಸ್ಟಿನ ಅಧ್ಯಕ್ಷರಾದ ಬೀಡನಹಳ್ಳಿ ಸತೀಶ್ ಗೌಡ, ಕೆ ಎಂ ಪಿ ಕೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ವಿಕ್ರಂ ಅಯ್ಯಂಗಾರ್, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಗೋವಿಂದರಾಜು ಲಯನ್ ಲೋಕೇಶ್ ಸೇರಿ ಇನ್ನಿತರರು ಹಾಜರಿದ್ದರು.
ರಾಜ್ಯದಲ್ಲಿ ಅರುಣಾಚಲ ಪ್ರದೇಶ ಮತ್ತು ನಾಗಾಲ್ಯಾಂಡ್ನಂತಹ ದೂರದ ರಾಜ್ಯಗಳ ದಾಖಲೆಗಳನ್ನು ಬಳಸಿ ಬಸ್ಗಳ ನಕಲಿ ರಹ ದಾರಿ(ಪರ್ಮಿಟ್) ಪಡೆದು ಸರ್ಕಾರಕ್ಕೆ…
ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಸ್ವಾಮ್ಯದ ಕೆಲವು ಬ್ಯಾಂಕ್ಗಳಲ್ಲಿ ಗ್ರಾಹಕರು ಅಡಮಾನ ಇಟ್ಟಿರುವ ಚಿನ್ನವನ್ನು ಬ್ಯಾಂಕ್ ಸಿಬ್ಬಂದಿಯೇ ದುರುಪಯೋಗಪಡಿಸಿಕೊಳ್ಳುತ್ತಿರುವ ಪ್ರಕರಣಗಳು ಮಾಧ್ಯಮಗಳಲ್ಲಿ…
ಮೈಸೂರಿನ ಕುವೆಂಪುನಗರ ವಿಶ್ವ ಮಾನವ ಜೋಡಿ ರಸ್ತೆಯ ಸಿ ಆಂಡ್ ಡಿ ಬ್ಲಾಕ್ನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಾಕಷ್ಟು ಸಿಬ್ಬಂದಿ…
ಖಾಸಗಿ ಹಾಗೂ ಸರ್ಕಾರಿ ಬ್ಯಾಂಕುಗಳು ಈಗಲೂ ಉಳಿತಾಯ ಖಾತೆಯಲ್ಲಿ ಕನಿಷ್ಠ ಮೊತ್ತ ಇಲ್ಲ ಎಂಬ ಕಾರಣಕ್ಕೆ ದಂಡ ವಿದಿಸುತ್ತಿದ್ದು, ೨೦೨೪-೨೫ನೇ…
ಭೇರ್ಯ ಮಹೇಶ್ ಆದಿಶಕ್ತಿ ತೋಪಮ್ಮ ಟ್ರಸ್ಟ್ ಆಡಳಿತ ಮಂಡಳಿಯಿಂದ ಸಕಲ ಸಿದ್ಧತೆ; ಸಾವಿರಾರು ಮಂದಿ ಭೇಟಿ ನಿರೀಕ್ಷೆ ಕೆ.ಆರ್.ನಗರ: ಫೆಬ್ರವರಿ…
ಮಂಜು ಕೋಟೆ ಎಚ್.ಡಿ.ಕೋಟೆ: ಬಿಜೆಪಿ ಘಟಕದ ತಾಲ್ಲೂಕು ಅಧ್ಯಕ್ಷ ಹಿರೇಹಳ್ಳಿ ಶಂಭುಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಅಧ್ಯಕ್ಷ ಸ್ಥಾನಕ್ಕೆ…