ಮೈಸೂರು: ಮಹಿಳಾ ಕ್ರಿಕೆಟ್ ಆಧರಿತ ಸಹಾರಾ ಸಿನಿಮಾ ಇದೇ ಜೂ. 7 ರಂದು ರಾಜ್ಯದಾದ್ಯಂತ ತೆರೆಕಾಣಲಿದೆ. ಹೀಗಾಗಿ ಜನತೆ ಚಿತ್ರಮಂದಿರಗಳಿಗೆ ತೆರಳಿ ವೀಕ್ಷಿಸುವ ಮೂಲಕ ಪ್ರೋತ್ಸಾಹ ನೀಡಬೇಕೆಂದು ಚಿತ್ರದ ನಾಯಕಿ ನಟಿ ಸಾರಿಕಾ ರಾವ್ ಮನವಿ ಮಾಡಿದರು.
ಅವರು ಇಂದು(ಜೂನ್.೫) ನಗರದಲ್ಲಿ ಸುದ್ದಿಗಾರರೊಡನ ಮಾತನಾಡಿ, ಪುರುಷರ ಕ್ರಿಕೆಟ್ಗೆ ಹೆಚ್ಚು ಪ್ರಾಧಾನ್ಯತೆ ನೀಡಿ, ಮಹಿಳಾ ಕ್ರಿಕೆಟ್ ಕಡೆಗಣಿಸಲಾಗಿದೆ. ಹೀಗಾಗಿ ಮಂಡ್ಯ ಮೂಲಕ ಗ್ರಾಮೀಣ ಪ್ರದೇಶದ ಯುವತಿಯೊಬ್ಬರು ಕ್ರಿಕೆಟ್ನಲ್ಲಿ ಸಮಸ್ಯೆ ಎದುರಿಸಿ ಮಾಡುವ ಸಾಧನೆಯ ಎಳೆ ಎಳೆಯನ್ನು ಚಿತ್ರದಲ್ಲಿ ತೋರಿಸಲಾಗಿದೆ ಎಂದದರು.
ಇನ್ನು ಭಾರತ ತಂಡದ ಮಾಜಿ ಆಟಗಾರ ಡೇವಿಡ್ ಜಾನ್ಸ್ ಸುನಿಲ್ ಕೂಡ ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಮಂಜೇಶ್ ಭಗವತ್ ಚಿತ್ರದ ನಿರ್ಮಾಣದ ಜೊತೆಗೆ ಆಕ್ಸನ್ ಕಟ್ ಹೇಳಿದ್ದಾರೆ. ನಂಜನಗೂಡಿನ ಕಳಲೆ ಗ್ರಾಮ ಮತ್ತು ನಗರದ ಸುತ್ತಮುತ್ತ ಚಿತ್ರೀಕಣರ ನಡೆದಿದೆ ಎಂದು ಮಾಹಿತಿ ನೀಡಿದರು.
ಪತ್ರಿಕಗೋಷ್ಠಿಯಲ್ಲಿ ಚಿತ್ರದ ನಿರ್ಮಾಪಕರು ಹಾಗೂ ನಿರ್ದೇಶಕ ಮಂಜೇಶ್ ಭಗವತ್, ನಮ್ಮೂರು ನಮ್ಮೋರು ಸಮಾಜ ಸೇವಾ ಟ್ರಸ್ಟಿನ ಅಧ್ಯಕ್ಷರಾದ ಬೀಡನಹಳ್ಳಿ ಸತೀಶ್ ಗೌಡ, ಕೆ ಎಂ ಪಿ ಕೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ವಿಕ್ರಂ ಅಯ್ಯಂಗಾರ್, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಗೋವಿಂದರಾಜು ಲಯನ್ ಲೋಕೇಶ್ ಸೇರಿ ಇನ್ನಿತರರು ಹಾಜರಿದ್ದರು.
ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…
ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…
ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್.ಮಹೇಶ್ ಮಾರ್ಮಿಕವಾಗಿ…
ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…
ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…
ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…