ಮೈಸೂರು : ಯುವ ಸಮುದಾಯಕ್ಕೆ ಹಾಗೂ ತಾಂತ್ರಿಕ ಕ್ಷೇತ್ರಕ್ಕೆ ಪ್ರಸಕ್ತ ಸಾಲಿನ ಬಜೆಟ್ನಲ್ಲಿ ಹೆಚ್ಚು ಒತ್ತು ನೀಡುವ ಮೂಲಕ ವಿಕಸಿತ ಭಾರತ ಆಶಯಕ್ಕೆ ಪೂರಕವಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ.
2026-27ನೇ ಸಾಲಿನ ಕೇಂದ್ರ ಆಯವ್ಯಯ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಸಂಸದ ಯದುವೀರ್ ಒಡೆಯರ್, ಇದು ಅಭಿವೃದ್ಧಿ ಹಾಗೂ ಜನಪರ ಬಜೆಟ್ ಆಗಿದೆ ಎಂದರು.
ಭಾರತೀಯ ಖಗೋಳ ಭೌತಶಾಸ್ತ್ರ ಸಂಸ್ಥೆಯ ನೇತೃತ್ವದಲ್ಲಿ ಮೈಸೂರಿನಲ್ಲಿ ಮುಂಬರುವ COSMOS ತಾರಾಲಯ ಮತ್ತು ಖಗೋಳಶಾಸ್ತ್ರ ತರಬೇತಿ ಕೇಂದ್ರದಂತಹ ಯೋಜನೆಗಳು ಸಾಕಷ್ಟು ನೆರವಾಗಲಿವೆ. COSMOS, ಶಿಕ್ಷಣ, ತರಬೇತಿ, ಸಂಶೋಧನೆ ಮತ್ತು ಸಾರ್ವಜನಿಕ ತೊಡಗಿಸಿಕೊಳ್ಳುವಿಕೆಗೆ ಕೇಂದ್ರವಾಗಿ ಬೆಳೆಯಲು ಇದು ನೆರವಾಗಲಿದೆ. ಮುಂದಿನ ಪೀಳಿಗೆಯ ವಿಜ್ಞಾನಿಗಳಿಗೆ ಸ್ಫೂರ್ತಿ ನೀಡಲು ಮತ್ತು ವಿಕಸಿತ ಭಾರತ 2047 ರ ಹಾದಿಯಲ್ಲಿ ದೇಶದ ವೈಜ್ಞಾನಿಕ ಸಾಮರ್ಥ್ಯವನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಇದು ಬಜೆಟ್ನಲ್ಲಿ ಮಹತ್ವದ ಅಂಶವಾಗಿದೆ ಎಂದರು.
ಹಣಕಾಸಿನ ಶಿಸ್ತು, ಆರ್ಥಿಕ ಸಮತೋಲನ ಮೂಲಸೌಕರ್ಯದಲ್ಲಿ ದಾಖಲೆಯ ಸಾರ್ವಜನಿಕ ಹೂಡಿಕೆ, ಅರೆವಾಹಕಗಳು, ಬಯೋಫಾರ್ಮಾ ಮತ್ತು ಎಲೆಕ್ಟ್ರಾನಿಕ್ಸ್ ಉತ್ಪಾದನೆಯನ್ನು ವೇಗಗೊಳಿಸಲು 2ನೇ ಹಾಗೂ 3ನೇ ಸ್ತರದ ನಗರಗಳಿಗೂ ಯೋಜನೆಗಳನ್ನು ವಿಸ್ತರಿಸಲಾಗುತ್ತಿರುವುದು ಗಮನಾರ್ಹ ಎಂದು ಸಂಸದರು ತಿಳಿಸಿದರು.
ಶಿಕ್ಷಣದಿಂದ ಉದ್ಯೋಗಕ್ಕೆ ಮಾರ್ಗಗಳು, AVGC ಮತ್ತು ಆರೋಗ್ಯ ರಕ್ಷಣೆ, ಪ್ರವಾಸೋದ್ಯಮ ಕೌಶಲ್ಯ, ಪ್ರಾದೇಶಿಕ ಬೆಳವಣಿಗೆಯ ಕೇಂದ್ರಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಮಣೆ ಹಾಕಿದೆ ಎಂದು ಯದುವೀರ್ ಒಡೆಯರ್ ವಿವರಿಸಿದರು.
ಎಂಎಸ್ಎಂಇಗಳು ಭಾರತದ ಆರ್ಥಿಕತೆಯ ಬೆನ್ನೆಲುಬಾಗಿದೆ. ಸಾಲ, ತಂತ್ರಜ್ಞಾನ ಅಳವಡಿಕೆ, ಮಾರುಕಟ್ಟೆ ಸಂಪರ್ಕಗಳು ಮತ್ತು ಸುಲಭ ವ್ಯವಹಾರ ಯೋಜನೆಗಳಿಗೆ ಸಾಕಷ್ಟು ಅನುದಾನ ಒದಗಿಸಿರುವುದು ನಮ್ಮ ಸರ್ಕಾರದ ಹೆಗ್ಗಳಿಕೆ ಎಂದು ಸಂಸದರು ತಿಳಿಸಿದರು.
ಸರಕು ಸಾಗಣೆ ಕಾರಿಡಾರ್ಗಳು, ಒಳನಾಡಿನ ಜಲಮಾರ್ಗಗಳು ಮತ್ತು ಹೈ-ಸ್ಪೀಡ್ ರೈಲು ಸಂಪರ್ಕದ ಮೇಲೆ ಕೇಂದ್ರೀಕರಿಸುವುದರಿಂದ ಲಾಜಿಸ್ಟಿಕ್ಸ್ ಅನ್ನು ಬಲಪಡಿಸಲು ಬಜೆಟ್ನಲ್ಲಿ ಪ್ರಸ್ತಾವಿಸಲಾಗಿದೆ. ಇದು ಪ್ರಾದೇಶಿಕ ಸಂಪರ್ಕವನ್ನು ಸುಧಾರಿಸುತ್ತದೆ ಮತ್ತು ಸುಸ್ಥಿರ ಆರ್ಥಿಕ ಅವಕಾಶಗಳನ್ನು ಸೃಷ್ಟಿಸುತ್ತದೆ – ಸ್ಥಿತಿಸ್ಥಾಪಕ ಮತ್ತು ಭವಿಷ್ಯಕ್ಕೆ ಸಿದ್ಧ ದೇಶ ನಿರ್ಮಣಕ್ಕೆ ಇದು ಭದ್ರ ಅಡಿಪಾಯವಾಗಿದೆ ಎಂದು ಯದುವೀರ್ ಹೇಳಿದರು.
ಒಟ್ಟಾರೆಯಾಗಿ ಪ್ರಸಕ್ತ ಸಾಲಿನ ಬಜೆಟ್, ದೂರದೃಷ್ಟಿಯ, ಯುವ ಸಮುದಾಯ ಸಬಲೀಕರಣದ, ಜನಾಭಿವೃದ್ಧಿ, ಆರ್ಥಿಕಾಭಿವೃದ್ಧಿಯ ಉತ್ತಮ ಬಜೆಟ್ ಆಗಿದೆ ಎಂದು ಸಂಸದ ಯದುವೀರ್ ಒಡೆಯರ್ ತಿಳಿಸಿದರು.
ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ಅರಸಿನಕೆರೆ ಗ್ರಾಮದಲ್ಲಿ ವಾಲ್ಮೀಕಿ ಭವನ ನಿರ್ಮಾಣವಾಗಿ ಎರಡು ವರ್ಷ ಕಳೆದಿದ್ದರೂ ಉದ್ಘಾಟನೆಯಾಗದೇ ಇರುವುದರಿಂದ ಸಾರ್ವಜನಿಕರು…
ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ರಸ್ತೆ ಹಾಳಾಗಿದ್ದು, ಮಳೆಗಾಲದಲ್ಲಿ ಗ್ರಾಮಸ್ಥರು ಓಡಾಡಲು ಸಾಧ್ಯವಾಗುತ್ತಿಲ್ಲ. ಗ್ರಾಮದ ಹೊಸ ಬಡಾವಣೆಗಳಿಗೆ…
ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಸಂಚರಿಸುವ ಕೆಲವು ಸಾರಿಗೆ ನಿಗಮದ ಬಸ್ಸುಗಳು ಹಾಗೂ ಮೈಸೂರು ಮತ್ತು, ಬೆಂಗಳೂರು ನಗರ ಸಾರಿಗೆ ಬಸ್ಸುಗಳಲ್ಲಿ…
ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳು ಸಮೀಪಿಸುತ್ತಿದ್ದು, ಅದಕ್ಕೆ ಪೂರಕವಾಗಿ ಸಂಜೆ ೭ರಿಂದ ರಾತ್ರಿ ೯ ರವರೆಗೆ ಎಲ್ಲ ಮನೆಗಳಲ್ಲೂ ಟಿವಿ…
ಗಾಲ್ಫ್ ಕ್ಲಬ್ ಆಡಳಿತ ಮಂಡಳಿಗೆ ಮೈಸೂರು ನಗರಪಾಲಿಕೆ ನೋಟಿಸ್ ಮೈಸೂರು: ನಗರದ ಜಯಚಾಮರಾಜ ಒಡೆಯರ್ ಗಾಲ್ಛ್ ಕ್ಲಬ್ ಆವರಣದಲ್ಲಿ ನಿಯ ಮಾವಳಿ…
ರಿವರ್ ರಾಫ್ಟಿಂಗ್, ಮೋಟಾರ್ ಬೋಟ್, ಬನಾನಾ ರೈಡ್, ಕಯಾಕಿಂಗ್, ಜೆಟ್ ಸ್ಕೀ ಆಯೋಜನೆ ಚಾಮರಾಜನಗರ: ಯುವಜನರಲ್ಲಿ ಸಾಹಸ, ಶೌರ್ಯ ಪ್ರವೃತ್ತಿಯನ್ನು…