ಮೈಸೂರು

2030ರ ವೇಳೆಗೆ 2 ಮಿಲಿಯನ್‌ ಉದ್ಯೋಗ ಸೃಷ್ಟಿ, ಅಭಿವೃದ್ಧಿ ಪರ ಆಯವ್ಯಯ : ಸಂಸದ ಯದುವೀರ್‌

ಮೈಸೂರು : ಯುವ ಸಮುದಾಯಕ್ಕೆ ಹಾಗೂ ತಾಂತ್ರಿಕ ಕ್ಷೇತ್ರಕ್ಕೆ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಹೆಚ್ಚು ಒತ್ತು ನೀಡುವ ಮೂಲಕ ವಿಕಸಿತ ಭಾರತ ಆಶಯಕ್ಕೆ ಪೂರಕವಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ತಿಳಿಸಿದ್ದಾರೆ.

2026-27ನೇ ಸಾಲಿನ ಕೇಂದ್ರ ಆಯವ್ಯಯ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಸಂಸದ ಯದುವೀರ್‌ ಒಡೆಯರ್‌, ಇದು ಅಭಿವೃದ್ಧಿ ಹಾಗೂ ಜನಪರ ಬಜೆಟ್‌ ಆಗಿದೆ ಎಂದರು.

ಭಾರತೀಯ ಖಗೋಳ ಭೌತಶಾಸ್ತ್ರ ಸಂಸ್ಥೆಯ ನೇತೃತ್ವದಲ್ಲಿ ಮೈಸೂರಿನಲ್ಲಿ ಮುಂಬರುವ COSMOS ತಾರಾಲಯ ಮತ್ತು ಖಗೋಳಶಾಸ್ತ್ರ ತರಬೇತಿ ಕೇಂದ್ರದಂತಹ ಯೋಜನೆಗಳು ಸಾಕಷ್ಟು ನೆರವಾಗಲಿವೆ. COSMOS, ಶಿಕ್ಷಣ, ತರಬೇತಿ, ಸಂಶೋಧನೆ ಮತ್ತು ಸಾರ್ವಜನಿಕ ತೊಡಗಿಸಿಕೊಳ್ಳುವಿಕೆಗೆ ಕೇಂದ್ರವಾಗಿ ಬೆಳೆಯಲು ಇದು ನೆರವಾಗಲಿದೆ. ಮುಂದಿನ ಪೀಳಿಗೆಯ ವಿಜ್ಞಾನಿಗಳಿಗೆ ಸ್ಫೂರ್ತಿ ನೀಡಲು ಮತ್ತು ವಿಕಸಿತ ಭಾರತ 2047 ರ ಹಾದಿಯಲ್ಲಿ ದೇಶದ ವೈಜ್ಞಾನಿಕ ಸಾಮರ್ಥ್ಯವನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಇದು ಬಜೆಟ್‌ನಲ್ಲಿ ಮಹತ್ವದ ಅಂಶವಾಗಿದೆ ಎಂದರು.

ಹಣಕಾಸಿನ ಶಿಸ್ತು, ಆರ್ಥಿಕ ಸಮತೋಲನ ಮೂಲಸೌಕರ್ಯದಲ್ಲಿ ದಾಖಲೆಯ ಸಾರ್ವಜನಿಕ ಹೂಡಿಕೆ, ಅರೆವಾಹಕಗಳು, ಬಯೋಫಾರ್ಮಾ ಮತ್ತು ಎಲೆಕ್ಟ್ರಾನಿಕ್ಸ್ ಉತ್ಪಾದನೆಯನ್ನು ವೇಗಗೊಳಿಸಲು 2ನೇ ಹಾಗೂ 3ನೇ ಸ್ತರದ ನಗರಗಳಿಗೂ ಯೋಜನೆಗಳನ್ನು ವಿಸ್ತರಿಸಲಾಗುತ್ತಿರುವುದು ಗಮನಾರ್ಹ ಎಂದು ಸಂಸದರು ತಿಳಿಸಿದರು.

ಶಿಕ್ಷಣದಿಂದ ಉದ್ಯೋಗಕ್ಕೆ ಮಾರ್ಗಗಳು, AVGC ಮತ್ತು ಆರೋಗ್ಯ ರಕ್ಷಣೆ, ಪ್ರವಾಸೋದ್ಯಮ ಕೌಶಲ್ಯ, ಪ್ರಾದೇಶಿಕ ಬೆಳವಣಿಗೆಯ ಕೇಂದ್ರಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಮಣೆ ಹಾಕಿದೆ ಎಂದು ಯದುವೀರ್‌ ಒಡೆಯರ್‌ ವಿವರಿಸಿದರು.

ಎಂಎಸ್‌ಎಂಇಗಳು ಭಾರತದ ಆರ್ಥಿಕತೆಯ ಬೆನ್ನೆಲುಬಾಗಿದೆ. ಸಾಲ, ತಂತ್ರಜ್ಞಾನ ಅಳವಡಿಕೆ, ಮಾರುಕಟ್ಟೆ ಸಂಪರ್ಕಗಳು ಮತ್ತು ಸುಲಭ ವ್ಯವಹಾರ ಯೋಜನೆಗಳಿಗೆ ಸಾಕಷ್ಟು ಅನುದಾನ ಒದಗಿಸಿರುವುದು ನಮ್ಮ ಸರ್ಕಾರದ ಹೆಗ್ಗಳಿಕೆ ಎಂದು ಸಂಸದರು ತಿಳಿಸಿದರು.

ಸರಕು ಸಾಗಣೆ ಕಾರಿಡಾರ್‌ಗಳು, ಒಳನಾಡಿನ ಜಲಮಾರ್ಗಗಳು ಮತ್ತು ಹೈ-ಸ್ಪೀಡ್ ರೈಲು ಸಂಪರ್ಕದ ಮೇಲೆ ಕೇಂದ್ರೀಕರಿಸುವುದರಿಂದ ಲಾಜಿಸ್ಟಿಕ್ಸ್ ಅನ್ನು ಬಲಪಡಿಸಲು ಬಜೆಟ್‌ನಲ್ಲಿ ಪ್ರಸ್ತಾವಿಸಲಾಗಿದೆ. ಇದು ಪ್ರಾದೇಶಿಕ ಸಂಪರ್ಕವನ್ನು ಸುಧಾರಿಸುತ್ತದೆ ಮತ್ತು ಸುಸ್ಥಿರ ಆರ್ಥಿಕ ಅವಕಾಶಗಳನ್ನು ಸೃಷ್ಟಿಸುತ್ತದೆ – ಸ್ಥಿತಿಸ್ಥಾಪಕ ಮತ್ತು ಭವಿಷ್ಯಕ್ಕೆ ಸಿದ್ಧ ದೇಶ ನಿರ್ಮಣಕ್ಕೆ ಇದು ಭದ್ರ ಅಡಿಪಾಯವಾಗಿದೆ ಎಂದು ಯದುವೀರ್‌ ಹೇಳಿದರು.

ಒಟ್ಟಾರೆಯಾಗಿ ಪ್ರಸಕ್ತ ಸಾಲಿನ ಬಜೆಟ್‌, ದೂರದೃಷ್ಟಿಯ, ಯುವ ಸಮುದಾಯ ಸಬಲೀಕರಣದ, ಜನಾಭಿವೃದ್ಧಿ, ಆರ್ಥಿಕಾಭಿವೃದ್ಧಿಯ ಉತ್ತಮ ಬಜೆಟ್‌ ಆಗಿದೆ ಎಂದು ಸಂಸದ ಯದುವೀರ್‌ ಒಡೆಯರ್‌ ತಿಳಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

13 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

13 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

13 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

13 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

13 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

16 hours ago