ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ ಚಿರತೆ ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಗುರುವಾರ ಸಂಜೆ ನಡೆದಿದೆ.
ಮೈಸೂರು – ಮಳವಳ್ಳಿ ಮುಖ್ಯರಸ್ತೆಯನ್ನು ಎರಡು ವರ್ಷದ ಹೆಣ್ಣು ಚಿರತೆ ದಾಟುತ್ತಿದ್ದ ವೇಳೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಚಿರತೆ ಸ್ಥಳದಲ್ಲೇ ಸಾವನ್ನಪ್ಪಿದೆ.
ದ್ವಿಚಕ್ರವಾಹನದ ಸವಾರರಿಬ್ಬರಿಗೂ ತೀವ್ರ ಗಾಯಗಳಾಗಿದ್ದು ಬನ್ನೂರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿದ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಆಸ್ಪತ್ರೆಗೆ ಕಳಿಸಿಕೊಡಲಾಗಿದೆ ಎಂದು ಬಲ್ಲಮೂಲಗಳಿಂದ ತಿಳಿದು ಬಂದಿದೆ.
ಅರಣ್ಯ ಅಧಿಕಾರಿ ಮಂಜುನಾಥ್ ರವರು ಆಂದೋಲನೊಂದಿಗೆ ಮಾತನಾಡಿ ಅಪಘಾತದ ಸ್ಥಳಕ್ಕೆ ಭೇಟಿ ನೀಡಿ, ಹೆಣ್ಣು ಚಿರತೆ ಸಾವದಪ್ಪಿದ್ದು, ತಮ್ಮ ವಶಕ್ಕೆ ಪಡೆಯಲಾಗಿದೆ, ಶುಕ್ರವಾರ ಮರಣೋತ್ತರ ಪರೀಕ್ಷೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಸಾರ್ಥಕ ಬದುಕಿನ ಸಾಧಕ! ಗಹನ ಆರ್ಥಿಕ ಚಿಂತನೆಗಳನು ಎಳೆಎಳೆಯಾಗಿ ಬಿಡಿಸಿ ನೀಡಿದ ನಾಡ ಅಪ್ಪಟ ಆರ್ಥಿಕ ಚಿಂತಕ! ಶಿಷ್ಯರ ಮನದ…
ತೆಲಂಗಾಣದಲ್ಲಿ ೩೦,೦೦೦ ಕೆ.ಜಿ. ನಕಲಿ ಮಸಾಲೆ ಜಪ್ತಿಯಾಗಿರುವುದು ಕೇವಲ ಎಚ್ಚರಿಕೆಯಲ್ಲ ನಮಗಿದು ನೇರ ಬೆದರಿಕೆ! ಮಸಾಲೆ, ಹಾಲು, ಎಣ್ಣೆ ಹಾಗೂ…
ಮೈಸೂರು ಮಹಾನಗರ ಪಾಲಿಕೆಯು ಹೊರಾಂಗಣ ಸಂಗೀತ ವಾದ್ಯಗಳ ಜೋಡಣೆ ಎಂಬ ಹೆಸರಿನಲ್ಲಿ ಉದ್ಯಾನವನಗಳಲ್ಲಿ ಸಂಗೀತ ವಾದ್ಯಗಳನ್ನು ಜೋಡಿಸುವ ವಿನೂತನ ಪ್ರಯೋಗವನ್ನು…
ಶಿವಾಜಿ ಗಣೇಶನ್ ಅವರ ವಾರದ ಅಂಕಣ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ದೇಶದಲ್ಲಿ ದಿಢೀರನೆ ಹುಟ್ಟಿಕೊಂಡ ಕಾಕ್ರೋಚ್ ಜನತಾ…
ಬಿ.ಎಸ್.ವಿನಯ್ ಇಲ್ಲಿಯವರೆಗೆ ನಮ್ಮಂತಹ ಅಂಕಲ್ -ಆಂಟಿಗಳು ಜೆನ್ ಝೀಗಳ ಬಗ್ಗೆ ಒಳ್ಳೆಯ ಮಾತಾಡಿದ್ದಕ್ಕಿಂತ ಮೂಗು ಮುರಿದದ್ದೇ ಹೆಚ್ಚು. ಈ ಹುಡುಗರಿಗೆ…
ಸ್ವಾಮಿ ಪೊನ್ನಾಚಿ ನಾನು ಸಾಹಿತ್ಯವನ್ನು ಗಂಭೀರವಾಗಿ ಓದಿಕೊಳ್ಳುವ ಕಾಲಕ್ಕೆ ಹೆಚ್ಚು ಕಡಿಮೆ ಚಳವಳಿಗಳ ಕಾವು ನಿಂತೇ ಹೋಗಿತ್ತು. ಜೋರು ಗಾಳಿ…