ಮೈಸೂರು

ಕಾಡಿನಿಂದ ಹೊರಬಂದ 20 ಹುಲಿಗಳು ; ಕಾಡಂಚಿನ ಜನರಲ್ಲಿ ಹೆಚ್ಚಿದ ಆತಂಕ

ಮೈಸೂರು : ಹುಲಿ-ಮಾನವ ಸಂಘರ್ಷ ತಡೆಗೆ ಅರಣ್ಯ ಇಲಾಖೆ ಹಗಲು-ರಾತ್ರಿ ಎನ್ನದೆ ಕೆಲಸ ಮಾಡುತ್ತಿರುವುದರ ನಡುವೆಯೂ ಕಾಡಿನಿಂದ ನಾಡಿಗೆ 20 ಗಳು ಬಂದಿರುವ ಸ್ಫೋಟಕ ಮಾಹಿತಿ ಹೊರ ಬಿದ್ದಿದೆ.

ಜಿಲ್ಲೆಯಲ್ಲಿ ನಿರಂತರ ಹುಲಿ ದಾಳಿಯಿಂದ ಜನರು ಬೆಚ್ಚಿ ಬಿದ್ದಿರುವ ಸಂದರ್ಭದಲ್ಲಿ ಅಧಿಕಾರಿಗಳು ಈ ವಿಚಾರವನ್ನು ಹೊರ ಹಾಕಿರುವುದು ಕಾಡಂಚಿನ ಗ್ರಾಮಗಳ ಜನರಲ್ಲಿ ಮತ್ತಷ್ಟು ಆತಂಕವನ್ನುಂಟು ಮಾಡಿಸಿದೆ. ಬಂಡೀಪುರ, ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯಪ್ರದೇಶದಲ್ಲಿ ಹುಲಿಗಳ ಸಂಖ್ಯೆಹೆಚ್ಚಾಗಿರುವುದೇ ಹುಲಿಗಳ ದಾಳಿ ಹೆಚ್ಚಲು ಕಾರಣವಾಗಿದೆ.

ಹುಲಿಗಳ ಸಂತತಿ ಹೆಚ್ಚಳವಾಗಿರುವ ಕಾರಣ ಸೂಕ್ತ ನೆಲೆಗಾಗಿ ಹುಡುಕಾಡುತ್ತಿವೆ. ನೆಲೆಯನ್ನು ಕಂಡುಕೊಳ್ಳಲು ಪರದಾಡುವಾಗ ಅರಣ್ಯದಂಚಿಗೆ ಬರಲು ಸಾಧ್ಯವಾಗುತ್ತಿದೆ. ಚಳಿಗಾಲ ಹುಲಿಗಳ ಮಿಲನದ ಸಮಯವೂ ಆಗಿರುವುದರಿಂದ ಸಂಗಾತಿಯನ್ನು ಹುಡುಕಿಕೊಂಡು ಜನವಸತಿ ಪ್ರದೇಶಗಳತ್ತ ಬರುತ್ತಿವೆ ಎಂದು ಅರಣ್ಯಇಲಾಖೆ ಅಧಿಕಾರಿಗಳು ಹೇಳುತ್ತಾರೆ.

ಇದನ್ನು ಓದಿ: ಹುಲಿ ದಾಳಿಯಿಂದ ತಪ್ಪಿಸಲು ಫೇಸ್‌ ಮಾಸ್ಕ್‌ ಮೊರೆ ಹೋದ ಅರಣ್ಯ ಇಲಾಖೆ 

ಕಾಡಿನಿಂದ ನಾಡಿನತ್ತ ಮುಖ ಮಾಡುವಾಗ ತನಗೆ ಎದುರಾಗುವ ಮನುಷ್ಯನಿಂದ ಅಪಾಯವಿದೆ ಎಂದು ಭಾವಿಸಿ ದಾಳಿಗೆ ಮುಂದಾಗುತ್ತಿರುವ ಹುಲಿಗಳನ್ನು ಸೆರೆ ಹಿಡಿಯಲು ನಿರಂತರ ಕಾರ್ಯಚರಣೆನಡೆಸುತ್ತಿರುವ ಅರಣ್ಯ ಇಲಾಖೆ ಸಿಬ್ಬಂದಿ, ಅಧಿಕಾರಿಗಳು ಸೆರೆ ಹಿಡಿದ ಹುಲಿಗಳು ಮೈಸೂರಿನ ಕೂರ್ಗಳ್ಳಿಯಲ್ಲಿರುವ ವನ್ಯ ಪ್ರಾಣಿಗಳ ಪುನರ್ವಸತಿ ಕೇಂದ್ರ ಹಾಗೂ ಬೆಂಗಳೂರಿನ ಬನ್ನೇರುಘಟ್ಟ ಉದ್ಯಾನವನಕ್ಕೆ ರವಾನೆ ಮಾಡುತ್ತಿದ್ದಾರೆ.

ಒಂದು ಅಂದಾಜಿನ ಪ್ರಕಾರ ಸುವಾರು 20ಹುಲಿಗಳು ಕಾಡಿನಿಂದ ಹೊರಬಂದು ನಾಡಿನಲ್ಲಿ ಅಲೆದಾಡುತ್ತಿರುವ ಕುರಿತು ಮಾಹಿತಿ ದೊರೆತಿದ್ದು, ಎಚ್.ಡಿ. ಕೋಟೆ ಭಾಗದಲ್ಲಿ 8 ಮೈಸೂರಿನ ಆಸುಪಾಸಿನಲ್ಲಿ 5 ಹುಲಿಗಳು ಓಡಾಡುತ್ತಿವೆ. ಇದರ ಜೊತೆಗೆ ನಂಜನಗೂಡು, ಹುಣಸೂರು ಭಾಗವು ಸೇರಿದಂತೆ ಸುವಾರು 20ಹುಲಿಗಳು ಅಡ್ಡಾಡುತ್ತಿವೆ. ಜನವಸತಿ ಪ್ರದೇಶದ ಆಸುಪಾಸಿನಲ್ಲಿ ಅಲೆದಾಡುತ್ತಿರುವ ಹುಲಿಗಳ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಮೈಸೂರು ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪರಮೇಶ್ ಹೇಳಿದರು.

ಅತ್ಯಾಧುನಿಕ ತಂತ್ರಜ್ಞಾನ ಬಳಸಿಕೊಂಡು ಹುಲಿಗಳನ್ನು ಸೆರೆ ಹಿಡಿುುಂವ ಕಾರ್ಯಾಚರಣೆ ಮುಂದುವರಿಸಲಾಗಿದ್ದು, ಡ್ರೋನ್ ಕ್ಯಾಮರಾ ಮೂಲಕ ಹುಲಿಗಳ ಚಲನವಲನಗಳ ಮೇಲೆ ತೀವ್ರ ನಿಗಾ ಇಡುವುದಲ್ಲದೆ, ಜನರಿಗೆ ಜಾಗೃತಿ ಮೂಡಿಸುವ ಮೂಲಕವೂ ಮನವರಿಕೆ ಮಾಡಲಾಗುತ್ತಿದೆ. ಹಲವೆಡೆ ಧ್ವನಿವರ್ಧಕದ ಮೂಲಕ ಜನರಿಗೆ ಎಚ್ಚರಿಕೆಯಸಂದೇಶ ರವಾನೆ. ಬೆಳೆ ಕಟಾವು ವಾಡುವ ರೈತರಿಗೆ ಸೂಕ್ತ ರಕ್ಷಣೆ ನೀಡುವುದರಲ್ಲೂ ನಿರತರಾಗಿದ್ದೇವೆ. ಭೀಮ, ಧನಂಜಯ ಸೇರಿದಂತೆ ನುರಿತ ಸಾಕಾನೆಗಳ ನೆರವಿನಿಂದಲೂ ಹುಲಿಗಳನ್ನು ಸೆರೆ ಹಿಡಿಯಲು ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

 

ಆಂದೋಲನ ಡೆಸ್ಕ್

Recent Posts

ಆಸಕ್ತಿಗೆ ಅನುಗುಣವಾಗಿ ಉಚಿತ ಕೌಶಲ್ಯ ತರಬೇತಿ ನೀಡಿ: ಡಾ.ಕುಮಾರ

ಮಂಡ್ಯ: ಯುವಕ-ಯುವತಿಯರಿಗೆ ಆಸಕ್ತಿಯ ಕ್ಷೇತ್ರದಲ್ಲಿ ಉದ್ಯೋಗ ಮಾಡಲು ಉಚಿತ ಕೌಶಲ್ಯ ತರಬೇತಿ ಹಾಗೂ ಸ್ವಉದ್ಯೋಗ ನೀಡಲು ಮಾರ್ಗದರ್ಶನ ನೀಡಲು ಅಗತ್ಯ…

1 hour ago

ಜನರು ಹೆಚ್ಚು ಹೆಚ್ಚು ಗ್ಯಾಸ್‌ ಬುಕ್‌ ಮಾಡಬೇಡಿ: ಸಚಿವ ಕೆ.ಎಚ್.ಮುನಿಯಪ್ಪ ಮನವಿ

ಬೆಂಗಳೂರು: ರಾಜ್ಯದಲ್ಲಿ ಗ್ಯಾಸ್‌ ಸಿಲಿಂಡರ್‌ ಅಭಾವವಿದ್ದು, ಪರಿಸ್ಥಿತಿ ಗಂಭೀರವಾಗಿದೆ ಎಂದು ಆಹಾರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಮನವಿ ಮಾಡಿದ್ದಾರೆ. ಈ…

1 hour ago

ಯುದ್ಧದ ನಡುವೆಯೇ ಭಾರತಕ್ಕೆ ಗುಡ್‌ನ್ಯೂಸ್: 45,000 ಮೆಟ್ರಿಕ್‌ ಟನ್‌ ಎಲ್‌ಪಿಜಿ ಹೊತ್ತು ತಂದ ಹಡಗು

ಅಹಮದಾಬಾದ್:‌ 45,000 ಮೆಟ್ರಿಕ್‌ ಟನ್‌ ಎಲ್‌ಪಿಜಿ ಹೊತ್ತ ಶಿವಾಲಿಕ್‌ ಹಡಗು ಗುಜರಾತ್‌ನ ಮುಂದ್ರಾ ಬಂದರಿಗೆ ಬಂದು ತಲುಪಲಿದೆ. ಈ ಬಗ್ಗೆ…

2 hours ago

110 ಅಡಿಗೆ ಇಳಿದ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ: ಕುಡಿಯುವ ನೀರಿಗಿಲ್ಲ ತೊಂದರೆ

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ರೈತರ ಜೀವನಾಡಿ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 110.44 ಅಡಿಗೆ ಇಳಿದಿದೆ. ಈ ಬಗ್ಗೆ…

2 hours ago

ರಾಜ್ಯಾದ್ಯಂತ ಮಾರ್ಚ್.‌18ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ

ಬೆಂಗಳೂರು: ಮಾರ್ಚ್.‌18ರಿಂದ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಪ್ರಾರಂಭವಾಗಲಿವೆ. ಪರೀಕ್ಷಾ ಅಕ್ರಮಗಳನ್ನು ತಡೆಯಲು ಮತ್ತು ಪಾರದರ್ಶಕತೆ ಕಾಪಾಡಲು ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಬಿಡುಗಡೆ…

3 hours ago

ನಾನಿನ್ನೂ ಬದುಕಿದ್ದೇನೆ: ಕ್ಯಾಮರಾ ಮುಂದೆ ಪ್ರತ್ಯಕ್ಷರಾದ ಇಸ್ರೇಲ್‌ ಪ್ರಧಾನಿ

ಜೆರುಸೇಲಂ: ನಾನಿನ್ನೂ ಬದುಕಿದ್ದೇನೆ ಎಂದು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಹೇಳಿದ್ದಾರೆ. ಸಾವಿನ ವದಂತಿಗಳ ನಡುವೆ ವಿಡಿಯೋದಲ್ಲಿ ಕಾಣಿಸಿಕೊಂಡು ಸಂದೇಶ…

3 hours ago