ಮೈಸೂರು : ಹುಲಿ-ಮಾನವ ಸಂಘರ್ಷ ತಡೆಗೆ ಅರಣ್ಯ ಇಲಾಖೆ ಹಗಲು-ರಾತ್ರಿ ಎನ್ನದೆ ಕೆಲಸ ಮಾಡುತ್ತಿರುವುದರ ನಡುವೆಯೂ ಕಾಡಿನಿಂದ ನಾಡಿಗೆ 20 ಗಳು ಬಂದಿರುವ ಸ್ಫೋಟಕ ಮಾಹಿತಿ ಹೊರ ಬಿದ್ದಿದೆ.
ಜಿಲ್ಲೆಯಲ್ಲಿ ನಿರಂತರ ಹುಲಿ ದಾಳಿಯಿಂದ ಜನರು ಬೆಚ್ಚಿ ಬಿದ್ದಿರುವ ಸಂದರ್ಭದಲ್ಲಿ ಅಧಿಕಾರಿಗಳು ಈ ವಿಚಾರವನ್ನು ಹೊರ ಹಾಕಿರುವುದು ಕಾಡಂಚಿನ ಗ್ರಾಮಗಳ ಜನರಲ್ಲಿ ಮತ್ತಷ್ಟು ಆತಂಕವನ್ನುಂಟು ಮಾಡಿಸಿದೆ. ಬಂಡೀಪುರ, ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯಪ್ರದೇಶದಲ್ಲಿ ಹುಲಿಗಳ ಸಂಖ್ಯೆಹೆಚ್ಚಾಗಿರುವುದೇ ಹುಲಿಗಳ ದಾಳಿ ಹೆಚ್ಚಲು ಕಾರಣವಾಗಿದೆ.
ಹುಲಿಗಳ ಸಂತತಿ ಹೆಚ್ಚಳವಾಗಿರುವ ಕಾರಣ ಸೂಕ್ತ ನೆಲೆಗಾಗಿ ಹುಡುಕಾಡುತ್ತಿವೆ. ನೆಲೆಯನ್ನು ಕಂಡುಕೊಳ್ಳಲು ಪರದಾಡುವಾಗ ಅರಣ್ಯದಂಚಿಗೆ ಬರಲು ಸಾಧ್ಯವಾಗುತ್ತಿದೆ. ಚಳಿಗಾಲ ಹುಲಿಗಳ ಮಿಲನದ ಸಮಯವೂ ಆಗಿರುವುದರಿಂದ ಸಂಗಾತಿಯನ್ನು ಹುಡುಕಿಕೊಂಡು ಜನವಸತಿ ಪ್ರದೇಶಗಳತ್ತ ಬರುತ್ತಿವೆ ಎಂದು ಅರಣ್ಯಇಲಾಖೆ ಅಧಿಕಾರಿಗಳು ಹೇಳುತ್ತಾರೆ.
ಇದನ್ನು ಓದಿ: ಹುಲಿ ದಾಳಿಯಿಂದ ತಪ್ಪಿಸಲು ಫೇಸ್ ಮಾಸ್ಕ್ ಮೊರೆ ಹೋದ ಅರಣ್ಯ ಇಲಾಖೆ
ಕಾಡಿನಿಂದ ನಾಡಿನತ್ತ ಮುಖ ಮಾಡುವಾಗ ತನಗೆ ಎದುರಾಗುವ ಮನುಷ್ಯನಿಂದ ಅಪಾಯವಿದೆ ಎಂದು ಭಾವಿಸಿ ದಾಳಿಗೆ ಮುಂದಾಗುತ್ತಿರುವ ಹುಲಿಗಳನ್ನು ಸೆರೆ ಹಿಡಿಯಲು ನಿರಂತರ ಕಾರ್ಯಚರಣೆನಡೆಸುತ್ತಿರುವ ಅರಣ್ಯ ಇಲಾಖೆ ಸಿಬ್ಬಂದಿ, ಅಧಿಕಾರಿಗಳು ಸೆರೆ ಹಿಡಿದ ಹುಲಿಗಳು ಮೈಸೂರಿನ ಕೂರ್ಗಳ್ಳಿಯಲ್ಲಿರುವ ವನ್ಯ ಪ್ರಾಣಿಗಳ ಪುನರ್ವಸತಿ ಕೇಂದ್ರ ಹಾಗೂ ಬೆಂಗಳೂರಿನ ಬನ್ನೇರುಘಟ್ಟ ಉದ್ಯಾನವನಕ್ಕೆ ರವಾನೆ ಮಾಡುತ್ತಿದ್ದಾರೆ.
ಒಂದು ಅಂದಾಜಿನ ಪ್ರಕಾರ ಸುವಾರು 20ಹುಲಿಗಳು ಕಾಡಿನಿಂದ ಹೊರಬಂದು ನಾಡಿನಲ್ಲಿ ಅಲೆದಾಡುತ್ತಿರುವ ಕುರಿತು ಮಾಹಿತಿ ದೊರೆತಿದ್ದು, ಎಚ್.ಡಿ. ಕೋಟೆ ಭಾಗದಲ್ಲಿ 8 ಮೈಸೂರಿನ ಆಸುಪಾಸಿನಲ್ಲಿ 5 ಹುಲಿಗಳು ಓಡಾಡುತ್ತಿವೆ. ಇದರ ಜೊತೆಗೆ ನಂಜನಗೂಡು, ಹುಣಸೂರು ಭಾಗವು ಸೇರಿದಂತೆ ಸುವಾರು 20ಹುಲಿಗಳು ಅಡ್ಡಾಡುತ್ತಿವೆ. ಜನವಸತಿ ಪ್ರದೇಶದ ಆಸುಪಾಸಿನಲ್ಲಿ ಅಲೆದಾಡುತ್ತಿರುವ ಹುಲಿಗಳ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಮೈಸೂರು ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪರಮೇಶ್ ಹೇಳಿದರು.
ಅತ್ಯಾಧುನಿಕ ತಂತ್ರಜ್ಞಾನ ಬಳಸಿಕೊಂಡು ಹುಲಿಗಳನ್ನು ಸೆರೆ ಹಿಡಿುುಂವ ಕಾರ್ಯಾಚರಣೆ ಮುಂದುವರಿಸಲಾಗಿದ್ದು, ಡ್ರೋನ್ ಕ್ಯಾಮರಾ ಮೂಲಕ ಹುಲಿಗಳ ಚಲನವಲನಗಳ ಮೇಲೆ ತೀವ್ರ ನಿಗಾ ಇಡುವುದಲ್ಲದೆ, ಜನರಿಗೆ ಜಾಗೃತಿ ಮೂಡಿಸುವ ಮೂಲಕವೂ ಮನವರಿಕೆ ಮಾಡಲಾಗುತ್ತಿದೆ. ಹಲವೆಡೆ ಧ್ವನಿವರ್ಧಕದ ಮೂಲಕ ಜನರಿಗೆ ಎಚ್ಚರಿಕೆಯಸಂದೇಶ ರವಾನೆ. ಬೆಳೆ ಕಟಾವು ವಾಡುವ ರೈತರಿಗೆ ಸೂಕ್ತ ರಕ್ಷಣೆ ನೀಡುವುದರಲ್ಲೂ ನಿರತರಾಗಿದ್ದೇವೆ. ಭೀಮ, ಧನಂಜಯ ಸೇರಿದಂತೆ ನುರಿತ ಸಾಕಾನೆಗಳ ನೆರವಿನಿಂದಲೂ ಹುಲಿಗಳನ್ನು ಸೆರೆ ಹಿಡಿಯಲು ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ನೊಟೀಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ…
ಎಚ್.ಡಿ.ಕೋಟೆ: ಬಸ್ ವ್ಯವಸ್ಥೆ ಇಲ್ಲದೇ ಶಾಲಾ ವಿದ್ಯಾರ್ಥಿಗಳು ಪರದಾಟ ನಡೆಸುತ್ತಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ…
ಮಂಡ್ಯ: ವಿಸಿ ಫಾರ್ಮ್ನ ಕೃಷಿ ಮೇಳದ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಶ್ರೀಗಳ ಸಮ್ಮುಖದಲ್ಲೇ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ.…
ಬೆಂಗಳೂರು: ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ವೈಫಲ್ಯಗಳ ವಿರುದ್ಧ ಕಾಂಗ್ರೆಸ್ ಶಾಸಕರೇ ಅವಿಶ್ವಾಸ ನಿರ್ಣಯ ಮಂಡಿಸಿದರೂ ಅಚ್ಚರಿ ಇಲ್ಲ ಎಂದು…
ಹುಣಸೂರು: ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಗುರುಪುರದ ಬಳಿಯ ಜಮೀನೊಂದರಲ್ಲಿ ಓಡಾಡುತ್ತಿದ್ದ ಒಂದು ವರ್ಷದ ಹುಲಿ ಮರಿಯನ್ನು ಅರಣ್ಯಾಧಿಕಾರಿಗಳು ಸೆರೆ…
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್ ನೀಡಿದೆ. ಆ ಮೂಲಕ ನಮಗೆ…