ಮೈಸೂರು : ಹುಲಿ-ಮಾನವ ಸಂಘರ್ಷ ತಡೆಗೆ ಅರಣ್ಯ ಇಲಾಖೆ ಹಗಲು-ರಾತ್ರಿ ಎನ್ನದೆ ಕೆಲಸ ಮಾಡುತ್ತಿರುವುದರ ನಡುವೆಯೂ ಕಾಡಿನಿಂದ ನಾಡಿಗೆ 20 ಗಳು ಬಂದಿರುವ ಸ್ಫೋಟಕ ಮಾಹಿತಿ ಹೊರ ಬಿದ್ದಿದೆ.
ಜಿಲ್ಲೆಯಲ್ಲಿ ನಿರಂತರ ಹುಲಿ ದಾಳಿಯಿಂದ ಜನರು ಬೆಚ್ಚಿ ಬಿದ್ದಿರುವ ಸಂದರ್ಭದಲ್ಲಿ ಅಧಿಕಾರಿಗಳು ಈ ವಿಚಾರವನ್ನು ಹೊರ ಹಾಕಿರುವುದು ಕಾಡಂಚಿನ ಗ್ರಾಮಗಳ ಜನರಲ್ಲಿ ಮತ್ತಷ್ಟು ಆತಂಕವನ್ನುಂಟು ಮಾಡಿಸಿದೆ. ಬಂಡೀಪುರ, ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯಪ್ರದೇಶದಲ್ಲಿ ಹುಲಿಗಳ ಸಂಖ್ಯೆಹೆಚ್ಚಾಗಿರುವುದೇ ಹುಲಿಗಳ ದಾಳಿ ಹೆಚ್ಚಲು ಕಾರಣವಾಗಿದೆ.
ಹುಲಿಗಳ ಸಂತತಿ ಹೆಚ್ಚಳವಾಗಿರುವ ಕಾರಣ ಸೂಕ್ತ ನೆಲೆಗಾಗಿ ಹುಡುಕಾಡುತ್ತಿವೆ. ನೆಲೆಯನ್ನು ಕಂಡುಕೊಳ್ಳಲು ಪರದಾಡುವಾಗ ಅರಣ್ಯದಂಚಿಗೆ ಬರಲು ಸಾಧ್ಯವಾಗುತ್ತಿದೆ. ಚಳಿಗಾಲ ಹುಲಿಗಳ ಮಿಲನದ ಸಮಯವೂ ಆಗಿರುವುದರಿಂದ ಸಂಗಾತಿಯನ್ನು ಹುಡುಕಿಕೊಂಡು ಜನವಸತಿ ಪ್ರದೇಶಗಳತ್ತ ಬರುತ್ತಿವೆ ಎಂದು ಅರಣ್ಯಇಲಾಖೆ ಅಧಿಕಾರಿಗಳು ಹೇಳುತ್ತಾರೆ.
ಇದನ್ನು ಓದಿ: ಹುಲಿ ದಾಳಿಯಿಂದ ತಪ್ಪಿಸಲು ಫೇಸ್ ಮಾಸ್ಕ್ ಮೊರೆ ಹೋದ ಅರಣ್ಯ ಇಲಾಖೆ
ಕಾಡಿನಿಂದ ನಾಡಿನತ್ತ ಮುಖ ಮಾಡುವಾಗ ತನಗೆ ಎದುರಾಗುವ ಮನುಷ್ಯನಿಂದ ಅಪಾಯವಿದೆ ಎಂದು ಭಾವಿಸಿ ದಾಳಿಗೆ ಮುಂದಾಗುತ್ತಿರುವ ಹುಲಿಗಳನ್ನು ಸೆರೆ ಹಿಡಿಯಲು ನಿರಂತರ ಕಾರ್ಯಚರಣೆನಡೆಸುತ್ತಿರುವ ಅರಣ್ಯ ಇಲಾಖೆ ಸಿಬ್ಬಂದಿ, ಅಧಿಕಾರಿಗಳು ಸೆರೆ ಹಿಡಿದ ಹುಲಿಗಳು ಮೈಸೂರಿನ ಕೂರ್ಗಳ್ಳಿಯಲ್ಲಿರುವ ವನ್ಯ ಪ್ರಾಣಿಗಳ ಪುನರ್ವಸತಿ ಕೇಂದ್ರ ಹಾಗೂ ಬೆಂಗಳೂರಿನ ಬನ್ನೇರುಘಟ್ಟ ಉದ್ಯಾನವನಕ್ಕೆ ರವಾನೆ ಮಾಡುತ್ತಿದ್ದಾರೆ.
ಒಂದು ಅಂದಾಜಿನ ಪ್ರಕಾರ ಸುವಾರು 20ಹುಲಿಗಳು ಕಾಡಿನಿಂದ ಹೊರಬಂದು ನಾಡಿನಲ್ಲಿ ಅಲೆದಾಡುತ್ತಿರುವ ಕುರಿತು ಮಾಹಿತಿ ದೊರೆತಿದ್ದು, ಎಚ್.ಡಿ. ಕೋಟೆ ಭಾಗದಲ್ಲಿ 8 ಮೈಸೂರಿನ ಆಸುಪಾಸಿನಲ್ಲಿ 5 ಹುಲಿಗಳು ಓಡಾಡುತ್ತಿವೆ. ಇದರ ಜೊತೆಗೆ ನಂಜನಗೂಡು, ಹುಣಸೂರು ಭಾಗವು ಸೇರಿದಂತೆ ಸುವಾರು 20ಹುಲಿಗಳು ಅಡ್ಡಾಡುತ್ತಿವೆ. ಜನವಸತಿ ಪ್ರದೇಶದ ಆಸುಪಾಸಿನಲ್ಲಿ ಅಲೆದಾಡುತ್ತಿರುವ ಹುಲಿಗಳ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಮೈಸೂರು ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪರಮೇಶ್ ಹೇಳಿದರು.
ಅತ್ಯಾಧುನಿಕ ತಂತ್ರಜ್ಞಾನ ಬಳಸಿಕೊಂಡು ಹುಲಿಗಳನ್ನು ಸೆರೆ ಹಿಡಿುುಂವ ಕಾರ್ಯಾಚರಣೆ ಮುಂದುವರಿಸಲಾಗಿದ್ದು, ಡ್ರೋನ್ ಕ್ಯಾಮರಾ ಮೂಲಕ ಹುಲಿಗಳ ಚಲನವಲನಗಳ ಮೇಲೆ ತೀವ್ರ ನಿಗಾ ಇಡುವುದಲ್ಲದೆ, ಜನರಿಗೆ ಜಾಗೃತಿ ಮೂಡಿಸುವ ಮೂಲಕವೂ ಮನವರಿಕೆ ಮಾಡಲಾಗುತ್ತಿದೆ. ಹಲವೆಡೆ ಧ್ವನಿವರ್ಧಕದ ಮೂಲಕ ಜನರಿಗೆ ಎಚ್ಚರಿಕೆಯಸಂದೇಶ ರವಾನೆ. ಬೆಳೆ ಕಟಾವು ವಾಡುವ ರೈತರಿಗೆ ಸೂಕ್ತ ರಕ್ಷಣೆ ನೀಡುವುದರಲ್ಲೂ ನಿರತರಾಗಿದ್ದೇವೆ. ಭೀಮ, ಧನಂಜಯ ಸೇರಿದಂತೆ ನುರಿತ ಸಾಕಾನೆಗಳ ನೆರವಿನಿಂದಲೂ ಹುಲಿಗಳನ್ನು ಸೆರೆ ಹಿಡಿಯಲು ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…