ಮೈಸೂರು

25 ಕೋಟಿ ರೂ. ಮೌಲ್ಯದ ತಿಮಿಂಗಿಲದ ವಾಂತಿ ವಶ : ಕೇರಳ ಮೂಲದ ಮೂವರ ಬಂಧನ

ಮೈಸೂರು : ಕೇರಳದಿಂದ ಕಾರಿನಲ್ಲಿ ತಂದು ಮೈಸೂರಿನಲ್ಲಿ ಮಾರಾಟ ಮಾಡಲು ಯತ್ನಿಸುತ್ತಿದ್ದ, ಸುಮಾರು 25 ಕೋಟಿ ಬೆಲೆಬಾಳುವ ತಿಮಿಂಗಿಲದ ವಾಂತಿಯನ್ನು (ಅಂಬರ್ ಗ್ರೀಸ್) ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಕುರಿತಂತೆ, ಪೊಲೀಸರಿಗೆ ಮೊದಲೇ ಮಾಹಿತಿ ಇದ್ದಿದ್ದರಿಂದ ಗುಪ್ತವಾಗಿ ಕಾರ್ಯಾಚರಣೆ ನಡೆಸಿ ಕೇರಳ ಮೂಲದ ಆರೋಪಿಗಳನ್ನು ಹಾಗೂ ಅವರೊಂದಿಗಿದ್ದ ಅಂಬರ್ ಗ್ರೀಸ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಕೇರಳ ರಾಜ್ಯದ ಕೊಚ್ಚಿನ್ ಸಮುದ್ರದಿಂದ ತಿಮಿಂಗಿಲದ ಅಂಬರ್ ಗ್ರೀಸ್ ತಂದಿರುವ ಮಾಹಿತಿ ಲಭ್ಯವಾಗಿತ್ತು. ಆರೋಪಿಗಳು ಕೇರಳದಿಂದ ಈ ವಸ್ತುವನ್ನು ಮೈಸೂರಿಗೆ ತಂದು ಮಾರಾಟ ಮಾಡಲು ಯತ್ನಿಸಿದ್ದರು. ಇವರನ್ನು ಹಿಡಿಯಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಟ್ಕರ್, ಅಡಿಷಿನಲ್ ಎಸ್ಪಿ ನಂದಿನಿ ಡಿವೈಎಸ್ ಪಿ ಮಹೇಶ್ ಮಾರ್ಗದರ್ಶನದಲ್ಲಿ ತಂಡ ರಚಿಸಲಾಗಿತ್ತು. ಹೆಚ್.ಡಿ.ಕೋಟೆ ಇನ್ಸ್ ಪಕ್ಟರ್ ಶಭ್ಬೀರ್ ಹುಸೇನ್ ಮೈಸೂರು ಕ್ರೈಂಬ್ರಾಚ್ ಇನ್ಸ್ ಪೆಕ್ಟರ್ ಪುರುಷೋತ್ತಮ ಅವರಿಗೆ ತಂಡದ ನೇತೃತ್ವ ನೀಡಲಾಗಿತ್ತು.

ಹೆಚ್.ಡಿ.ಕೋಟೆ ಹ್ಯಾಂಡ್ ಪೋಸ್ಟ್ ನಲ್ಲಿ ಸಮವಸ್ತ್ರ ಧರಿಸದೆ ಸಾಧಾರಣ ವ್ಯಕ್ತಿಗಳಂತೆ ನಿಂತಿದ್ದ ಪೊಲೀಸರು, ಅಂಬರ್ ಗ್ರೀಸ್ ತುಂಬಿದ್ದ ವಾಹನ ಬರುವುದನ್ನೇ ಕಾಯುತ್ತಿದ್ದರು. ಕಾರು ಬಂದ ಕೂಡಲೇ ಮಿಂಚಿನ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ಮಾಲು ಸಮೇತ ಹಿಡಿದಿದ್ದಾರಲ್ಲದೆ ಸುಮಾರು ಒಂಭತ್ತೂವರೆ ಕೆಜಿಯಷ್ಟು, ಅಂದಾಜು 25 ಕೋಟಿ ರೂ.ಗಳಷ್ಟು ಮೌಲ್ಯದ ಅಂಬರ್ ಗ್ರೀಸ್ ಅನ್ನು ವಶಪಡಿಸಿಕೊಂಡಿದ್ದಾರೆ. ವಶಕ್ಕೆ ಪಡೆಯಲಾಗಿರುವುದು ಅಂಬರ್ ಗ್ರೀಸ್ ಎಂದು ಕರೆಯಲಾಗಿದೆ.

ಆರೋಪಿಗಳು ಯಾರು? : ಕೇರಳ ಮೂಲದ ಮೂವರು ಆರೋಪಿಗಳ ಪೈಕಿ ಇಬ್ಬರು ಹಡಗು ನಡೆಸುವ ನಾವಿಕರೆಂದು ಹೇಳಲಾಗಿದೆ. ಆರೋಪಿಗಳ ಹೆಸರುಗಳನ್ನು ಪೊಲೀಸರು ಬಹಿರಂಗಗೊಳಿಸಿಲ್ಲ. ಅಂಬರ್ ಗ್ರೀಸ್ ಗೆ ವಿದೇಶದಲ್ಲೂ ಅಪಾರವಾದ ಬೇಡಿಕೆ ಮತ್ತು ಅಧಿಕ ಬೆಲೆ ಕೂಡ ಇದೆ.

ಅಂಬರ್ ಗ್ರೀಸ್ ಗೆ ಯಾಕಿಷ್ಟು ಬೇಡಿಕೆ? : ಅಂಬರ್ ಗ್ರೀಸ್ ಎಂಬ ವಸ್ತುವು ಮೇಣದಂಥ ವಸ್ತುವಾಗಿದ್ದು, ಇದನ್ನು ಪ್ರಸಾದನ ಸಾಮಗ್ರಿಗಳ ತಯಾರಿಕೆ, ಸುಗಂಧದ್ರವ್ಯಗಳ ತಯಾರಿಕೆಯಲ್ಲಿ ಬಳಸಲಾಗುತ್ತದೆ. ಕಚ್ಚಾವಸ್ತುವಾಗಿದ್ದಾಗಲೂ ಅಂಬರ್ ಗ್ರೀಸ್ ಕೊಂಚ ಸುವಾಸನೆ ಬೀರುವಂಥದ್ದಾಗಿರುತ್ತದೆ. ಕೆಲವು ದೇಶಗಳಲ್ಲಿ ಕಾಮೋತ್ತೇಜಕ ವಸ್ತುಗಳಲ್ಲಿಯೂ ಇದನ್ನು ಬಳಸಲಾಗುತ್ತದೆ.

ಆದರೆ, ಇದು ಸಿಗುವುದು ಬಲು ಅಪರೂಪ. ಏಕೆಂದರೆ, ತಿಮಿಂಗಲಗಳು ಸಮುದ್ರದಲ್ಲಿ ವಾಂತಿ ಮಾಡಿಕೊಳ್ಳುವುದು ಅಪರೂಪ ಹಾಗೂ ಅವು ಜನಸಾಮಾನ್ಯರಿಗೆ ಸಿಗುವುದು ತುಂಬಾ ವಿರಳ. ಹಾಗಾಗಿ, ಈ ವಸ್ತುವಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆಯಿದೆ. ಆದರೆ, ಕಳ್ಳಸಾಗಣೆದಾರರು ಅಂಬರ್ ಗ್ರೀಸ್ ಗಾಗಿ ಸಮುದ್ರಗಳಿಗೆ ದಾಂಗುಡಿ ಇಡುವುದನ್ನು ತಪ್ಪಿಸಲು ಬಹುತೇಕ ದೇಶಗಳು ಇದರ ಮಾರಾಟವನ್ನು ನಿಷೇಧಿಸಿವೆ. ಹಾಗಾಗಿ, ಇದು ಕಳ್ಳಸಾಗಣೆಯಾಗುತ್ತಿದೆ.

lokesh

Recent Posts

ಮೋಟಾರ್ ವಾಹನ ಸೆಸ್ ಕೈಬಿಟ್ಟ ಮೈಸೂರು ಮಹಾನಗರ ಪಾಲಿಕೆ

ಮೈಸೂರು : ಮೈಸೂರು ಮಹಾನಗರಪಾಲಿಕೆ 2026-27ನೇ ಹಣಕಾಸು ವರ್ಷಕ್ಕೆ ಜಾರಿಗೊಳಿಸಲು ಘೋಷಿಸಿದ್ದ ಮೋಟಾರ್ ವಾಹನ ಸೆಸ್ ಅನ್ನು ರದ್ದುಗೊಳಿಸಿದೆ. ಇತ್ತೀಚಿಗೆ…

12 hours ago

ದಿಢೀರ್‌ ಕುಸಿದುಬಿದ್ದ ಲೋಕಾಯುಕ್ತ ನಿ.ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ, ಆಸ್ಪತ್ರೆಗೆ ದಾಖಲು

ಬೆಂಗಳೂರು : ಕರ್ನಾಟಕದ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರೆ ಉಂಟಾಗಿ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ…

13 hours ago

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ : ಮಾಜಿ ಸಚಿವ ಸಾ.ರಾ.ಮಹೇಶ್‌ ಹೇಳಿದಿಷ್ಟು?

ಮೈಸೂರು : ಬಟ್ಟೆ ಬ್ಯಾಗ್ ಖರೀದಿಯಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯಿಸಿದ…

13 hours ago

ಆರ್‌ಸಿಬಿ ವಿರುದ್ಧದ ಪಂದ್ಯಕ್ಕೆ ಧೋನಿ ಲಭ್ಯ?

ಬೆಂಗಳೂರು : ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಲ್ಲಿ ಹೊಸ ಆಶಾಕಿರಣ ಮೂಡಿಸಿದ್ದಾರೆ. ಸ್ನಾಯು ಸೆಳೆತದಿಂದ…

14 hours ago

24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಜೆಟ್‌ಗಳನ್ನು ಹೊಡೆದುರುಳಿಸಿದ್ದೇವೆ : ಇರಾನ್

ಟೆಹ್ರಾನ್ : ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಳೆದ 24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಸ್ಟೆಲ್ತ್…

15 hours ago

ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು : ಮುಖ್ಯಮಂತ್ರಿ ಟೀಕೆ

ಬಾಗಲಕೋಟೆ : ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.…

15 hours ago