ಮೈಸೂರು

25 ಕೋಟಿ ರೂ. ಮೌಲ್ಯದ ತಿಮಿಂಗಿಲದ ವಾಂತಿ ವಶ : ಕೇರಳ ಮೂಲದ ಮೂವರ ಬಂಧನ

ಮೈಸೂರು : ಕೇರಳದಿಂದ ಕಾರಿನಲ್ಲಿ ತಂದು ಮೈಸೂರಿನಲ್ಲಿ ಮಾರಾಟ ಮಾಡಲು ಯತ್ನಿಸುತ್ತಿದ್ದ, ಸುಮಾರು 25 ಕೋಟಿ ಬೆಲೆಬಾಳುವ ತಿಮಿಂಗಿಲದ ವಾಂತಿಯನ್ನು (ಅಂಬರ್ ಗ್ರೀಸ್) ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಕುರಿತಂತೆ, ಪೊಲೀಸರಿಗೆ ಮೊದಲೇ ಮಾಹಿತಿ ಇದ್ದಿದ್ದರಿಂದ ಗುಪ್ತವಾಗಿ ಕಾರ್ಯಾಚರಣೆ ನಡೆಸಿ ಕೇರಳ ಮೂಲದ ಆರೋಪಿಗಳನ್ನು ಹಾಗೂ ಅವರೊಂದಿಗಿದ್ದ ಅಂಬರ್ ಗ್ರೀಸ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಕೇರಳ ರಾಜ್ಯದ ಕೊಚ್ಚಿನ್ ಸಮುದ್ರದಿಂದ ತಿಮಿಂಗಿಲದ ಅಂಬರ್ ಗ್ರೀಸ್ ತಂದಿರುವ ಮಾಹಿತಿ ಲಭ್ಯವಾಗಿತ್ತು. ಆರೋಪಿಗಳು ಕೇರಳದಿಂದ ಈ ವಸ್ತುವನ್ನು ಮೈಸೂರಿಗೆ ತಂದು ಮಾರಾಟ ಮಾಡಲು ಯತ್ನಿಸಿದ್ದರು. ಇವರನ್ನು ಹಿಡಿಯಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಟ್ಕರ್, ಅಡಿಷಿನಲ್ ಎಸ್ಪಿ ನಂದಿನಿ ಡಿವೈಎಸ್ ಪಿ ಮಹೇಶ್ ಮಾರ್ಗದರ್ಶನದಲ್ಲಿ ತಂಡ ರಚಿಸಲಾಗಿತ್ತು. ಹೆಚ್.ಡಿ.ಕೋಟೆ ಇನ್ಸ್ ಪಕ್ಟರ್ ಶಭ್ಬೀರ್ ಹುಸೇನ್ ಮೈಸೂರು ಕ್ರೈಂಬ್ರಾಚ್ ಇನ್ಸ್ ಪೆಕ್ಟರ್ ಪುರುಷೋತ್ತಮ ಅವರಿಗೆ ತಂಡದ ನೇತೃತ್ವ ನೀಡಲಾಗಿತ್ತು.

ಹೆಚ್.ಡಿ.ಕೋಟೆ ಹ್ಯಾಂಡ್ ಪೋಸ್ಟ್ ನಲ್ಲಿ ಸಮವಸ್ತ್ರ ಧರಿಸದೆ ಸಾಧಾರಣ ವ್ಯಕ್ತಿಗಳಂತೆ ನಿಂತಿದ್ದ ಪೊಲೀಸರು, ಅಂಬರ್ ಗ್ರೀಸ್ ತುಂಬಿದ್ದ ವಾಹನ ಬರುವುದನ್ನೇ ಕಾಯುತ್ತಿದ್ದರು. ಕಾರು ಬಂದ ಕೂಡಲೇ ಮಿಂಚಿನ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ಮಾಲು ಸಮೇತ ಹಿಡಿದಿದ್ದಾರಲ್ಲದೆ ಸುಮಾರು ಒಂಭತ್ತೂವರೆ ಕೆಜಿಯಷ್ಟು, ಅಂದಾಜು 25 ಕೋಟಿ ರೂ.ಗಳಷ್ಟು ಮೌಲ್ಯದ ಅಂಬರ್ ಗ್ರೀಸ್ ಅನ್ನು ವಶಪಡಿಸಿಕೊಂಡಿದ್ದಾರೆ. ವಶಕ್ಕೆ ಪಡೆಯಲಾಗಿರುವುದು ಅಂಬರ್ ಗ್ರೀಸ್ ಎಂದು ಕರೆಯಲಾಗಿದೆ.

ಆರೋಪಿಗಳು ಯಾರು? : ಕೇರಳ ಮೂಲದ ಮೂವರು ಆರೋಪಿಗಳ ಪೈಕಿ ಇಬ್ಬರು ಹಡಗು ನಡೆಸುವ ನಾವಿಕರೆಂದು ಹೇಳಲಾಗಿದೆ. ಆರೋಪಿಗಳ ಹೆಸರುಗಳನ್ನು ಪೊಲೀಸರು ಬಹಿರಂಗಗೊಳಿಸಿಲ್ಲ. ಅಂಬರ್ ಗ್ರೀಸ್ ಗೆ ವಿದೇಶದಲ್ಲೂ ಅಪಾರವಾದ ಬೇಡಿಕೆ ಮತ್ತು ಅಧಿಕ ಬೆಲೆ ಕೂಡ ಇದೆ.

ಅಂಬರ್ ಗ್ರೀಸ್ ಗೆ ಯಾಕಿಷ್ಟು ಬೇಡಿಕೆ? : ಅಂಬರ್ ಗ್ರೀಸ್ ಎಂಬ ವಸ್ತುವು ಮೇಣದಂಥ ವಸ್ತುವಾಗಿದ್ದು, ಇದನ್ನು ಪ್ರಸಾದನ ಸಾಮಗ್ರಿಗಳ ತಯಾರಿಕೆ, ಸುಗಂಧದ್ರವ್ಯಗಳ ತಯಾರಿಕೆಯಲ್ಲಿ ಬಳಸಲಾಗುತ್ತದೆ. ಕಚ್ಚಾವಸ್ತುವಾಗಿದ್ದಾಗಲೂ ಅಂಬರ್ ಗ್ರೀಸ್ ಕೊಂಚ ಸುವಾಸನೆ ಬೀರುವಂಥದ್ದಾಗಿರುತ್ತದೆ. ಕೆಲವು ದೇಶಗಳಲ್ಲಿ ಕಾಮೋತ್ತೇಜಕ ವಸ್ತುಗಳಲ್ಲಿಯೂ ಇದನ್ನು ಬಳಸಲಾಗುತ್ತದೆ.

ಆದರೆ, ಇದು ಸಿಗುವುದು ಬಲು ಅಪರೂಪ. ಏಕೆಂದರೆ, ತಿಮಿಂಗಲಗಳು ಸಮುದ್ರದಲ್ಲಿ ವಾಂತಿ ಮಾಡಿಕೊಳ್ಳುವುದು ಅಪರೂಪ ಹಾಗೂ ಅವು ಜನಸಾಮಾನ್ಯರಿಗೆ ಸಿಗುವುದು ತುಂಬಾ ವಿರಳ. ಹಾಗಾಗಿ, ಈ ವಸ್ತುವಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆಯಿದೆ. ಆದರೆ, ಕಳ್ಳಸಾಗಣೆದಾರರು ಅಂಬರ್ ಗ್ರೀಸ್ ಗಾಗಿ ಸಮುದ್ರಗಳಿಗೆ ದಾಂಗುಡಿ ಇಡುವುದನ್ನು ತಪ್ಪಿಸಲು ಬಹುತೇಕ ದೇಶಗಳು ಇದರ ಮಾರಾಟವನ್ನು ನಿಷೇಧಿಸಿವೆ. ಹಾಗಾಗಿ, ಇದು ಕಳ್ಳಸಾಗಣೆಯಾಗುತ್ತಿದೆ.

lokesh

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

9 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

9 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

9 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

9 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

9 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

9 hours ago