ಮೈಸೂರು

25 ಕೋಟಿ ರೂ. ಮೌಲ್ಯದ ತಿಮಿಂಗಿಲದ ವಾಂತಿ ವಶ : ಕೇರಳ ಮೂಲದ ಮೂವರ ಬಂಧನ

ಮೈಸೂರು : ಕೇರಳದಿಂದ ಕಾರಿನಲ್ಲಿ ತಂದು ಮೈಸೂರಿನಲ್ಲಿ ಮಾರಾಟ ಮಾಡಲು ಯತ್ನಿಸುತ್ತಿದ್ದ, ಸುಮಾರು 25 ಕೋಟಿ ಬೆಲೆಬಾಳುವ ತಿಮಿಂಗಿಲದ ವಾಂತಿಯನ್ನು (ಅಂಬರ್ ಗ್ರೀಸ್) ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಕುರಿತಂತೆ, ಪೊಲೀಸರಿಗೆ ಮೊದಲೇ ಮಾಹಿತಿ ಇದ್ದಿದ್ದರಿಂದ ಗುಪ್ತವಾಗಿ ಕಾರ್ಯಾಚರಣೆ ನಡೆಸಿ ಕೇರಳ ಮೂಲದ ಆರೋಪಿಗಳನ್ನು ಹಾಗೂ ಅವರೊಂದಿಗಿದ್ದ ಅಂಬರ್ ಗ್ರೀಸ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಕೇರಳ ರಾಜ್ಯದ ಕೊಚ್ಚಿನ್ ಸಮುದ್ರದಿಂದ ತಿಮಿಂಗಿಲದ ಅಂಬರ್ ಗ್ರೀಸ್ ತಂದಿರುವ ಮಾಹಿತಿ ಲಭ್ಯವಾಗಿತ್ತು. ಆರೋಪಿಗಳು ಕೇರಳದಿಂದ ಈ ವಸ್ತುವನ್ನು ಮೈಸೂರಿಗೆ ತಂದು ಮಾರಾಟ ಮಾಡಲು ಯತ್ನಿಸಿದ್ದರು. ಇವರನ್ನು ಹಿಡಿಯಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಟ್ಕರ್, ಅಡಿಷಿನಲ್ ಎಸ್ಪಿ ನಂದಿನಿ ಡಿವೈಎಸ್ ಪಿ ಮಹೇಶ್ ಮಾರ್ಗದರ್ಶನದಲ್ಲಿ ತಂಡ ರಚಿಸಲಾಗಿತ್ತು. ಹೆಚ್.ಡಿ.ಕೋಟೆ ಇನ್ಸ್ ಪಕ್ಟರ್ ಶಭ್ಬೀರ್ ಹುಸೇನ್ ಮೈಸೂರು ಕ್ರೈಂಬ್ರಾಚ್ ಇನ್ಸ್ ಪೆಕ್ಟರ್ ಪುರುಷೋತ್ತಮ ಅವರಿಗೆ ತಂಡದ ನೇತೃತ್ವ ನೀಡಲಾಗಿತ್ತು.

ಹೆಚ್.ಡಿ.ಕೋಟೆ ಹ್ಯಾಂಡ್ ಪೋಸ್ಟ್ ನಲ್ಲಿ ಸಮವಸ್ತ್ರ ಧರಿಸದೆ ಸಾಧಾರಣ ವ್ಯಕ್ತಿಗಳಂತೆ ನಿಂತಿದ್ದ ಪೊಲೀಸರು, ಅಂಬರ್ ಗ್ರೀಸ್ ತುಂಬಿದ್ದ ವಾಹನ ಬರುವುದನ್ನೇ ಕಾಯುತ್ತಿದ್ದರು. ಕಾರು ಬಂದ ಕೂಡಲೇ ಮಿಂಚಿನ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ಮಾಲು ಸಮೇತ ಹಿಡಿದಿದ್ದಾರಲ್ಲದೆ ಸುಮಾರು ಒಂಭತ್ತೂವರೆ ಕೆಜಿಯಷ್ಟು, ಅಂದಾಜು 25 ಕೋಟಿ ರೂ.ಗಳಷ್ಟು ಮೌಲ್ಯದ ಅಂಬರ್ ಗ್ರೀಸ್ ಅನ್ನು ವಶಪಡಿಸಿಕೊಂಡಿದ್ದಾರೆ. ವಶಕ್ಕೆ ಪಡೆಯಲಾಗಿರುವುದು ಅಂಬರ್ ಗ್ರೀಸ್ ಎಂದು ಕರೆಯಲಾಗಿದೆ.

ಆರೋಪಿಗಳು ಯಾರು? : ಕೇರಳ ಮೂಲದ ಮೂವರು ಆರೋಪಿಗಳ ಪೈಕಿ ಇಬ್ಬರು ಹಡಗು ನಡೆಸುವ ನಾವಿಕರೆಂದು ಹೇಳಲಾಗಿದೆ. ಆರೋಪಿಗಳ ಹೆಸರುಗಳನ್ನು ಪೊಲೀಸರು ಬಹಿರಂಗಗೊಳಿಸಿಲ್ಲ. ಅಂಬರ್ ಗ್ರೀಸ್ ಗೆ ವಿದೇಶದಲ್ಲೂ ಅಪಾರವಾದ ಬೇಡಿಕೆ ಮತ್ತು ಅಧಿಕ ಬೆಲೆ ಕೂಡ ಇದೆ.

ಅಂಬರ್ ಗ್ರೀಸ್ ಗೆ ಯಾಕಿಷ್ಟು ಬೇಡಿಕೆ? : ಅಂಬರ್ ಗ್ರೀಸ್ ಎಂಬ ವಸ್ತುವು ಮೇಣದಂಥ ವಸ್ತುವಾಗಿದ್ದು, ಇದನ್ನು ಪ್ರಸಾದನ ಸಾಮಗ್ರಿಗಳ ತಯಾರಿಕೆ, ಸುಗಂಧದ್ರವ್ಯಗಳ ತಯಾರಿಕೆಯಲ್ಲಿ ಬಳಸಲಾಗುತ್ತದೆ. ಕಚ್ಚಾವಸ್ತುವಾಗಿದ್ದಾಗಲೂ ಅಂಬರ್ ಗ್ರೀಸ್ ಕೊಂಚ ಸುವಾಸನೆ ಬೀರುವಂಥದ್ದಾಗಿರುತ್ತದೆ. ಕೆಲವು ದೇಶಗಳಲ್ಲಿ ಕಾಮೋತ್ತೇಜಕ ವಸ್ತುಗಳಲ್ಲಿಯೂ ಇದನ್ನು ಬಳಸಲಾಗುತ್ತದೆ.

ಆದರೆ, ಇದು ಸಿಗುವುದು ಬಲು ಅಪರೂಪ. ಏಕೆಂದರೆ, ತಿಮಿಂಗಲಗಳು ಸಮುದ್ರದಲ್ಲಿ ವಾಂತಿ ಮಾಡಿಕೊಳ್ಳುವುದು ಅಪರೂಪ ಹಾಗೂ ಅವು ಜನಸಾಮಾನ್ಯರಿಗೆ ಸಿಗುವುದು ತುಂಬಾ ವಿರಳ. ಹಾಗಾಗಿ, ಈ ವಸ್ತುವಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆಯಿದೆ. ಆದರೆ, ಕಳ್ಳಸಾಗಣೆದಾರರು ಅಂಬರ್ ಗ್ರೀಸ್ ಗಾಗಿ ಸಮುದ್ರಗಳಿಗೆ ದಾಂಗುಡಿ ಇಡುವುದನ್ನು ತಪ್ಪಿಸಲು ಬಹುತೇಕ ದೇಶಗಳು ಇದರ ಮಾರಾಟವನ್ನು ನಿಷೇಧಿಸಿವೆ. ಹಾಗಾಗಿ, ಇದು ಕಳ್ಳಸಾಗಣೆಯಾಗುತ್ತಿದೆ.

lokesh

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

8 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

9 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

10 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

11 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

15 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

15 hours ago