ಮೈಸೂರು

25 ಕೋಟಿ ರೂ. ಮೌಲ್ಯದ ತಿಮಿಂಗಿಲದ ವಾಂತಿ ವಶ : ಕೇರಳ ಮೂಲದ ಮೂವರ ಬಂಧನ

ಮೈಸೂರು : ಕೇರಳದಿಂದ ಕಾರಿನಲ್ಲಿ ತಂದು ಮೈಸೂರಿನಲ್ಲಿ ಮಾರಾಟ ಮಾಡಲು ಯತ್ನಿಸುತ್ತಿದ್ದ, ಸುಮಾರು 25 ಕೋಟಿ ಬೆಲೆಬಾಳುವ ತಿಮಿಂಗಿಲದ ವಾಂತಿಯನ್ನು (ಅಂಬರ್ ಗ್ರೀಸ್) ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಕುರಿತಂತೆ, ಪೊಲೀಸರಿಗೆ ಮೊದಲೇ ಮಾಹಿತಿ ಇದ್ದಿದ್ದರಿಂದ ಗುಪ್ತವಾಗಿ ಕಾರ್ಯಾಚರಣೆ ನಡೆಸಿ ಕೇರಳ ಮೂಲದ ಆರೋಪಿಗಳನ್ನು ಹಾಗೂ ಅವರೊಂದಿಗಿದ್ದ ಅಂಬರ್ ಗ್ರೀಸ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಕೇರಳ ರಾಜ್ಯದ ಕೊಚ್ಚಿನ್ ಸಮುದ್ರದಿಂದ ತಿಮಿಂಗಿಲದ ಅಂಬರ್ ಗ್ರೀಸ್ ತಂದಿರುವ ಮಾಹಿತಿ ಲಭ್ಯವಾಗಿತ್ತು. ಆರೋಪಿಗಳು ಕೇರಳದಿಂದ ಈ ವಸ್ತುವನ್ನು ಮೈಸೂರಿಗೆ ತಂದು ಮಾರಾಟ ಮಾಡಲು ಯತ್ನಿಸಿದ್ದರು. ಇವರನ್ನು ಹಿಡಿಯಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಟ್ಕರ್, ಅಡಿಷಿನಲ್ ಎಸ್ಪಿ ನಂದಿನಿ ಡಿವೈಎಸ್ ಪಿ ಮಹೇಶ್ ಮಾರ್ಗದರ್ಶನದಲ್ಲಿ ತಂಡ ರಚಿಸಲಾಗಿತ್ತು. ಹೆಚ್.ಡಿ.ಕೋಟೆ ಇನ್ಸ್ ಪಕ್ಟರ್ ಶಭ್ಬೀರ್ ಹುಸೇನ್ ಮೈಸೂರು ಕ್ರೈಂಬ್ರಾಚ್ ಇನ್ಸ್ ಪೆಕ್ಟರ್ ಪುರುಷೋತ್ತಮ ಅವರಿಗೆ ತಂಡದ ನೇತೃತ್ವ ನೀಡಲಾಗಿತ್ತು.

ಹೆಚ್.ಡಿ.ಕೋಟೆ ಹ್ಯಾಂಡ್ ಪೋಸ್ಟ್ ನಲ್ಲಿ ಸಮವಸ್ತ್ರ ಧರಿಸದೆ ಸಾಧಾರಣ ವ್ಯಕ್ತಿಗಳಂತೆ ನಿಂತಿದ್ದ ಪೊಲೀಸರು, ಅಂಬರ್ ಗ್ರೀಸ್ ತುಂಬಿದ್ದ ವಾಹನ ಬರುವುದನ್ನೇ ಕಾಯುತ್ತಿದ್ದರು. ಕಾರು ಬಂದ ಕೂಡಲೇ ಮಿಂಚಿನ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ಮಾಲು ಸಮೇತ ಹಿಡಿದಿದ್ದಾರಲ್ಲದೆ ಸುಮಾರು ಒಂಭತ್ತೂವರೆ ಕೆಜಿಯಷ್ಟು, ಅಂದಾಜು 25 ಕೋಟಿ ರೂ.ಗಳಷ್ಟು ಮೌಲ್ಯದ ಅಂಬರ್ ಗ್ರೀಸ್ ಅನ್ನು ವಶಪಡಿಸಿಕೊಂಡಿದ್ದಾರೆ. ವಶಕ್ಕೆ ಪಡೆಯಲಾಗಿರುವುದು ಅಂಬರ್ ಗ್ರೀಸ್ ಎಂದು ಕರೆಯಲಾಗಿದೆ.

ಆರೋಪಿಗಳು ಯಾರು? : ಕೇರಳ ಮೂಲದ ಮೂವರು ಆರೋಪಿಗಳ ಪೈಕಿ ಇಬ್ಬರು ಹಡಗು ನಡೆಸುವ ನಾವಿಕರೆಂದು ಹೇಳಲಾಗಿದೆ. ಆರೋಪಿಗಳ ಹೆಸರುಗಳನ್ನು ಪೊಲೀಸರು ಬಹಿರಂಗಗೊಳಿಸಿಲ್ಲ. ಅಂಬರ್ ಗ್ರೀಸ್ ಗೆ ವಿದೇಶದಲ್ಲೂ ಅಪಾರವಾದ ಬೇಡಿಕೆ ಮತ್ತು ಅಧಿಕ ಬೆಲೆ ಕೂಡ ಇದೆ.

ಅಂಬರ್ ಗ್ರೀಸ್ ಗೆ ಯಾಕಿಷ್ಟು ಬೇಡಿಕೆ? : ಅಂಬರ್ ಗ್ರೀಸ್ ಎಂಬ ವಸ್ತುವು ಮೇಣದಂಥ ವಸ್ತುವಾಗಿದ್ದು, ಇದನ್ನು ಪ್ರಸಾದನ ಸಾಮಗ್ರಿಗಳ ತಯಾರಿಕೆ, ಸುಗಂಧದ್ರವ್ಯಗಳ ತಯಾರಿಕೆಯಲ್ಲಿ ಬಳಸಲಾಗುತ್ತದೆ. ಕಚ್ಚಾವಸ್ತುವಾಗಿದ್ದಾಗಲೂ ಅಂಬರ್ ಗ್ರೀಸ್ ಕೊಂಚ ಸುವಾಸನೆ ಬೀರುವಂಥದ್ದಾಗಿರುತ್ತದೆ. ಕೆಲವು ದೇಶಗಳಲ್ಲಿ ಕಾಮೋತ್ತೇಜಕ ವಸ್ತುಗಳಲ್ಲಿಯೂ ಇದನ್ನು ಬಳಸಲಾಗುತ್ತದೆ.

ಆದರೆ, ಇದು ಸಿಗುವುದು ಬಲು ಅಪರೂಪ. ಏಕೆಂದರೆ, ತಿಮಿಂಗಲಗಳು ಸಮುದ್ರದಲ್ಲಿ ವಾಂತಿ ಮಾಡಿಕೊಳ್ಳುವುದು ಅಪರೂಪ ಹಾಗೂ ಅವು ಜನಸಾಮಾನ್ಯರಿಗೆ ಸಿಗುವುದು ತುಂಬಾ ವಿರಳ. ಹಾಗಾಗಿ, ಈ ವಸ್ತುವಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆಯಿದೆ. ಆದರೆ, ಕಳ್ಳಸಾಗಣೆದಾರರು ಅಂಬರ್ ಗ್ರೀಸ್ ಗಾಗಿ ಸಮುದ್ರಗಳಿಗೆ ದಾಂಗುಡಿ ಇಡುವುದನ್ನು ತಪ್ಪಿಸಲು ಬಹುತೇಕ ದೇಶಗಳು ಇದರ ಮಾರಾಟವನ್ನು ನಿಷೇಧಿಸಿವೆ. ಹಾಗಾಗಿ, ಇದು ಕಳ್ಳಸಾಗಣೆಯಾಗುತ್ತಿದೆ.

lokesh

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

17 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

21 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

21 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

21 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

21 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

21 hours ago