ಮೈಸೂರು : ವಿದ್ಯಾರ್ಥಿಗಳಿಂದ ಶುಲ್ಕ ಪಡೆದು ಉಪನ್ಯಾಸಕಿ ನಾಪತ್ತೆ ಆರೋಪ ಕೇಳಿ ಬಂದಿದ್ದು, ಹಣವೂ ಇಲ್ಲದೇ, ನಾಳಿನ ಪರೀಕ್ಷೆಗೆ ಪ್ರವೇಶ ಪತ್ರವು ಸಿಗದೆ ವಿದ್ಯಾರ್ಥಿಗಳು ಅತಂತ್ರರಾಗಿರುವಂತಹ ಘಟನೆ ನಗರದ ಬನ್ನೂರು ರಸ್ತೆಯಲ್ಲಿರುವ ಎಟಿಎಂಇ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದಿದೆ.
ಉಪನ್ಯಾಸಕಿ ಹರ್ಷಿತಾ ವಿರುದ್ಧ ವಿದ್ಯಾರ್ಥಿಗಳು ಗಂಭೀರ ಆರೋಪ ಮಾಡಿದ್ದಾರೆ. ಜು. 6ರಂದೇ ಉಪನ್ಯಾಸಕಿ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಐಪಿಸಿ ಸೆಕ್ಷನ್ 468, 470, 420ರ ಅಡಿ ವರುಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಗೂಗಲ್ಪೇ ಹಾಗೂ ಫೋನ್ಪೇ ಮೂಲಕ 200 ವಿದ್ಯಾರ್ಥಿಗಳಿಂದ 25 ಲಕ್ಷ ರೂ. ಶುಲ್ಕ ಪಡೆದಿದ್ದು, ವಿದ್ಯಾರ್ಥಿಗಳ ಹಣ ದುರುಪಯೋಗ ಪಡಿಸಿಕೊಂಡಿರುವುದಾಗಿ ಆರೋಪಿಸಲಾಗಿದೆ.
ಫೀಸ್ ಸಂದಾಯವಾಗದ ಹಿನ್ನೆಲೆ ಕಾಲೇಜಿನಲ್ಲಿ ಪ್ರವೇಶಪತ್ರ ನೀಡಲು ನಿರಾಕರಿಸುತ್ತಿದ್ದಾರೆ. ಸದ್ಯ ನಾಪತ್ತೆಯಾಗಿರುವ ಉಪನ್ಯಾಸಕಿ ಹರ್ಷಿತಾಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.
ಮೈಸೂರಿನ ವಿಜಯನಗರ ಎರಡನೇ ಹಂತದ ದಿವ್ಯರೂಪ ಕಲ್ಯಾಣ ಮಂಟಪದ ಸಮೀಪ ಮೂರು ವಾರಗಳಿಂದ ದಿನದಲ್ಲಿ ಆರು ಗಂಟೆಗಳ ಕಾಲ ಪ್ರತಿ…
ಡಿಸೆಂಬರ್ನಲ್ಲಿ ವಜ್ರಮಹೋತ್ಸವ ; ಸಂಭ್ರಮಕ್ಕೆ ಸಿದ್ಧತೆ ಚಿರಂಜೀವಿ ಸಿ.ಹುಲ್ಲಹಳ್ಳಿ ಕರ್ನಾಟಕದ ನೆಲ, ಜಲ, ಭಾಷೆಯ ಏಳಿಗೆಗಾಗಿ ಕಾವ್ಯ, ಸಾಹಿತ್ಯ ಮತ್ತು…
ಡಾ. ಎಂ. ಡಿ. ಉಮೇಶ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಬಳ್ಳಾರಿ ಸಿದ್ದಮ್ಮನವರು ೧೯೦೩ರಲ್ಲಿ ಬಸೆಟಪ್ಪ…
ನಾನು ನನ್ನನ್ನು ಆಳವಾಗಿ ಪರಿಶೋಧಿಸಿಕೊಂಡಂತೆಲ್ಲ ನನ್ನ ಆಂತರಿಕ ಮತ್ತು ಬಾಹ್ಯ ವಿಷಯಗಳಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಶ್ಯಕತೆ ನನಗೆ ತೋರಿತು. ನನ್ನ…
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…