ಮೈಸೂರು

ಬೈಲುಕುಪ್ಪೆ ಟಿಬೆಟ್ ಕ್ಯಾಂಪ್‌ನಲ್ಲಿ 29 ಕೆ.ಜಿ ಗಾಂಜಾ ವಶ: ಐವರ ಬಂಧನ

ಪಿರಿಯಾಪಟ್ಟಣ : ಇಂದು ಮುಂಜಾನೆ ಬೈಲುಕುಪ್ಪೆ ಒಂದನೇ ಟಿಬೆಟನ್ ಕ್ಯಾಂಪ್ ಆವರಣದಲ್ಲಿ ಪೊಲೀಸರು ದಾಳಿ ನಡೆಸಿ 29 ಕೆ.ಜಿ ಗಾಂಜಾ ಹಾಗೂ ಒಂದು ಕಾರನ್ನ ವಶಪಡಿಸಿಕೊಂಡು ಐದು ಆರೋಪಿಗಳನ್ನ ಬಂಧಿಸಿದ್ದಾರೆ.

ಇಂದು ಮುಂಜಾನೆ ಖಚಿತ ಮಾಹಿತಿ ಮೇರೆಗೆ ಸಾರ್ವಜನಿಕರಿಗೆ ಅಕ್ರಮವಾಗಿ ಮಾರಾಟ ಮಾಡುವ ಉದ್ದೇಶದಿಂದ ತಂದಿರುವ ಕೇರಳ ರಾಜ್ಯದ ವಾಹನ ನೋಂದಣಿ ಸಂಖ್ಯೆ ಕೆ ಎಲ್ 58 ಬಿ 2983 ಸಿಪ್ಟ್ ಕಾರಿನಲ್ಲಿದ್ದ 29 ಕೆ.ಜಿ. ಗಾಂಜಾ ಹಾಗೂ ಕಾರನ್ನು ವಶಪಡಿಸಿಕೊಂಡಿರುವುದಾಗಿ ಮೈಸೂರು ಪೊಲೀಸ್ ಅಧೀಕ್ಷಕಿ ಸೀಮಾ ಲಾಟ್ಕಾರ್ ತಿಳಿಸಿದ್ದಾರೆ. ಬೈಲುಕುಪ್ಪೆ ಪೊಲೀಸ್ ಠಾಣೆಯ ಪೊಲೀಸ್ ಮೈದಾನದಲ್ಲಿ ನಡೆಸಿದ ಸುದ್ದಿ ಗೋಷ್ಟಿಯಲ್ಲಿ ಮಾಹಿತಿ ನೀಡಿದ್ದಾರೆ.

ಮುಂದಿನ ದಿನಗಳಲ್ಲಿ ಸಾರ್ವಜನಿಕರಲ್ಲಿ ಹಾಗೂ ಕಾಲೇಜುಗಳಲ್ಲಿ ಮಾದಕ ವಸ್ತುಗಳ ಬಗ್ಗೆ ಅಭಿಯಾನ ಹಮ್ಮಿಕೊಂಡು ಜಾಗೃತಿ ಮೂಡಿಸಲಾಗುವುದು ಎಂದು ಇದೇ ವೇಳೆ ತಿಳಿಸಿದ್ದಾರೆ. ಒಡಿಸ್ಸಾ ರಾಜ್ಯದ ಬಿಕ್ರಂ ನಾಯಕ್, ಕುಶಾಲನಗರದ ನಯನ್ ದೀಪು , ಮಡಿಕೇರಿ ತಾಲೂಕು ಕಡಕದಾಳು ಗ್ರಾಮದ ಜಂಶೀರ್ , ಪಿರಿಯಪಟ್ಟಣ ತಾಲೂಕಿನ ಆಲನಹಳ್ಳಿ ಗ್ರಾಮದ ಅನಿಲ್ ಕುಮಾರ್, ಕೊಪ್ಪ ಗುಡ್ಡನಹಳ್ಳಿ ಗ್ರಾಮದ ಭರತ್ ಕುಮಾರ್ ರವರನ್ನ ಬಂಧಿಸಲಾಗಿದೆ.

ಸುದ್ದಿಗೋಷ್ಠಿಯಲ್ಲಿ ಹುಣಸೂರು ಡಿವೈಎಸ್ಪಿ ಮಹೇಶ್, ಬೈಲುಕೊಪ್ಪೆ ವೃತ್ತ ನಿರೀಕ್ಷಕ ಪ್ರಕಾಶ್, ಪಿಎಸ್ಐ ಅಜಯ್ ಕುಮಾರ್ ಹಾಜರಿದ್ದರು.
ಕಾರ್ಯಾಚರಣೆಯಲ್ಲಿ ಬೈಲುಕೊಪ್ಪ ಪೊಲೀಸ್ ಠಾಣೆಯ, ಪಿಎಸ್ಐ ಅಜಯ್ ಕುಮಾರ್ , ಅಪರಾಧ ವಿಭಾಗದ ಪಿಎಸ್ಐ ಮಾಲಿಂಗಯ್ಯ, ಸಿಬ್ಬಂದಿಗಳಾದ ಅಜಯ್ ಕುಮಾರ್, ಚೇತನ್ ಕುಮಾರ್,ಮುದ್ದುರಾಜ್, ಕುಮಾರಸ್ವಾಮಿ, ರವಿ, ವೀರೇಶ್ ಕೆ.ಹೆಮಹದೇವಪ್ಪ, ರವಿ ಕುಮಾರ್, ಸುರೇಶ್, ರಾಜೇಶ್ , ಭಾಗವಹಿಸಿದ್ದರು.

andolanait

Recent Posts

ಪ್ರತಿಭಟನೆ ಮಾಹಿತಿ ತಿಳಿದು ಕೆರೆಗೆ ನೀರು ತುಂಬಿಸಿದ ಅಧಿಕಾರಿಗಳು!

ಎಚ್.ಡಿ.ಕೋಟೆ : ತಾಲ್ಲೂಕಿನ ಕ್ಯಾತನಹಳ್ಳಿ, ಆಲನಹಳ್ಳಿ, ಜಿ. ಬಿ. ಸರಗೂರು ವ್ಯಾಪ್ತಿಯ ಐದು ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳು ನಿರ್ಲಕ್ಷಿ…

3 hours ago

ಓದುಗರ ಪತ್ರ | ರಸ್ತೆ ದುರಸ್ತಿ ಮಾಡಿ

ಮೈಸೂರಿನ ರಾಮಕೃಷ್ಣನಗರದಲ್ಲಿರುವ ಸುಯೋಗ್ ಆಸ್ಪತ್ರೆ ಎದುರಿನ ರಸ್ತೆಯು ಸಂಪೂರ್ಣ ಹದಗೆಟ್ಟಿದೆ. ಈ ರಸ್ತೆಯಲ್ಲಿ ಎಲ್ಲೆಡೆ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು,…

3 hours ago

ಓದುಗರ ಪತ್ರ | ತಂಬಾಕುಯುಕ್ತ ದಂತ ಉತ್ಪನ್ನಗಳನ್ನು ನಿಷೇಧಿಸಿ

ಇತ್ತೀಚಿನ ದಿನಗಳಲ್ಲಿ, ಟೂತ್ ಪೇಸ್ಟ್‌ಗಳಲ್ಲಿ ತಂಬಾಕು ಮತ್ತು ನಿಕೋಟಿನ್ ಅಂಶ ಪತ್ತೆಯಾಗಿದ್ದು, ಇದರ ಸೇವನೆಯಿಂದ ಹಲವು ಮಕ್ಕಳು ತೊಂದರೆಗೊಳಗಾಗಿರುವ ಘಟನೆಗಳು…

3 hours ago

ಓದುಗರ ಪತ್ರ | ರಸ್ತೆಯಲ್ಲಿ ವಾಯುವಿಹಾರ ಅಪಾಯಕಾರಿ

ಮೈಸೂರಿನ ಕುವೆಂಪುನಗರದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ರಸ್ತೆ, ಗದ್ದಿಗೆ ರಸ್ತೆ, ವಿಶ್ವಮಾನವ ಜೋಡಿ ರಸ್ತೆ, ವಿದ್ಯಾರಣ್ಯಪುರಂ -…

3 hours ago

ಶಿವಾಜಿ ಗಣೇಶನ್‌ ಅವರ ದೆಹಲಿ ಕಣ್ಣೋಟ : ಉನ್ನತ ಶಿಕ್ಷಣದಲ್ಲಿ ಬದಲಾವಣೆಗೆ ಕೇಂದ್ರದ ಮುನ್ನುಡಿ

ಆಂದ್ರದಲ್ಲಿನ ಬಿಜೆಪಿ ನೇತೃತ್ವದ ಎನ್‌ ಡಿಎ ಸರ್ಕಾರ ನಾಲ್ಕು ವರ್ಷಗಳ ಹಿಂದೆ ಜಾರಿಗೆ ತಂದ ನೂತನ ಶಿಕ್ಷಣ ನೀತಿಯನ್ನು ಪರಿಣಾಮಕಾರಿಯಾಗಿ…

3 hours ago

ಬೈಕ್‌ಗೆ ಲಾರಿ ಡಿಕ್ಕಿ : ಸವಾರ ಸಾವು, ಮತ್ತೊರ್ವ ಗಂಭೀರ

ತಿ.ನರಸೀಪುರ : ಬೈಕ್ ಗೆ ಎದುರಿಗೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿಯಾದ ಪರಿಣಾಮ ಯುವಕನೋರ್ವ ಸ್ಥಳದಲ್ಲಿಯೇ ಮೃತಪಟ್ಟಿ ಘಟನೆ ತಾಲೂಕಿನ…

3 hours ago