ಮೈಸೂರು

ಬೈಲುಕುಪ್ಪೆ ಟಿಬೆಟ್ ಕ್ಯಾಂಪ್‌ನಲ್ಲಿ 29 ಕೆ.ಜಿ ಗಾಂಜಾ ವಶ: ಐವರ ಬಂಧನ

ಪಿರಿಯಾಪಟ್ಟಣ : ಇಂದು ಮುಂಜಾನೆ ಬೈಲುಕುಪ್ಪೆ ಒಂದನೇ ಟಿಬೆಟನ್ ಕ್ಯಾಂಪ್ ಆವರಣದಲ್ಲಿ ಪೊಲೀಸರು ದಾಳಿ ನಡೆಸಿ 29 ಕೆ.ಜಿ ಗಾಂಜಾ ಹಾಗೂ ಒಂದು ಕಾರನ್ನ ವಶಪಡಿಸಿಕೊಂಡು ಐದು ಆರೋಪಿಗಳನ್ನ ಬಂಧಿಸಿದ್ದಾರೆ.

ಇಂದು ಮುಂಜಾನೆ ಖಚಿತ ಮಾಹಿತಿ ಮೇರೆಗೆ ಸಾರ್ವಜನಿಕರಿಗೆ ಅಕ್ರಮವಾಗಿ ಮಾರಾಟ ಮಾಡುವ ಉದ್ದೇಶದಿಂದ ತಂದಿರುವ ಕೇರಳ ರಾಜ್ಯದ ವಾಹನ ನೋಂದಣಿ ಸಂಖ್ಯೆ ಕೆ ಎಲ್ 58 ಬಿ 2983 ಸಿಪ್ಟ್ ಕಾರಿನಲ್ಲಿದ್ದ 29 ಕೆ.ಜಿ. ಗಾಂಜಾ ಹಾಗೂ ಕಾರನ್ನು ವಶಪಡಿಸಿಕೊಂಡಿರುವುದಾಗಿ ಮೈಸೂರು ಪೊಲೀಸ್ ಅಧೀಕ್ಷಕಿ ಸೀಮಾ ಲಾಟ್ಕಾರ್ ತಿಳಿಸಿದ್ದಾರೆ. ಬೈಲುಕುಪ್ಪೆ ಪೊಲೀಸ್ ಠಾಣೆಯ ಪೊಲೀಸ್ ಮೈದಾನದಲ್ಲಿ ನಡೆಸಿದ ಸುದ್ದಿ ಗೋಷ್ಟಿಯಲ್ಲಿ ಮಾಹಿತಿ ನೀಡಿದ್ದಾರೆ.

ಮುಂದಿನ ದಿನಗಳಲ್ಲಿ ಸಾರ್ವಜನಿಕರಲ್ಲಿ ಹಾಗೂ ಕಾಲೇಜುಗಳಲ್ಲಿ ಮಾದಕ ವಸ್ತುಗಳ ಬಗ್ಗೆ ಅಭಿಯಾನ ಹಮ್ಮಿಕೊಂಡು ಜಾಗೃತಿ ಮೂಡಿಸಲಾಗುವುದು ಎಂದು ಇದೇ ವೇಳೆ ತಿಳಿಸಿದ್ದಾರೆ. ಒಡಿಸ್ಸಾ ರಾಜ್ಯದ ಬಿಕ್ರಂ ನಾಯಕ್, ಕುಶಾಲನಗರದ ನಯನ್ ದೀಪು , ಮಡಿಕೇರಿ ತಾಲೂಕು ಕಡಕದಾಳು ಗ್ರಾಮದ ಜಂಶೀರ್ , ಪಿರಿಯಪಟ್ಟಣ ತಾಲೂಕಿನ ಆಲನಹಳ್ಳಿ ಗ್ರಾಮದ ಅನಿಲ್ ಕುಮಾರ್, ಕೊಪ್ಪ ಗುಡ್ಡನಹಳ್ಳಿ ಗ್ರಾಮದ ಭರತ್ ಕುಮಾರ್ ರವರನ್ನ ಬಂಧಿಸಲಾಗಿದೆ.

ಸುದ್ದಿಗೋಷ್ಠಿಯಲ್ಲಿ ಹುಣಸೂರು ಡಿವೈಎಸ್ಪಿ ಮಹೇಶ್, ಬೈಲುಕೊಪ್ಪೆ ವೃತ್ತ ನಿರೀಕ್ಷಕ ಪ್ರಕಾಶ್, ಪಿಎಸ್ಐ ಅಜಯ್ ಕುಮಾರ್ ಹಾಜರಿದ್ದರು.
ಕಾರ್ಯಾಚರಣೆಯಲ್ಲಿ ಬೈಲುಕೊಪ್ಪ ಪೊಲೀಸ್ ಠಾಣೆಯ, ಪಿಎಸ್ಐ ಅಜಯ್ ಕುಮಾರ್ , ಅಪರಾಧ ವಿಭಾಗದ ಪಿಎಸ್ಐ ಮಾಲಿಂಗಯ್ಯ, ಸಿಬ್ಬಂದಿಗಳಾದ ಅಜಯ್ ಕುಮಾರ್, ಚೇತನ್ ಕುಮಾರ್,ಮುದ್ದುರಾಜ್, ಕುಮಾರಸ್ವಾಮಿ, ರವಿ, ವೀರೇಶ್ ಕೆ.ಹೆಮಹದೇವಪ್ಪ, ರವಿ ಕುಮಾರ್, ಸುರೇಶ್, ರಾಜೇಶ್ , ಭಾಗವಹಿಸಿದ್ದರು.

andolanait

Recent Posts

ಕದನ ವಿರಾಮ | ಇರಾನ್‌ ಮೇಲೆ 2ವಾರ ಬಾಂಬ್‌ ಹಾಕುವುದಿಲ್ಲ ಎಂದ ಟ್ರಂಪ್‌

ವಾಷಿಂಗ್ಟನ್‌ : ಇವತ್ತಿನ ರಾತ್ರಿ ಇರಾನ್‌ನ ಇಡೀ ನಾಗರಿಕತೆಯೇ ನಾಶವಾಗಲಿದೆ ಎಂದು ಬೆದರಿಕೆ ಒಡ್ಡಿದ ಕೆಲವೇ ಹೊತ್ತಲ್ಲಿ ಅಮೆರಿಕ ಅಧ್ಯಕ್ಷ…

32 mins ago

ಉಪಚುನಾವಣೆ ಬಹಿರಂಗ ಪ್ರಚಾರಕ್ಕೆ ತೆರೆ: ನಾಳೆ ಮನೆ ಮನೆಗೆ ತೆರಳಿ ಮತಯಾಚನೆ

ಬೆಂಗಳೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ…

16 hours ago

ಮಣಿಪುರದಲ್ಲಿ ಮನೆ ಮೇಲೆ ಬಾಂಬ್‌ ದಾಳಿ: ಇಬ್ಬರು ಮಕ್ಕಳು ಸಾವು

ಇಂಪಾಲ: ಮಣಿಪುರದಲ್ಲಿ ಮನೆಯೊಂದರ ಮೇಲೆ ಬಾಂಬ್‌ ದಾಳಿ ನಡೆದಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯ…

16 hours ago

ನನ್ನ ತಾಳ್ಮೆಗೆ ಕಾಲವೇ ಉತ್ತರ ನೀಡುತ್ತದೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಹುಬ್ಬಳ್ಳಿ: ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಸಚಿವ ಜಮೀರ್‌ ಅಹ್ಮಮದ್‌ ಖಾನ್‌ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ.…

16 hours ago

ನಮ್ಮಣ್ಣ ಇವತ್ತೇ ಸಿಎಂ ಆಗಬೇಕು ಎಂದೇನಿಲ್ಲ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ನಮ್ಮ ಅಣ್ಣ ಸಿಎಂ ಆಗಬೇಕು ಎಂಬ ಆಸೆ ಇದೆ. ಆದರೆ ಇವತ್ತೇ ಸಿಎಂ ಆಗಬೇಕು ಅಂತೇನಿಲ್ಲ. ಇನ್ನೂ ಸಮಯವಿದೆ…

16 hours ago

ಏಪ್ರಿಲ್.‌17ರಂದು ಸಿಎಂ ಸಿದ್ದರಾಮಯ್ಯ ಕೊಡಗು ಜಿಲ್ಲೆಗೆ ಭೇಟಿ ಸಾಧ್ಯತೆ

ಮಡಿಕೇರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್.‌17ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ…

16 hours ago