ಮೈಸೂರು

ಬೈಲುಕುಪ್ಪೆ ಟಿಬೆಟ್ ಕ್ಯಾಂಪ್‌ನಲ್ಲಿ 29 ಕೆ.ಜಿ ಗಾಂಜಾ ವಶ: ಐವರ ಬಂಧನ

ಪಿರಿಯಾಪಟ್ಟಣ : ಇಂದು ಮುಂಜಾನೆ ಬೈಲುಕುಪ್ಪೆ ಒಂದನೇ ಟಿಬೆಟನ್ ಕ್ಯಾಂಪ್ ಆವರಣದಲ್ಲಿ ಪೊಲೀಸರು ದಾಳಿ ನಡೆಸಿ 29 ಕೆ.ಜಿ ಗಾಂಜಾ ಹಾಗೂ ಒಂದು ಕಾರನ್ನ ವಶಪಡಿಸಿಕೊಂಡು ಐದು ಆರೋಪಿಗಳನ್ನ ಬಂಧಿಸಿದ್ದಾರೆ.

ಇಂದು ಮುಂಜಾನೆ ಖಚಿತ ಮಾಹಿತಿ ಮೇರೆಗೆ ಸಾರ್ವಜನಿಕರಿಗೆ ಅಕ್ರಮವಾಗಿ ಮಾರಾಟ ಮಾಡುವ ಉದ್ದೇಶದಿಂದ ತಂದಿರುವ ಕೇರಳ ರಾಜ್ಯದ ವಾಹನ ನೋಂದಣಿ ಸಂಖ್ಯೆ ಕೆ ಎಲ್ 58 ಬಿ 2983 ಸಿಪ್ಟ್ ಕಾರಿನಲ್ಲಿದ್ದ 29 ಕೆ.ಜಿ. ಗಾಂಜಾ ಹಾಗೂ ಕಾರನ್ನು ವಶಪಡಿಸಿಕೊಂಡಿರುವುದಾಗಿ ಮೈಸೂರು ಪೊಲೀಸ್ ಅಧೀಕ್ಷಕಿ ಸೀಮಾ ಲಾಟ್ಕಾರ್ ತಿಳಿಸಿದ್ದಾರೆ. ಬೈಲುಕುಪ್ಪೆ ಪೊಲೀಸ್ ಠಾಣೆಯ ಪೊಲೀಸ್ ಮೈದಾನದಲ್ಲಿ ನಡೆಸಿದ ಸುದ್ದಿ ಗೋಷ್ಟಿಯಲ್ಲಿ ಮಾಹಿತಿ ನೀಡಿದ್ದಾರೆ.

ಮುಂದಿನ ದಿನಗಳಲ್ಲಿ ಸಾರ್ವಜನಿಕರಲ್ಲಿ ಹಾಗೂ ಕಾಲೇಜುಗಳಲ್ಲಿ ಮಾದಕ ವಸ್ತುಗಳ ಬಗ್ಗೆ ಅಭಿಯಾನ ಹಮ್ಮಿಕೊಂಡು ಜಾಗೃತಿ ಮೂಡಿಸಲಾಗುವುದು ಎಂದು ಇದೇ ವೇಳೆ ತಿಳಿಸಿದ್ದಾರೆ. ಒಡಿಸ್ಸಾ ರಾಜ್ಯದ ಬಿಕ್ರಂ ನಾಯಕ್, ಕುಶಾಲನಗರದ ನಯನ್ ದೀಪು , ಮಡಿಕೇರಿ ತಾಲೂಕು ಕಡಕದಾಳು ಗ್ರಾಮದ ಜಂಶೀರ್ , ಪಿರಿಯಪಟ್ಟಣ ತಾಲೂಕಿನ ಆಲನಹಳ್ಳಿ ಗ್ರಾಮದ ಅನಿಲ್ ಕುಮಾರ್, ಕೊಪ್ಪ ಗುಡ್ಡನಹಳ್ಳಿ ಗ್ರಾಮದ ಭರತ್ ಕುಮಾರ್ ರವರನ್ನ ಬಂಧಿಸಲಾಗಿದೆ.

ಸುದ್ದಿಗೋಷ್ಠಿಯಲ್ಲಿ ಹುಣಸೂರು ಡಿವೈಎಸ್ಪಿ ಮಹೇಶ್, ಬೈಲುಕೊಪ್ಪೆ ವೃತ್ತ ನಿರೀಕ್ಷಕ ಪ್ರಕಾಶ್, ಪಿಎಸ್ಐ ಅಜಯ್ ಕುಮಾರ್ ಹಾಜರಿದ್ದರು.
ಕಾರ್ಯಾಚರಣೆಯಲ್ಲಿ ಬೈಲುಕೊಪ್ಪ ಪೊಲೀಸ್ ಠಾಣೆಯ, ಪಿಎಸ್ಐ ಅಜಯ್ ಕುಮಾರ್ , ಅಪರಾಧ ವಿಭಾಗದ ಪಿಎಸ್ಐ ಮಾಲಿಂಗಯ್ಯ, ಸಿಬ್ಬಂದಿಗಳಾದ ಅಜಯ್ ಕುಮಾರ್, ಚೇತನ್ ಕುಮಾರ್,ಮುದ್ದುರಾಜ್, ಕುಮಾರಸ್ವಾಮಿ, ರವಿ, ವೀರೇಶ್ ಕೆ.ಹೆಮಹದೇವಪ್ಪ, ರವಿ ಕುಮಾರ್, ಸುರೇಶ್, ರಾಜೇಶ್ , ಭಾಗವಹಿಸಿದ್ದರು.

andolanait

Recent Posts

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

4 hours ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

4 hours ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

4 hours ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

4 hours ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

4 hours ago

ಕೆಡ್ಲಿ ಬಾಳ್ಲಿ ನಮ್‌ ಬದ್ಕ್‌ ನಾಮ್‌ ನೋಡ್ಬೇಕು ಕಣ ಕುಸೋ

ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…

4 hours ago