ಮೈಸೂರು : ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಖಾತಾ ಸಚಿವ ಅಮಿತ್ ಷಾ ಅವರ ನಿರ್ದೇಶನದ ಮೇರೆಗೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರವರು ಲಿಂಗಾಯತರಿಗೆ 2D ಪ್ರವರ್ಗ ರಚನೆ ಮಾಡಿ ಶೇಕಡ 5 ರಿಂದ 7 ಕ್ಕೆ ಹೆಚ್ಚಿಸಿರುವುದು ಹರ್ಷ ಉಂಟು ಮಾಡಿದ್ದು ಶೀಘ್ರದಲ್ಲೇ ಬೆಂಗಳೂರಿನಲ್ಲಿ ಐದು ಲಕ್ಷ ಲಿಂಗಾಯಿತರ ಸಮಾವೇಶ ಮಾಡಿ ಪ್ರಧಾನಿಯವರಿಗೆ ಅಭಿನಂದನೆ ಸಲ್ಲಿಸಲಾಗುವುದು ಎಂದು ಗೌಡ ಲಿಂಗಾಯಿತ – ಪಂಚಮಸಾಲಿ ಸಮನ್ವಯ ಸಮಿತಿಯ ರಾಜ್ಯ ಸಂಚಾಲಕ, BJP ರೈತ ಮುಖಂಡ ಮಲ್ಲೇಶ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಪಂಚಮಸಾಲಿ (ಗೌಡ ಲಿಂಗಾಯಿತ) ಸಮಾಜದ ಕೂಡಲಸಂಗಮಪೀಠದ ಪೀಠಾಧಿಪತಿ ಬಸವ ಜಯಂತಿಯ ಮೃತ್ಯುಂಜಯ ಸ್ವಾಮೀಜಿಯವರು ಸತತವಾಗಿ 2-3 ವರ್ಷ ಪಾದಯಾತ್ರೆ, ಸಮಾವೇಶಗಳು ಹರತಾಳ ಮುಂತಾದ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಕೊನೆಗೆ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ 70 ದಿನ ಧರಣಿ ಕುಳಿತ ಕಾರಣಕ್ಕಾಗಿ ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಿ ಮುಖ್ಯಮಂತ್ರಿ ಬೊಮ್ಮಾಯಿ ರವರಿಗೆ ಆದೇಶ ನೀಡಿ 2D ಮೀಸಲಾತಿ ಜಾರಿಗೆ ಬರುವುದಕ್ಕೆ ಕಾರಣವಾಗಿದೆ ಬಸವ ಜಯಂತಿಯ ಮೃತ್ಯುಂಜಯ ಸ್ವಾಮೀಜಿ ಅವರಿಗೆ ಇಡೀ ಕರ್ನಾಟಕದ ಲಿಂಗಾಯತ ಸಮಾಜ ಚಿರಋಣಿಯಾಗಿದೆ ಎಂದು ಮಲ್ಲೇಶ್ ಅಭಿಪ್ರಾಯ ಪಟ್ಟರು
ಬಸವನಗೌಡ ಪಾಟೀಲ್ ಯತ್ನಾಳ್, ವಿಜಯಾನಂದ ಕಾಶಪ್ಪನವರ್ ಹರಿಹರದ ಮಾಜಿ ಶಾಸಕ ಶಿವಶಂಕರ್ ಮುಂತಾದವರ ನೇತೃತ್ವದಲ್ಲಿ ಈ ಹೋರಾಟ ಆರಂಭವಾಗಿ ಯಶಸ್ವಿಯಾಗಿದೆ ನಮ್ಮ ಸಮಾಜ ಅವರಿಗೂ ಆಭಾರಿಯಾಗಿರುತ್ತದೆ ಎಂದು ಮಲ್ಲೇಶ್ ಹೇಳಿದ್ದಾರೆ
ರಾಜ್ಯದ ಚುನಾವಣಾ ಆಯೋಗ ಅನುಮತಿ ನೀಡಿದ್ದಲ್ಲಿ 5 ಲಕ್ಷ ಜನ ಲಿಂಗಾಯತರ ಸಮಾವೇಶ ಮಾಡಿ ಪ್ರಧಾನಿಗಳಿಗೆ ಅಮಿತ್ ಶಾ ರವರಿಗೆ ಬಸವ ವಿಜಯ ಮೃತ್ಯುಂಜಯ ಸ್ವಾಮೀಜಿ ಅವರಿಗೆ ಯತ್ನಾಳ್ ಕಾಶಪ್ಪನವರ್ ಶಿವಶಂಕರ್ ಅವರಿಗೆ ಅಭಿನಂದನೆ ಸಲ್ಲಿಸಲಾಗುವುದು ಎಂದು ಮಲ್ಲೇಶ ಅವರು ತಿಳಿಸಿದ್ದಾರೆ
ಬಸವ ಜಯ ಮೃತ್ಯುಂಜಯ ಸ್ವಾಮಿಜಿ ಅವರ ಹೋರಾಟದ ಫಲವಾಗಿ ಒಕ್ಕಲಿಗರಿಗೆ 2C ಮೂಲಕ ಶೇಕಡ 6 ರಂತೆ ,SC / ST ಜನರಿಗೆ ಮೀಸಲಾತಿ ಹೆಚ್ಚಳ, ಕುರುಬ ಜನಾಂಗವನ್ನು ST ಗೆ ಸೇರಿಸುವಂತೆ ಶಿಫಾರಸು ಮಾಡಿರುವುದು ಹಾಗೂ ಸದಾಶಿವ ಆಯೋಗ ಜಾರಿಯಾಗುವುದಕ್ಕೂ ಬಸವ ಜಯ ಮೃತ್ಯುಂಜಯ ಸ್ವಾಮೀಜಿಯವರ ಹೋರಾಟ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಕಾರಣವಾಗಿದೆ ಎಂದು ಮಲ್ಲೇಶ್ ಭಕ್ತಿ ಹೇಳಿದರು
ಈ ಮೀಸಲಾತಿ ಚಳುವಳಿಗೆ ಸಿದ್ದರಾಮಯ್ಯನವರು ಭಾರಿ ವಿರೋಧ ವ್ಯಕ್ತಪಡಿಸಿದರು ಸಿದ್ದರಾಮಯ್ಯನವರು ಕೇವಲ ತಮ್ಮ ಸ್ವಾರ್ಥಕ್ಕಾಗಿ ರಾಜಕಾರಣ ಮಾಡುತ್ತಿದ್ದು ರಾಜ್ಯದ ಬಡ ಜನತೆಯ ಪರವಾಗಿ ಮೀಸಲಾತಿ ಹೋರಾಟಕ್ಕೆ ಕೈಜೋಡಿಸಿರಲ್ಲ ಎಂದು ಈ ಕಾರಣಕ್ಕೆ ಬರುವ ಚುನಾವಣೆಯಲ್ಲಿ ಅವರಿಗೆ ತಕ್ಕ ಪಾಠ ಕಲಿಸಬೇಕೆಂದು ಮಲ್ಲೇಶ್ ಕರೆ ನೀಡಿದರು
ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…
ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…
ಬೆಂಗಳೂರು : ಹಬ್ಬ-ಹರಿದಿನಗಳನ್ನೂ ಲೆಕ್ಕಿಸದೆ ಜನರಿಗಾಗಿ ದುಡಿಯುವ ಪೊಲೀಸರಿಗೆ ಕರ್ನಾಟಕ ಪೊಲೀಸ್ ಇಲಾಖೆ ಸಿಹಿಸುದ್ದಿ ನೀಡಿದ್ದು, ಜನ್ಮದಿನ ಮತ್ತು ವಿವಾಹ…
ಹೊಸದಿಲ್ಲಿ : ನಿರ್ಣಾಯಕ ಅಪರೂಪದ ಖನಿಜಗಳು, ಇವಿ ಚಲನಶೀಲತೆ, ಉತ್ಪಾದನೆ ಮತ್ತು ಸುಸ್ಥಿರ ಕೈಗಾರಿಕಾ ಅಭಿವೃದ್ಧಿ ಕ್ಷೇತ್ರಗಳಲ್ಲಿನ ಸಹಕಾರವನ್ನು ಬಲಪಡಿಸಲು…
ಮೈಸೂರು : ಮುಡಾ ಹಗರಣದಲ್ಲಿ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಮತ್ತು ಇತರರ ಮೇಲೆ ಬಿ ರಿಪೋರ್ಟ್…