ಮೈಸೂರು

ಲಿಂಗಾಯಿತರಿಗೆ 2 D ಮೀಸಲಾತಿ : ಶೀಘ್ರದಲ್ಲೇ ಪ್ರಧಾನಿಗೆ ಸನ್ಮಾನ : ಮಲ್ಲೇಶ್

ಮೈಸೂರು : ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಖಾತಾ ಸಚಿವ ಅಮಿತ್ ಷಾ ಅವರ ನಿರ್ದೇಶನದ ಮೇರೆಗೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರವರು ಲಿಂಗಾಯತರಿಗೆ 2D ಪ್ರವರ್ಗ ರಚನೆ ಮಾಡಿ ಶೇಕಡ 5 ರಿಂದ 7 ಕ್ಕೆ ಹೆಚ್ಚಿಸಿರುವುದು ಹರ್ಷ ಉಂಟು ಮಾಡಿದ್ದು ಶೀಘ್ರದಲ್ಲೇ ಬೆಂಗಳೂರಿನಲ್ಲಿ ಐದು ಲಕ್ಷ ಲಿಂಗಾಯಿತರ ಸಮಾವೇಶ ಮಾಡಿ ಪ್ರಧಾನಿಯವರಿಗೆ ಅಭಿನಂದನೆ ಸಲ್ಲಿಸಲಾಗುವುದು ಎಂದು ಗೌಡ ಲಿಂಗಾಯಿತ – ಪಂಚಮಸಾಲಿ ಸಮನ್ವಯ ಸಮಿತಿಯ ರಾಜ್ಯ ಸಂಚಾಲಕ, BJP ರೈತ ಮುಖಂಡ ಮಲ್ಲೇಶ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಪಂಚಮಸಾಲಿ (ಗೌಡ ಲಿಂಗಾಯಿತ) ಸಮಾಜದ ಕೂಡಲಸಂಗಮಪೀಠದ ಪೀಠಾಧಿಪತಿ ಬಸವ ಜಯಂತಿಯ ಮೃತ್ಯುಂಜಯ ಸ್ವಾಮೀಜಿಯವರು ಸತತವಾಗಿ 2-3 ವರ್ಷ ಪಾದಯಾತ್ರೆ, ಸಮಾವೇಶಗಳು ಹರತಾಳ ಮುಂತಾದ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಕೊನೆಗೆ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ 70 ದಿನ ಧರಣಿ ಕುಳಿತ ಕಾರಣಕ್ಕಾಗಿ ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಿ ಮುಖ್ಯಮಂತ್ರಿ ಬೊಮ್ಮಾಯಿ ರವರಿಗೆ ಆದೇಶ ನೀಡಿ 2D ಮೀಸಲಾತಿ ಜಾರಿಗೆ ಬರುವುದಕ್ಕೆ ಕಾರಣವಾಗಿದೆ ಬಸವ ಜಯಂತಿಯ ಮೃತ್ಯುಂಜಯ ಸ್ವಾಮೀಜಿ ಅವರಿಗೆ ಇಡೀ ಕರ್ನಾಟಕದ ಲಿಂಗಾಯತ ಸಮಾಜ ಚಿರಋಣಿಯಾಗಿದೆ ಎಂದು ಮಲ್ಲೇಶ್ ಅಭಿಪ್ರಾಯ ಪಟ್ಟರು

ಬಸವನಗೌಡ ಪಾಟೀಲ್ ಯತ್ನಾಳ್, ವಿಜಯಾನಂದ ಕಾಶಪ್ಪನವರ್ ಹರಿಹರದ ಮಾಜಿ ಶಾಸಕ ಶಿವಶಂಕರ್ ಮುಂತಾದವರ ನೇತೃತ್ವದಲ್ಲಿ ಈ ಹೋರಾಟ ಆರಂಭವಾಗಿ ಯಶಸ್ವಿಯಾಗಿದೆ ನಮ್ಮ ಸಮಾಜ ಅವರಿಗೂ ಆಭಾರಿಯಾಗಿರುತ್ತದೆ ಎಂದು ಮಲ್ಲೇಶ್ ಹೇಳಿದ್ದಾರೆ
ರಾಜ್ಯದ ಚುನಾವಣಾ ಆಯೋಗ ಅನುಮತಿ ನೀಡಿದ್ದಲ್ಲಿ 5 ಲಕ್ಷ ಜನ ಲಿಂಗಾಯತರ ಸಮಾವೇಶ ಮಾಡಿ ಪ್ರಧಾನಿಗಳಿಗೆ ಅಮಿತ್ ಶಾ ರವರಿಗೆ ಬಸವ ವಿಜಯ ಮೃತ್ಯುಂಜಯ ಸ್ವಾಮೀಜಿ ಅವರಿಗೆ ಯತ್ನಾಳ್ ಕಾಶಪ್ಪನವರ್ ಶಿವಶಂಕರ್ ಅವರಿಗೆ ಅಭಿನಂದನೆ ಸಲ್ಲಿಸಲಾಗುವುದು ಎಂದು ಮಲ್ಲೇಶ ಅವರು ತಿಳಿಸಿದ್ದಾರೆ

ಬಸವ ಜಯ ಮೃತ್ಯುಂಜಯ ಸ್ವಾಮಿಜಿ ಅವರ ಹೋರಾಟದ ಫಲವಾಗಿ ಒಕ್ಕಲಿಗರಿಗೆ 2C ಮೂಲಕ ಶೇಕಡ 6 ರಂತೆ ,SC / ST ಜನರಿಗೆ ಮೀಸಲಾತಿ ಹೆಚ್ಚಳ, ಕುರುಬ ಜನಾಂಗವನ್ನು ST ಗೆ ಸೇರಿಸುವಂತೆ ಶಿಫಾರಸು ಮಾಡಿರುವುದು ಹಾಗೂ ಸದಾಶಿವ ಆಯೋಗ ಜಾರಿಯಾಗುವುದಕ್ಕೂ ಬಸವ ಜಯ ಮೃತ್ಯುಂಜಯ ಸ್ವಾಮೀಜಿಯವರ ಹೋರಾಟ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಕಾರಣವಾಗಿದೆ ಎಂದು ಮಲ್ಲೇಶ್ ಭಕ್ತಿ ಹೇಳಿದರು

ಈ ಮೀಸಲಾತಿ ಚಳುವಳಿಗೆ ಸಿದ್ದರಾಮಯ್ಯನವರು ಭಾರಿ ವಿರೋಧ ವ್ಯಕ್ತಪಡಿಸಿದರು ಸಿದ್ದರಾಮಯ್ಯನವರು ಕೇವಲ ತಮ್ಮ ಸ್ವಾರ್ಥಕ್ಕಾಗಿ ರಾಜಕಾರಣ ಮಾಡುತ್ತಿದ್ದು ರಾಜ್ಯದ ಬಡ ಜನತೆಯ ಪರವಾಗಿ ಮೀಸಲಾತಿ ಹೋರಾಟಕ್ಕೆ ಕೈಜೋಡಿಸಿರಲ್ಲ ಎಂದು ಈ ಕಾರಣಕ್ಕೆ ಬರುವ ಚುನಾವಣೆಯಲ್ಲಿ ಅವರಿಗೆ ತಕ್ಕ ಪಾಠ ಕಲಿಸಬೇಕೆಂದು ಮಲ್ಲೇಶ್ ಕರೆ ನೀಡಿದರು

lokesh

Recent Posts

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

6 mins ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

1 hour ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

2 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

2 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

2 hours ago

ಮುಡಾ ಪ್ರಕರಣ: ಮುಡಾ ಕಚೇರಿಯ ಮೇಲೆ ಇ.ಡಿ ದಾಳಿ

ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್‌ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…

3 hours ago