ಮೈಸೂರು

ಲಿಂಗಾಯಿತರಿಗೆ 2 D ಮೀಸಲಾತಿ : ಶೀಘ್ರದಲ್ಲೇ ಪ್ರಧಾನಿಗೆ ಸನ್ಮಾನ : ಮಲ್ಲೇಶ್

ಮೈಸೂರು : ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಖಾತಾ ಸಚಿವ ಅಮಿತ್ ಷಾ ಅವರ ನಿರ್ದೇಶನದ ಮೇರೆಗೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರವರು ಲಿಂಗಾಯತರಿಗೆ 2D ಪ್ರವರ್ಗ ರಚನೆ ಮಾಡಿ ಶೇಕಡ 5 ರಿಂದ 7 ಕ್ಕೆ ಹೆಚ್ಚಿಸಿರುವುದು ಹರ್ಷ ಉಂಟು ಮಾಡಿದ್ದು ಶೀಘ್ರದಲ್ಲೇ ಬೆಂಗಳೂರಿನಲ್ಲಿ ಐದು ಲಕ್ಷ ಲಿಂಗಾಯಿತರ ಸಮಾವೇಶ ಮಾಡಿ ಪ್ರಧಾನಿಯವರಿಗೆ ಅಭಿನಂದನೆ ಸಲ್ಲಿಸಲಾಗುವುದು ಎಂದು ಗೌಡ ಲಿಂಗಾಯಿತ – ಪಂಚಮಸಾಲಿ ಸಮನ್ವಯ ಸಮಿತಿಯ ರಾಜ್ಯ ಸಂಚಾಲಕ, BJP ರೈತ ಮುಖಂಡ ಮಲ್ಲೇಶ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಪಂಚಮಸಾಲಿ (ಗೌಡ ಲಿಂಗಾಯಿತ) ಸಮಾಜದ ಕೂಡಲಸಂಗಮಪೀಠದ ಪೀಠಾಧಿಪತಿ ಬಸವ ಜಯಂತಿಯ ಮೃತ್ಯುಂಜಯ ಸ್ವಾಮೀಜಿಯವರು ಸತತವಾಗಿ 2-3 ವರ್ಷ ಪಾದಯಾತ್ರೆ, ಸಮಾವೇಶಗಳು ಹರತಾಳ ಮುಂತಾದ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಕೊನೆಗೆ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ 70 ದಿನ ಧರಣಿ ಕುಳಿತ ಕಾರಣಕ್ಕಾಗಿ ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಿ ಮುಖ್ಯಮಂತ್ರಿ ಬೊಮ್ಮಾಯಿ ರವರಿಗೆ ಆದೇಶ ನೀಡಿ 2D ಮೀಸಲಾತಿ ಜಾರಿಗೆ ಬರುವುದಕ್ಕೆ ಕಾರಣವಾಗಿದೆ ಬಸವ ಜಯಂತಿಯ ಮೃತ್ಯುಂಜಯ ಸ್ವಾಮೀಜಿ ಅವರಿಗೆ ಇಡೀ ಕರ್ನಾಟಕದ ಲಿಂಗಾಯತ ಸಮಾಜ ಚಿರಋಣಿಯಾಗಿದೆ ಎಂದು ಮಲ್ಲೇಶ್ ಅಭಿಪ್ರಾಯ ಪಟ್ಟರು

ಬಸವನಗೌಡ ಪಾಟೀಲ್ ಯತ್ನಾಳ್, ವಿಜಯಾನಂದ ಕಾಶಪ್ಪನವರ್ ಹರಿಹರದ ಮಾಜಿ ಶಾಸಕ ಶಿವಶಂಕರ್ ಮುಂತಾದವರ ನೇತೃತ್ವದಲ್ಲಿ ಈ ಹೋರಾಟ ಆರಂಭವಾಗಿ ಯಶಸ್ವಿಯಾಗಿದೆ ನಮ್ಮ ಸಮಾಜ ಅವರಿಗೂ ಆಭಾರಿಯಾಗಿರುತ್ತದೆ ಎಂದು ಮಲ್ಲೇಶ್ ಹೇಳಿದ್ದಾರೆ
ರಾಜ್ಯದ ಚುನಾವಣಾ ಆಯೋಗ ಅನುಮತಿ ನೀಡಿದ್ದಲ್ಲಿ 5 ಲಕ್ಷ ಜನ ಲಿಂಗಾಯತರ ಸಮಾವೇಶ ಮಾಡಿ ಪ್ರಧಾನಿಗಳಿಗೆ ಅಮಿತ್ ಶಾ ರವರಿಗೆ ಬಸವ ವಿಜಯ ಮೃತ್ಯುಂಜಯ ಸ್ವಾಮೀಜಿ ಅವರಿಗೆ ಯತ್ನಾಳ್ ಕಾಶಪ್ಪನವರ್ ಶಿವಶಂಕರ್ ಅವರಿಗೆ ಅಭಿನಂದನೆ ಸಲ್ಲಿಸಲಾಗುವುದು ಎಂದು ಮಲ್ಲೇಶ ಅವರು ತಿಳಿಸಿದ್ದಾರೆ

ಬಸವ ಜಯ ಮೃತ್ಯುಂಜಯ ಸ್ವಾಮಿಜಿ ಅವರ ಹೋರಾಟದ ಫಲವಾಗಿ ಒಕ್ಕಲಿಗರಿಗೆ 2C ಮೂಲಕ ಶೇಕಡ 6 ರಂತೆ ,SC / ST ಜನರಿಗೆ ಮೀಸಲಾತಿ ಹೆಚ್ಚಳ, ಕುರುಬ ಜನಾಂಗವನ್ನು ST ಗೆ ಸೇರಿಸುವಂತೆ ಶಿಫಾರಸು ಮಾಡಿರುವುದು ಹಾಗೂ ಸದಾಶಿವ ಆಯೋಗ ಜಾರಿಯಾಗುವುದಕ್ಕೂ ಬಸವ ಜಯ ಮೃತ್ಯುಂಜಯ ಸ್ವಾಮೀಜಿಯವರ ಹೋರಾಟ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಕಾರಣವಾಗಿದೆ ಎಂದು ಮಲ್ಲೇಶ್ ಭಕ್ತಿ ಹೇಳಿದರು

ಈ ಮೀಸಲಾತಿ ಚಳುವಳಿಗೆ ಸಿದ್ದರಾಮಯ್ಯನವರು ಭಾರಿ ವಿರೋಧ ವ್ಯಕ್ತಪಡಿಸಿದರು ಸಿದ್ದರಾಮಯ್ಯನವರು ಕೇವಲ ತಮ್ಮ ಸ್ವಾರ್ಥಕ್ಕಾಗಿ ರಾಜಕಾರಣ ಮಾಡುತ್ತಿದ್ದು ರಾಜ್ಯದ ಬಡ ಜನತೆಯ ಪರವಾಗಿ ಮೀಸಲಾತಿ ಹೋರಾಟಕ್ಕೆ ಕೈಜೋಡಿಸಿರಲ್ಲ ಎಂದು ಈ ಕಾರಣಕ್ಕೆ ಬರುವ ಚುನಾವಣೆಯಲ್ಲಿ ಅವರಿಗೆ ತಕ್ಕ ಪಾಠ ಕಲಿಸಬೇಕೆಂದು ಮಲ್ಲೇಶ್ ಕರೆ ನೀಡಿದರು

lokesh

Recent Posts

ಇದ್ದೆರಡು ಇಂಡಿಗೋ ರದ್ದು

ಕೆ.ಬಿ.ರಮೇಶನಾಯಕ ಮೈಸೂರು: ದೇಶದಲ್ಲಿ ಇಂಡಿಗೋ ಏರ್ ಲೈನ್ಸ್ ಸಂಸ್ಥೆಯ ವಿಮಾನಗಳ ಸೇವೆ ವ್ಯತ್ಯಯಗೊಂಡಿದ್ದು, ಮೈಸೂರು ವಿಮಾನ ನಿಲ್ದಾಣದಿಂದ ಹೊರ ರಾಜ್ಯಗಳಿಗೆ…

9 mins ago

ಸಿಎಂಗೆ ವಿದ್ಯಾರ್ಥಿಗಳ ಪತ್ರ

ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…

3 hours ago

ದಿವ್ಯ ಎಂಬ ಅಂದಿನ ಕಾಲದ ಪಣ ಪರೀಕ್ಷೆ

ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…

3 hours ago

ಎಮ್ಮೆ ನಿನಗೆ ಸಾಟಿ ಇಲ್ಲ…

ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…

3 hours ago

ಭಾನುವಾರದ ಪುರವಣಿಗಳಲ್ಲಿ ಸಾಹಿತ್ಯ ಯಾಕೆ ಮಾಯ?

ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…

3 hours ago