ಮೈಸೂರು

ಲಿಂಗಾಯಿತರಿಗೆ 2 D ಮೀಸಲಾತಿ : ಶೀಘ್ರದಲ್ಲೇ ಪ್ರಧಾನಿಗೆ ಸನ್ಮಾನ : ಮಲ್ಲೇಶ್

ಮೈಸೂರು : ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಖಾತಾ ಸಚಿವ ಅಮಿತ್ ಷಾ ಅವರ ನಿರ್ದೇಶನದ ಮೇರೆಗೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರವರು ಲಿಂಗಾಯತರಿಗೆ 2D ಪ್ರವರ್ಗ ರಚನೆ ಮಾಡಿ ಶೇಕಡ 5 ರಿಂದ 7 ಕ್ಕೆ ಹೆಚ್ಚಿಸಿರುವುದು ಹರ್ಷ ಉಂಟು ಮಾಡಿದ್ದು ಶೀಘ್ರದಲ್ಲೇ ಬೆಂಗಳೂರಿನಲ್ಲಿ ಐದು ಲಕ್ಷ ಲಿಂಗಾಯಿತರ ಸಮಾವೇಶ ಮಾಡಿ ಪ್ರಧಾನಿಯವರಿಗೆ ಅಭಿನಂದನೆ ಸಲ್ಲಿಸಲಾಗುವುದು ಎಂದು ಗೌಡ ಲಿಂಗಾಯಿತ – ಪಂಚಮಸಾಲಿ ಸಮನ್ವಯ ಸಮಿತಿಯ ರಾಜ್ಯ ಸಂಚಾಲಕ, BJP ರೈತ ಮುಖಂಡ ಮಲ್ಲೇಶ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಪಂಚಮಸಾಲಿ (ಗೌಡ ಲಿಂಗಾಯಿತ) ಸಮಾಜದ ಕೂಡಲಸಂಗಮಪೀಠದ ಪೀಠಾಧಿಪತಿ ಬಸವ ಜಯಂತಿಯ ಮೃತ್ಯುಂಜಯ ಸ್ವಾಮೀಜಿಯವರು ಸತತವಾಗಿ 2-3 ವರ್ಷ ಪಾದಯಾತ್ರೆ, ಸಮಾವೇಶಗಳು ಹರತಾಳ ಮುಂತಾದ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಕೊನೆಗೆ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ 70 ದಿನ ಧರಣಿ ಕುಳಿತ ಕಾರಣಕ್ಕಾಗಿ ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಿ ಮುಖ್ಯಮಂತ್ರಿ ಬೊಮ್ಮಾಯಿ ರವರಿಗೆ ಆದೇಶ ನೀಡಿ 2D ಮೀಸಲಾತಿ ಜಾರಿಗೆ ಬರುವುದಕ್ಕೆ ಕಾರಣವಾಗಿದೆ ಬಸವ ಜಯಂತಿಯ ಮೃತ್ಯುಂಜಯ ಸ್ವಾಮೀಜಿ ಅವರಿಗೆ ಇಡೀ ಕರ್ನಾಟಕದ ಲಿಂಗಾಯತ ಸಮಾಜ ಚಿರಋಣಿಯಾಗಿದೆ ಎಂದು ಮಲ್ಲೇಶ್ ಅಭಿಪ್ರಾಯ ಪಟ್ಟರು

ಬಸವನಗೌಡ ಪಾಟೀಲ್ ಯತ್ನಾಳ್, ವಿಜಯಾನಂದ ಕಾಶಪ್ಪನವರ್ ಹರಿಹರದ ಮಾಜಿ ಶಾಸಕ ಶಿವಶಂಕರ್ ಮುಂತಾದವರ ನೇತೃತ್ವದಲ್ಲಿ ಈ ಹೋರಾಟ ಆರಂಭವಾಗಿ ಯಶಸ್ವಿಯಾಗಿದೆ ನಮ್ಮ ಸಮಾಜ ಅವರಿಗೂ ಆಭಾರಿಯಾಗಿರುತ್ತದೆ ಎಂದು ಮಲ್ಲೇಶ್ ಹೇಳಿದ್ದಾರೆ
ರಾಜ್ಯದ ಚುನಾವಣಾ ಆಯೋಗ ಅನುಮತಿ ನೀಡಿದ್ದಲ್ಲಿ 5 ಲಕ್ಷ ಜನ ಲಿಂಗಾಯತರ ಸಮಾವೇಶ ಮಾಡಿ ಪ್ರಧಾನಿಗಳಿಗೆ ಅಮಿತ್ ಶಾ ರವರಿಗೆ ಬಸವ ವಿಜಯ ಮೃತ್ಯುಂಜಯ ಸ್ವಾಮೀಜಿ ಅವರಿಗೆ ಯತ್ನಾಳ್ ಕಾಶಪ್ಪನವರ್ ಶಿವಶಂಕರ್ ಅವರಿಗೆ ಅಭಿನಂದನೆ ಸಲ್ಲಿಸಲಾಗುವುದು ಎಂದು ಮಲ್ಲೇಶ ಅವರು ತಿಳಿಸಿದ್ದಾರೆ

ಬಸವ ಜಯ ಮೃತ್ಯುಂಜಯ ಸ್ವಾಮಿಜಿ ಅವರ ಹೋರಾಟದ ಫಲವಾಗಿ ಒಕ್ಕಲಿಗರಿಗೆ 2C ಮೂಲಕ ಶೇಕಡ 6 ರಂತೆ ,SC / ST ಜನರಿಗೆ ಮೀಸಲಾತಿ ಹೆಚ್ಚಳ, ಕುರುಬ ಜನಾಂಗವನ್ನು ST ಗೆ ಸೇರಿಸುವಂತೆ ಶಿಫಾರಸು ಮಾಡಿರುವುದು ಹಾಗೂ ಸದಾಶಿವ ಆಯೋಗ ಜಾರಿಯಾಗುವುದಕ್ಕೂ ಬಸವ ಜಯ ಮೃತ್ಯುಂಜಯ ಸ್ವಾಮೀಜಿಯವರ ಹೋರಾಟ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಕಾರಣವಾಗಿದೆ ಎಂದು ಮಲ್ಲೇಶ್ ಭಕ್ತಿ ಹೇಳಿದರು

ಈ ಮೀಸಲಾತಿ ಚಳುವಳಿಗೆ ಸಿದ್ದರಾಮಯ್ಯನವರು ಭಾರಿ ವಿರೋಧ ವ್ಯಕ್ತಪಡಿಸಿದರು ಸಿದ್ದರಾಮಯ್ಯನವರು ಕೇವಲ ತಮ್ಮ ಸ್ವಾರ್ಥಕ್ಕಾಗಿ ರಾಜಕಾರಣ ಮಾಡುತ್ತಿದ್ದು ರಾಜ್ಯದ ಬಡ ಜನತೆಯ ಪರವಾಗಿ ಮೀಸಲಾತಿ ಹೋರಾಟಕ್ಕೆ ಕೈಜೋಡಿಸಿರಲ್ಲ ಎಂದು ಈ ಕಾರಣಕ್ಕೆ ಬರುವ ಚುನಾವಣೆಯಲ್ಲಿ ಅವರಿಗೆ ತಕ್ಕ ಪಾಠ ಕಲಿಸಬೇಕೆಂದು ಮಲ್ಲೇಶ್ ಕರೆ ನೀಡಿದರು

lokesh

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

8 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

9 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

10 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

12 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

14 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

14 hours ago