ಮೈಸೂರು

ಲಿಂಗಾಯಿತರಿಗೆ 2 D ಮೀಸಲಾತಿ : ಶೀಘ್ರದಲ್ಲೇ ಪ್ರಧಾನಿಗೆ ಸನ್ಮಾನ : ಮಲ್ಲೇಶ್

ಮೈಸೂರು : ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಖಾತಾ ಸಚಿವ ಅಮಿತ್ ಷಾ ಅವರ ನಿರ್ದೇಶನದ ಮೇರೆಗೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರವರು ಲಿಂಗಾಯತರಿಗೆ 2D ಪ್ರವರ್ಗ ರಚನೆ ಮಾಡಿ ಶೇಕಡ 5 ರಿಂದ 7 ಕ್ಕೆ ಹೆಚ್ಚಿಸಿರುವುದು ಹರ್ಷ ಉಂಟು ಮಾಡಿದ್ದು ಶೀಘ್ರದಲ್ಲೇ ಬೆಂಗಳೂರಿನಲ್ಲಿ ಐದು ಲಕ್ಷ ಲಿಂಗಾಯಿತರ ಸಮಾವೇಶ ಮಾಡಿ ಪ್ರಧಾನಿಯವರಿಗೆ ಅಭಿನಂದನೆ ಸಲ್ಲಿಸಲಾಗುವುದು ಎಂದು ಗೌಡ ಲಿಂಗಾಯಿತ – ಪಂಚಮಸಾಲಿ ಸಮನ್ವಯ ಸಮಿತಿಯ ರಾಜ್ಯ ಸಂಚಾಲಕ, BJP ರೈತ ಮುಖಂಡ ಮಲ್ಲೇಶ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಪಂಚಮಸಾಲಿ (ಗೌಡ ಲಿಂಗಾಯಿತ) ಸಮಾಜದ ಕೂಡಲಸಂಗಮಪೀಠದ ಪೀಠಾಧಿಪತಿ ಬಸವ ಜಯಂತಿಯ ಮೃತ್ಯುಂಜಯ ಸ್ವಾಮೀಜಿಯವರು ಸತತವಾಗಿ 2-3 ವರ್ಷ ಪಾದಯಾತ್ರೆ, ಸಮಾವೇಶಗಳು ಹರತಾಳ ಮುಂತಾದ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಕೊನೆಗೆ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ 70 ದಿನ ಧರಣಿ ಕುಳಿತ ಕಾರಣಕ್ಕಾಗಿ ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಿ ಮುಖ್ಯಮಂತ್ರಿ ಬೊಮ್ಮಾಯಿ ರವರಿಗೆ ಆದೇಶ ನೀಡಿ 2D ಮೀಸಲಾತಿ ಜಾರಿಗೆ ಬರುವುದಕ್ಕೆ ಕಾರಣವಾಗಿದೆ ಬಸವ ಜಯಂತಿಯ ಮೃತ್ಯುಂಜಯ ಸ್ವಾಮೀಜಿ ಅವರಿಗೆ ಇಡೀ ಕರ್ನಾಟಕದ ಲಿಂಗಾಯತ ಸಮಾಜ ಚಿರಋಣಿಯಾಗಿದೆ ಎಂದು ಮಲ್ಲೇಶ್ ಅಭಿಪ್ರಾಯ ಪಟ್ಟರು

ಬಸವನಗೌಡ ಪಾಟೀಲ್ ಯತ್ನಾಳ್, ವಿಜಯಾನಂದ ಕಾಶಪ್ಪನವರ್ ಹರಿಹರದ ಮಾಜಿ ಶಾಸಕ ಶಿವಶಂಕರ್ ಮುಂತಾದವರ ನೇತೃತ್ವದಲ್ಲಿ ಈ ಹೋರಾಟ ಆರಂಭವಾಗಿ ಯಶಸ್ವಿಯಾಗಿದೆ ನಮ್ಮ ಸಮಾಜ ಅವರಿಗೂ ಆಭಾರಿಯಾಗಿರುತ್ತದೆ ಎಂದು ಮಲ್ಲೇಶ್ ಹೇಳಿದ್ದಾರೆ
ರಾಜ್ಯದ ಚುನಾವಣಾ ಆಯೋಗ ಅನುಮತಿ ನೀಡಿದ್ದಲ್ಲಿ 5 ಲಕ್ಷ ಜನ ಲಿಂಗಾಯತರ ಸಮಾವೇಶ ಮಾಡಿ ಪ್ರಧಾನಿಗಳಿಗೆ ಅಮಿತ್ ಶಾ ರವರಿಗೆ ಬಸವ ವಿಜಯ ಮೃತ್ಯುಂಜಯ ಸ್ವಾಮೀಜಿ ಅವರಿಗೆ ಯತ್ನಾಳ್ ಕಾಶಪ್ಪನವರ್ ಶಿವಶಂಕರ್ ಅವರಿಗೆ ಅಭಿನಂದನೆ ಸಲ್ಲಿಸಲಾಗುವುದು ಎಂದು ಮಲ್ಲೇಶ ಅವರು ತಿಳಿಸಿದ್ದಾರೆ

ಬಸವ ಜಯ ಮೃತ್ಯುಂಜಯ ಸ್ವಾಮಿಜಿ ಅವರ ಹೋರಾಟದ ಫಲವಾಗಿ ಒಕ್ಕಲಿಗರಿಗೆ 2C ಮೂಲಕ ಶೇಕಡ 6 ರಂತೆ ,SC / ST ಜನರಿಗೆ ಮೀಸಲಾತಿ ಹೆಚ್ಚಳ, ಕುರುಬ ಜನಾಂಗವನ್ನು ST ಗೆ ಸೇರಿಸುವಂತೆ ಶಿಫಾರಸು ಮಾಡಿರುವುದು ಹಾಗೂ ಸದಾಶಿವ ಆಯೋಗ ಜಾರಿಯಾಗುವುದಕ್ಕೂ ಬಸವ ಜಯ ಮೃತ್ಯುಂಜಯ ಸ್ವಾಮೀಜಿಯವರ ಹೋರಾಟ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಕಾರಣವಾಗಿದೆ ಎಂದು ಮಲ್ಲೇಶ್ ಭಕ್ತಿ ಹೇಳಿದರು

ಈ ಮೀಸಲಾತಿ ಚಳುವಳಿಗೆ ಸಿದ್ದರಾಮಯ್ಯನವರು ಭಾರಿ ವಿರೋಧ ವ್ಯಕ್ತಪಡಿಸಿದರು ಸಿದ್ದರಾಮಯ್ಯನವರು ಕೇವಲ ತಮ್ಮ ಸ್ವಾರ್ಥಕ್ಕಾಗಿ ರಾಜಕಾರಣ ಮಾಡುತ್ತಿದ್ದು ರಾಜ್ಯದ ಬಡ ಜನತೆಯ ಪರವಾಗಿ ಮೀಸಲಾತಿ ಹೋರಾಟಕ್ಕೆ ಕೈಜೋಡಿಸಿರಲ್ಲ ಎಂದು ಈ ಕಾರಣಕ್ಕೆ ಬರುವ ಚುನಾವಣೆಯಲ್ಲಿ ಅವರಿಗೆ ತಕ್ಕ ಪಾಠ ಕಲಿಸಬೇಕೆಂದು ಮಲ್ಲೇಶ್ ಕರೆ ನೀಡಿದರು

lokesh

Recent Posts

ಗೂಡ್ಸ್ ಆಟೋ ಉರುಳಿ ಬಿದ್ದು ಮಹಿಳೆ ಸಾವು: ಹಲವರಿಗೆ ಗಾಯ

ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ಆಟೋ (ಟಾಟಾ ಏಸ್) ರಸ್ತೆ ಬದಿಗೆ ಉರುಳಿಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು,…

3 hours ago

ಹಾಸನ: ಆಟೋ ಪಲ್ಟಿಯಾಗಿ ತಾಯಿ-ಮಗ ಸಾವು

ಹಾಸನ: ಮಗನನ್ನು ಶಾಲೆಗೆ ಸೇರಿಸಲಯ ಪತ್ರಕ್ಕಾಗಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ಅತಿಬೇಗ ಮತ್ತು ನಿರ್ಲಕ್ಷ್ಯದಿಂದ ಪಲ್ಟಿಯಾದ ಪರಿಣಾಮ ಅಮ್ಮ…

7 hours ago

ಚಾಮುಂಡಿಬೆಟ್ಟಕ್ಕೆ ಬಾಲಿವುಡ್ ನಟ ರಣವೀರ್ ಸಿಂಗ್ ಭೇಟಿ ವಿಚಾರ: ಅರ್ಚಕ ಸುನೀಲ್ ದೀಕ್ಷಿತ್ ಪ್ರತಿಕ್ರಿಯೆ

ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ಭೇಟಿ ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮುಂಡಿಬೆಟ್ಟದ…

7 hours ago

ರೈತರ ಆದಾಯ ಹೆಚ್ಚಿಸುವುದೇ ನಮ್ಮ ಸರ್ಕಾರದ ಗುರಿ: ಎನ್.ಚಲುವರಾಯಸ್ವಾಮಿ.

ಬೆಂಗಳೂರು: ಇಂದು ಕೃಷಿ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಏರಿಕೆ, ಮಾರುಕಟ್ಟೆ ಅಸ್ಥಿರತೆ ಮತ್ತು…

8 hours ago

ಸಿಎಂ ಬದಲಾದರೆ ಪರಮೇಶ್ವರ್‌ ಸಿಎಂ ಆಗಲಿ: ಮಾಜಿ ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ಸಿಎಂ ಬದಲಾವಣೆ ಆದರೆ ಪರಮೇಶ್ವರ್‌ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು…

9 hours ago

ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ವಿರೋಧಿಸಿ ಪ್ರತಿಭಟನೆ

ಮೈಸೂರು: ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ…

10 hours ago