ಮೈಸೂರು

ಲಿಂಗಾಯಿತರಿಗೆ 2 D ಮೀಸಲಾತಿ : ಶೀಘ್ರದಲ್ಲೇ ಪ್ರಧಾನಿಗೆ ಸನ್ಮಾನ : ಮಲ್ಲೇಶ್

ಮೈಸೂರು : ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಖಾತಾ ಸಚಿವ ಅಮಿತ್ ಷಾ ಅವರ ನಿರ್ದೇಶನದ ಮೇರೆಗೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರವರು ಲಿಂಗಾಯತರಿಗೆ 2D ಪ್ರವರ್ಗ ರಚನೆ ಮಾಡಿ ಶೇಕಡ 5 ರಿಂದ 7 ಕ್ಕೆ ಹೆಚ್ಚಿಸಿರುವುದು ಹರ್ಷ ಉಂಟು ಮಾಡಿದ್ದು ಶೀಘ್ರದಲ್ಲೇ ಬೆಂಗಳೂರಿನಲ್ಲಿ ಐದು ಲಕ್ಷ ಲಿಂಗಾಯಿತರ ಸಮಾವೇಶ ಮಾಡಿ ಪ್ರಧಾನಿಯವರಿಗೆ ಅಭಿನಂದನೆ ಸಲ್ಲಿಸಲಾಗುವುದು ಎಂದು ಗೌಡ ಲಿಂಗಾಯಿತ – ಪಂಚಮಸಾಲಿ ಸಮನ್ವಯ ಸಮಿತಿಯ ರಾಜ್ಯ ಸಂಚಾಲಕ, BJP ರೈತ ಮುಖಂಡ ಮಲ್ಲೇಶ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಪಂಚಮಸಾಲಿ (ಗೌಡ ಲಿಂಗಾಯಿತ) ಸಮಾಜದ ಕೂಡಲಸಂಗಮಪೀಠದ ಪೀಠಾಧಿಪತಿ ಬಸವ ಜಯಂತಿಯ ಮೃತ್ಯುಂಜಯ ಸ್ವಾಮೀಜಿಯವರು ಸತತವಾಗಿ 2-3 ವರ್ಷ ಪಾದಯಾತ್ರೆ, ಸಮಾವೇಶಗಳು ಹರತಾಳ ಮುಂತಾದ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಕೊನೆಗೆ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ 70 ದಿನ ಧರಣಿ ಕುಳಿತ ಕಾರಣಕ್ಕಾಗಿ ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಿ ಮುಖ್ಯಮಂತ್ರಿ ಬೊಮ್ಮಾಯಿ ರವರಿಗೆ ಆದೇಶ ನೀಡಿ 2D ಮೀಸಲಾತಿ ಜಾರಿಗೆ ಬರುವುದಕ್ಕೆ ಕಾರಣವಾಗಿದೆ ಬಸವ ಜಯಂತಿಯ ಮೃತ್ಯುಂಜಯ ಸ್ವಾಮೀಜಿ ಅವರಿಗೆ ಇಡೀ ಕರ್ನಾಟಕದ ಲಿಂಗಾಯತ ಸಮಾಜ ಚಿರಋಣಿಯಾಗಿದೆ ಎಂದು ಮಲ್ಲೇಶ್ ಅಭಿಪ್ರಾಯ ಪಟ್ಟರು

ಬಸವನಗೌಡ ಪಾಟೀಲ್ ಯತ್ನಾಳ್, ವಿಜಯಾನಂದ ಕಾಶಪ್ಪನವರ್ ಹರಿಹರದ ಮಾಜಿ ಶಾಸಕ ಶಿವಶಂಕರ್ ಮುಂತಾದವರ ನೇತೃತ್ವದಲ್ಲಿ ಈ ಹೋರಾಟ ಆರಂಭವಾಗಿ ಯಶಸ್ವಿಯಾಗಿದೆ ನಮ್ಮ ಸಮಾಜ ಅವರಿಗೂ ಆಭಾರಿಯಾಗಿರುತ್ತದೆ ಎಂದು ಮಲ್ಲೇಶ್ ಹೇಳಿದ್ದಾರೆ
ರಾಜ್ಯದ ಚುನಾವಣಾ ಆಯೋಗ ಅನುಮತಿ ನೀಡಿದ್ದಲ್ಲಿ 5 ಲಕ್ಷ ಜನ ಲಿಂಗಾಯತರ ಸಮಾವೇಶ ಮಾಡಿ ಪ್ರಧಾನಿಗಳಿಗೆ ಅಮಿತ್ ಶಾ ರವರಿಗೆ ಬಸವ ವಿಜಯ ಮೃತ್ಯುಂಜಯ ಸ್ವಾಮೀಜಿ ಅವರಿಗೆ ಯತ್ನಾಳ್ ಕಾಶಪ್ಪನವರ್ ಶಿವಶಂಕರ್ ಅವರಿಗೆ ಅಭಿನಂದನೆ ಸಲ್ಲಿಸಲಾಗುವುದು ಎಂದು ಮಲ್ಲೇಶ ಅವರು ತಿಳಿಸಿದ್ದಾರೆ

ಬಸವ ಜಯ ಮೃತ್ಯುಂಜಯ ಸ್ವಾಮಿಜಿ ಅವರ ಹೋರಾಟದ ಫಲವಾಗಿ ಒಕ್ಕಲಿಗರಿಗೆ 2C ಮೂಲಕ ಶೇಕಡ 6 ರಂತೆ ,SC / ST ಜನರಿಗೆ ಮೀಸಲಾತಿ ಹೆಚ್ಚಳ, ಕುರುಬ ಜನಾಂಗವನ್ನು ST ಗೆ ಸೇರಿಸುವಂತೆ ಶಿಫಾರಸು ಮಾಡಿರುವುದು ಹಾಗೂ ಸದಾಶಿವ ಆಯೋಗ ಜಾರಿಯಾಗುವುದಕ್ಕೂ ಬಸವ ಜಯ ಮೃತ್ಯುಂಜಯ ಸ್ವಾಮೀಜಿಯವರ ಹೋರಾಟ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಕಾರಣವಾಗಿದೆ ಎಂದು ಮಲ್ಲೇಶ್ ಭಕ್ತಿ ಹೇಳಿದರು

ಈ ಮೀಸಲಾತಿ ಚಳುವಳಿಗೆ ಸಿದ್ದರಾಮಯ್ಯನವರು ಭಾರಿ ವಿರೋಧ ವ್ಯಕ್ತಪಡಿಸಿದರು ಸಿದ್ದರಾಮಯ್ಯನವರು ಕೇವಲ ತಮ್ಮ ಸ್ವಾರ್ಥಕ್ಕಾಗಿ ರಾಜಕಾರಣ ಮಾಡುತ್ತಿದ್ದು ರಾಜ್ಯದ ಬಡ ಜನತೆಯ ಪರವಾಗಿ ಮೀಸಲಾತಿ ಹೋರಾಟಕ್ಕೆ ಕೈಜೋಡಿಸಿರಲ್ಲ ಎಂದು ಈ ಕಾರಣಕ್ಕೆ ಬರುವ ಚುನಾವಣೆಯಲ್ಲಿ ಅವರಿಗೆ ತಕ್ಕ ಪಾಠ ಕಲಿಸಬೇಕೆಂದು ಮಲ್ಲೇಶ್ ಕರೆ ನೀಡಿದರು

lokesh

Recent Posts

ಕಾಕ್ರೋಚ್‌ ಪ್ರತಿಭಟನೆ ; ವಿದ್ಯಾರ್ಥಿಗಳ ರಕ್ಷಣೆಗೆ ಪೊಲೀಸ್‌ ವ್ಯಾನ್‌ ತಡೆದ ಜೇನ್‌-ಝಿ ಕಿಡ್‌

ಮುಂಬೈ : ನೀಟ್‌ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್‌ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…

2 hours ago

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

15 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

15 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

15 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

15 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

15 hours ago