ಮೈಸೂರು

ಸ್ವಚ್ಛ ನಗರಿ ಮೈಸೂರಿಗೆ 2ನೇ ಸ್ಥಾನ

ಮೈಸೂರು ;ಸಾಂಸ್ಕೃತಿಕ ನಗರಿ ಮೈಸೂರುಗೆ ಮತ್ತೆ ಎರಡನೇ ಸ್ವಚ್ಛ ನಗರಿಯ ಗೌರವ ಲೌಯವಾಗಿದೆ. ಸ್ವಚ್ಚ ಸರ್ವೇಕ್ಷಣೆಯಲ್ಲಿ 3 ರಿಂದ 10 ಲಕ್ಷ ಜನಸಂಖ್ಯೆ ಹೊಂದಿರುವ ನಗರಗಳ ಪಟ್ಟಿಯಲ್ಲಿ ಮೈಸೂರು ನಗರದ ಎರಡನೇ ಸ್ಥಾನ ಪಡೆದಿದೆ. ಕಳೆದ ಬಾರಿ 2021ರಲ್ಲಿ ಮೈಸೂರು 7ನೇ  ಸ್ಥಾನದಲ್ಲಿತ್ತು. ದೇಶದ ಒಟ್ಟಾರೆ ಎಲ್ಲಾ ವಿಭಾಗಗಳ ಸ್ವಚ್ಛ ಸರ್ವೇಕ್ಷಣೆಯಲ್ಲಿ ಮೈಸೂರು 8ನೇ ಸ್ಥಾನದಲ್ಲಿದೆ. ದೇಶದ ಒಟ್ಟಾರೆ ಎಲ್ಲಾ ವಿಭಾಗಗಳ ಸರ್ವೇಕ್ಷಣೆಯಲ್ಲಿ ಮೈಸೂರು 8 ನೇ ಸ್ಥಾನದಲ್ಲಿದೆ. ಸ್ವಚ್ಛ ಸರ್ವೇಕ್ಷಣೆಗೆ ಸಂಬಂದಿಸಿದಂತೆ ಕೇಂದ್ರ ನಗರಾಬಿವೃದ್ಧಿ ಸಚಿವಾಲಯದಿಂದ ಜನವರಿ ತಿಂಗಳಿನಲ್ಲಿ ಮೈಸೂರು ಸುತ್ತ ಮುತ್ತ ಸರ್ವೇಕ್ಷಣಾ ಸರ್ವೇ ನಡೆಸಲಾಗಿತ್ತು. ಈ ಸ್ಪರ್ಧೆಯಲ್ಲಿ 1,850 ಕ್ಕೂ ಹೆಚ್ಚು ನಗರಗಳು ಭಾಗವಹಿಸಿದ್ದವು.

ಹೊಸದಿಲ್ಲಿಯ ತಲ್‌ ಕಟೋರಾ ಸ್ಟೇಡಿಯಂ ನಲ್ಲಿ ಶನಿವಾತ ನಡೆದ ಸಮಾಸರಂಭದಲ್ಲಿ ನಗರಾಭಿವೃದ್ಧಿ ಸಚಿವ ಹರ್ದೀವ್‌ ಪುರಿ ಸಿಂಗ್‌  ಪ್ರಶಸ್ತಿ ಪ್ರಧಾನ ಮಾಡಿದರು. ಮೈಸೂರು ಮಹಾನಗರಪಾಲಿಕೆಯ ಮಹಾಪೌರರಾದ ಶಿವಕುಮಾರ್‌ ಉಪ ಮಹಾಪೌರರಾದ ಡಾ ಜಿ ರೂಪ ಹಾಗೂ ಆಯುಕ್ತ ಲಕ್ಷ್ಮೀ ಕಾಂತ ರೆಡ್ಡಿ ಅವರು ಪ್ರಶಸ್ತಿ ಸ್ವೀಕರಿಸಿದರು.

andolana

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 25 ಶನಿವಾರ  

7 hours ago

ನೋಟ-ಪ್ರತಿನೋಟ | ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಸರಿಯೇ? ತಪ್ಪೇ?

ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…

7 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಗೆ ಅಜ್ಜಿ ಒಡವೆ ನೀಡಿದ ಪ್ರಸಂಗ…

ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…

7 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಯ ಉಡುಪು ಯಾಕೆ ಬದಲಾಯಿತು?

  ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…

7 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಸಜ್ಜನನಾದ ಆಂಗ್ಲನಾಗುವ ಪ್ರಯತ್ನ

ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್‌ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…

8 hours ago

ಎರಡನೇ ಆಷಾಢ ಶುಕ್ರವಾರದ ಸಂಭ್ರಮ: ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ತಾಯಿ ಚಾಮುಂಡೇಶ್ವರಿ

ಮೈಸೂರು: ಆಷಾಢ ಮಾಸದ ಎರಡನೇ ಶುಕ್ರವಾರವಾದ ಇಂದು ನಾಡ ಅಧಿದೇವತೆ ನೆಲೆಸಿರುವ ಚಾಮುಂಡಿಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾಳೆ.…

1 day ago