ಮೈಸೂರು

ದ್ವಿತೀಯ ಪಿಯುಸಿ | ಮೈಸೂರು ಟಾಪ್‌ 10ರೊಳಗೆ ಸ್ಥಾನ ಪಡೆಯಲು ಶ್ರಮಿಸಿ

ಮೈಸೂರು : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಜಿಲ್ಲೆಯಲ್ಲಿ ಕಳೆದ ವರ್ಷದ ಸ್ಥಾನವನ್ನು ಉಳಿಸಿಕೊಳ್ಳುವ ಜತೆಗೆ 10ನೇ ಸ್ಥಾನದೊಳಗೆ ಬರಲು ಶ್ರಮಿಸಬೇಕು. ಶೇ.40ಕ್ಕಿಂತ ಕಡಿಮೆ ಬರುವ ಕಾಲೇಜುಗಳ ಪ್ರಾಂಶುಪಾಲರ ಮೇಲೆ ಕ್ರಮಜರುಗಿಸಲು ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಯುಕೇಶ್‌ಕುಮಾರ್ ತಾಕೀತು ಮಾಡಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಮೈಸೂರು ಜಿಲ್ಲೆಯ ಸರ್ಕಾರಿ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ವರ್ಷ ಜಿಲ್ಲೆಯು 14ನೇ ಸ್ಥಾನವನ್ನು ಪಡೆದಿತ್ತು. ಈ ಬಾರಿ ಅದಕ್ಕಿಂತ ಕಡಿಮೆ ಫಲಿತಾಂಶ ಬರದಂತೆ ನೋಡಿಕೊಂಡು 10ರೊಳಗೆ ಸ್ಥಾನ ಪಡೆಯಬೇಕು. ಈ ಬಗ್ಗೆ ಗಮನಹರಿಸಬೇಕು ಎಂದು ತಿಳಿಸಿದರು.

ಪರೀಕ್ಷೆಯು ಹತ್ತಿರದಲ್ಲಿ ಇರುವ ಕಾರಣ ಮೊದಲ ಐದರೊಳಗೆ ಬರಲು ಶ್ರಮಿಸಿದರೂ ಹತ್ತನೇ ಸ್ಥಾನಕ್ಕೆ ತಲುಪಬಹುದು. ಸರ್ಕಾರಿ ಕಾಲೇಜುಗಳಲ್ಲಿ ಶೇ.40ಕ್ಕಿಂತ ಕಡಿಮೆ ಫಲಿತಾಂಶ ಬಂದರೆ ನಾನು ಸುಮ್ಮನಿರುವುದಿಲ್ಲ. ಅಂತಹ ಕಾಲೇಜುಗಳ ಪ್ರಾಂಶುಪಾಲರ ಕಾರ್ಯವೈಖರಿ ಬಗ್ಗೆ ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ಎಚ್ಚರಿಕೆ ನೀಡಿದರು.

ನಂಜನಗೂಡು ತಾಲ್ಲೂಕಿನ ಕಾರ್ಯ, ದಾಸನೂರು, ಕೆ.ಆರ್.ನಗರ ತಾಲ್ಲೂಕಿನ ಗಂಧನಹಳ್ಳಿ ಕಾಲೇಜುಗಳಲ್ಲಿ ಪೂರ್ವ ಪರೀಕ್ಷೆಯಲ್ಲಿ ಇಂಗ್ಲಿಷ್, ಅರ್ಥಶಾಸ, ರಾಜ್ಯಶಾಸ ವಿಷಯಗಳಲ್ಲಿ ಕಡಿಮೆ ಅಂಕ ಪಡೆದಿರುವ ವಿದ್ಯಾರ್ಥಿಗಳ ಅಂಕಿ ಅಂಶಗಳನ್ನು ಪರಿಶೀಲಿಸಿದ ಸಿಇಒ, ಒಂದೊಂದು ಕಾಲೇಜುಗಳ ಪ್ರಾಂಶುಪಾಲರಿಂದ ವಿವರಣೆ ಪಡೆದು ಚಾಟಿ ಬೀಸಿದರು.

ದೇವನೂರು ಸರ್ಕಾರಿ ಕಾಲೇಜಿನಲ್ಲಿ 30 ವಿದ್ಯಾರ್ಥಿಗಳಿದ್ದು, ಫಲಿತಾಂಶ ಸುಧಾರಿಸಲಾಗಿದೆ. ಅದೇ ರೀತಿ ಬೇರೆ ಕಾಲೇಜುಗಳಲ್ಲಿ ಸುಧಾರಿಸಲು ಯಾಕೆ ಹಿಂದೇಟು ಹಾಕಲಾಗುತ್ತಿದೆ? ನೀವು ವಿಶೇಷ ತರಗತಿಗಳನ್ನು ಮಾಡುವ ಜತೆಗೆ, ಮೊದಲ ಎರಡು ತರಗತಿ ಬಿಟ್ಟು ಬರುವ ವಿದ್ಯಾರ್ಥಿಗಳನ್ನು ಗಮನಿಸಬೇಕು. ಅಂತಹವರ ಪೋಷಕರನ್ನು ಕರೆಸಿ ಎಚ್ಚರಿಕೆ ಕೊಡಿಸಬೇಕು ಎಂದು ಸೂಚಿಸಿದರು.

ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ಫಲಿತಾಂಶ ತೃಪ್ತಿಕರವಾಗದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಎಸ್.ಯುಕೇಶ್‌ಕುಮಾರ್ ಅವರು, ಶೇ.100ರಷ್ಟು ಗುರಿ ಇಟ್ಟುಕೊಂಡರೆ ಕನಿಷ್ಠ 80ರಷ್ಟು ಫಲಿತಾಂಶ ಬರಲಿದೆ. ಮಕ್ಕಳಿಗೆ ಸುಮ್ಮನೇ ಪಾಠ ಮಾಡಿ ಹೋದರೆ ಪ್ರಯೋಜನವಾಗದು. ನಮ್ಮ ಗುರಿ ಫಲಿತಾಂಶ ಹೆಚ್ಚು ಮಾಡುವ ಕಡೆಗೆ ಇರಬೇಕು ಎಂದು ತಿಳಿಸಿದರು.

ಪಿಯು ಡಿಡಿ ನಾಗಮ್ಮ ಮಾತನಾಡಿ, ಕಳೆದ ವರ್ಷಕ್ಕಿಂತ ಈ ಬಾರಿ ಫಲಿತಾಂಶ ಸುಧಾರಿಸಲು ಅಗತ್ಯ ಕ್ರಮಕೈಗೊಂಡು ಹಲವಾರು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪ್ರಾಂಶುಪಾಲರು, ಉಪನ್ಯಾಸಕರು ಪೂರ್ವ ಪರೀಕ್ಷೆಯಲ್ಲಿ 20 ಅಂಕಗಳನ್ನು ಪಡೆದಿರುವ ವಿದ್ಯಾರ್ಥಿಗಳನ್ನು ಕರೆದು ಮಾತುಕತೆ ನಡೆಸಿ ಹೆಚ್ಚಿನ ಪಾಠ ಮಾಡಲಾಗುತ್ತಿದೆ. ಕೆಲವು ಉಪನ್ಯಾಸಕರು ಇಂತಿಷ್ಟು ಮಕ್ಕಳು ಎನ್ನುವಂತೆ ದತ್ತು ಪಡೆದು ಕೊಂಡು ಫಲಿತಾಂಶ ಹೆಚ್ಚು ತರಲು ಒಪ್ಪಿಕೊಂಡಿದ್ದಾರೆ. ಕೆಲವು ಉಪನ್ಯಾಸಕರು ವಿದ್ಯಾರ್ಥಿನಿಲಯಗಳಿಗೆ ತೆರಳಿ ವಿಶೇಷ ತರಗತಿ ನಡೆಸುತ್ತಿದ್ದಾರೆ ಎಂದು ವಿವರಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

13 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

14 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

14 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

14 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

14 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

17 hours ago