3 cows killed in tiger attack
ಮಡುವಿನಹಳ್ಳಿ : ಹುಲಿ ದಾಳಿಗೆ ಮೂರು ಹಸುಗಳು ಬಲಿಯಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಮಡುವಿನಹಳ್ಳಿಯಲ್ಲಿ ನಡೆದಿದೆ.
ಶುಕ್ರವಾರ ಬೆಳಿಗ್ಗೆ 11 ಗಂಟೆ ಸಮಯದಲ್ಲಿ ಗ್ರಾಮದ ಜಮೀನಿನಲ್ಲಿ ಮೇಯುತ್ತಿದ್ದ ಹಸುಗಳ ಮೇಲೆ ಹುಲಿ ದಾಳಿ ನಡೆಸಿ 3 ಹಸುಗಳನ್ನು ಕೊಂದುಹಾಕಿದೆ.
ಗ್ರಾಮದ ಸುತ್ತಮುತ್ತ ಹುಲಿ ಸಂಚರಿಸುತ್ತಿರುವ ಕುರಿತು ಈಗಾಗಲೇ ಪತ್ರಿಕೆಗಳಲ್ಲಿ ವರದಿ ಪ್ರಕಟವಾಗಿದ್ದರೂ ಹುಲಿ ಸೆರೆಗೆ ಅರಣ್ಯ ಇಲಾಖೆಯ ಅಧಿಕಾರಿಗಳು ಮುಂದಾಗಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ. ಸ್ಥಳಕ್ಕೆ ಆಗಮಿಸಿದ ಹೆಡಿಯಾಲ ಉಪ ವಲಯ ಅರಣ್ಯ ಅಧಿಕಾರಿಗಳಾದ ಕಾರ್ತಿಕ್ ಮತ್ತು ಕಿರಣ್ ಅವರು ಸ್ಥಳವನ್ನು ಪರಿಶೀಲಿಸಿ, ಮೃತ ಹಸುಗಳ ಮಹಜರು ಮಾಡಿ, ಸರ್ಕಾರದ ವತಿಯಿಂದ ಪರಿಹಾರ ನೀಡಲು ವರದಿ ಸಲ್ಲಿಸಲಾಗುವುದು ಎಂದರು.
ರೈತ ಮಹೇಶ್ ಮಾತನಾಡಿ, ಸಾಲ ಮಾಡಿ ಹಸುವನ್ನು ತಂದು ಜೀವನ ನಡೆಸುತ್ತಾ, ಇಬ್ಬರು ಹೆಣ್ಣು ಮಕ್ಕಳ ವಿದ್ಯಾಭ್ಯಾಸ ಮಾಡಿಸುತ್ತಿದ್ದೇನೆ. 70 ಸಾವಿರ ರೂ. ಮೌಲ್ಯದ ಹಸುಗಳು ಹುಲಿ ದಾಳಿಯಿಂದ ಸಾವಿಗೀಡಾಗಿರುವುದರಿಂದ ಜೀವನ ನಡೆಸಲು ಕಷ್ಟವಾಗಿದೆ. ಜಮೀನಿನಲ್ಲಿ ವ್ಯವಸಾಯ ಮಾಡಲು ಭಯವಾಗುತ್ತಿದೆ. ವಲಯ ಅರಣ್ಯ ಅಽಕಾರಿಗಳು ಮತ್ತು ಈ ಭಾಗದ ಶಾಸಕರಾದ ದರ್ಶನ್ ಧ್ರುವನಾರಾಯಣ ಅವರು ಹುಲಿ ಸೆರೆಗೆ ಬೋನು ಇರಿಸಿ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ರೈತ ನಿಜಲಿಂಗಪ್ಪ ಮಾತನಾಡಿ, ನಮ್ಮ ಹಸುವನ್ನು ಹುಲಿ ದಾಳಿ ಮಾಡಿ ಕೊಂದುಹಾಕಿದೆ. ಇದರಿಂದ ನಮ್ಮ ಜೀವನಕ್ಕೆ ತೊಂದರೆಯಾಗಿದೆ. ಶಾಸಕರು ಮತ್ತು ಸಂಸದರು ಆಗಮಿಸಿ ಅರಣ್ಯ ಅಽಕಾರಿಗಳ ಜೊತೆ ಮಾತನಾಡಿ ರೈತರಿಗೆ ರಕ್ಷಣೆಯನ್ನು ನೀಡಬೇಕು ಎಂದು ಮನವಿ ಮಾಡಿದರು.
ಗ್ರಾಮಸ್ಥರಾದ ಎಂ.ಬಿ.ಬಸವರಾಜ್ ಹಾಗೂ ರೈತ ಸಂಘದ ಸದಸ್ಯರು ಅಽಕಾರಿಗಳು ಮತ್ತು ರೈತರ ಜೊತೆ ಮಾತನಾಡಿ, ನಮಗೆ ಹೆಚ್ಚಿನ ರೀತಿಯಲ್ಲಿ ಪರಿಹಾರ ಕೊಡಿಸಬೇಕು. ಈ ಭಾಗದಲ್ಲಿ ೩-೪ ದಿನಗಳಿಂದಲೂ ಹುಲಿಗಳು ಓಡಾಡುತ್ತಿದ್ದು, ರೈತರಿಗೆ ಜಮೀನಿಗೆ ಬರಲು ಕಷ್ಟವಾಗುತ್ತಿದೆ. ರಾತ್ರಿ ವೇಳೆ ಜಮೀನಿಗೆ ಹೋಗಲು ರೈತರು ಭಯಪಡುತ್ತಿದ್ದಾರೆ. ಅಽಕಾರಿಗಳು ರಾತ್ರಿ ವೇಳೆ ನಮ್ಮ ಗ್ರಾಮದ ಸುತ್ತಮುತ್ತ ವಾಹನದಲ್ಲಿ ಗಸ್ತು ತಿರುಗಬೇಕು. ಹುಲಿಯನ್ನು ಸೆರೆಹಿಡಿಯಬೇಕು ಎಂದು ಒತ್ತಾಯಿಸಿದರು.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…