ಮೈಸೂರು

ನಂಜನಗೂಡು : ಹುಲಿ ದಾಳಿಗೆ 3 ಹಸುಗಳು ಸಾವು

ಮಡುವಿನಹಳ್ಳಿ : ಹುಲಿ ದಾಳಿಗೆ ಮೂರು ಹಸುಗಳು ಬಲಿಯಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಮಡುವಿನಹಳ್ಳಿಯಲ್ಲಿ ನಡೆದಿದೆ.

ಶುಕ್ರವಾರ ಬೆಳಿಗ್ಗೆ 11 ಗಂಟೆ ಸಮಯದಲ್ಲಿ ಗ್ರಾಮದ ಜಮೀನಿನಲ್ಲಿ ಮೇಯುತ್ತಿದ್ದ ಹಸುಗಳ ಮೇಲೆ ಹುಲಿ ದಾಳಿ ನಡೆಸಿ 3 ಹಸುಗಳನ್ನು ಕೊಂದುಹಾಕಿದೆ.

ಗ್ರಾಮದ ಸುತ್ತಮುತ್ತ ಹುಲಿ ಸಂಚರಿಸುತ್ತಿರುವ ಕುರಿತು ಈಗಾಗಲೇ ಪತ್ರಿಕೆಗಳಲ್ಲಿ ವರದಿ ಪ್ರಕಟವಾಗಿದ್ದರೂ ಹುಲಿ ಸೆರೆಗೆ ಅರಣ್ಯ ಇಲಾಖೆಯ ಅಧಿಕಾರಿಗಳು ಮುಂದಾಗಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ. ಸ್ಥಳಕ್ಕೆ ಆಗಮಿಸಿದ ಹೆಡಿಯಾಲ ಉಪ ವಲಯ ಅರಣ್ಯ ಅಧಿಕಾರಿಗಳಾದ ಕಾರ್ತಿಕ್ ಮತ್ತು ಕಿರಣ್ ಅವರು ಸ್ಥಳವನ್ನು ಪರಿಶೀಲಿಸಿ, ಮೃತ ಹಸುಗಳ ಮಹಜರು ಮಾಡಿ, ಸರ್ಕಾರದ ವತಿಯಿಂದ ಪರಿಹಾರ ನೀಡಲು ವರದಿ ಸಲ್ಲಿಸಲಾಗುವುದು ಎಂದರು.

ರೈತ ಮಹೇಶ್ ಮಾತನಾಡಿ, ಸಾಲ ಮಾಡಿ ಹಸುವನ್ನು ತಂದು ಜೀವನ ನಡೆಸುತ್ತಾ, ಇಬ್ಬರು ಹೆಣ್ಣು ಮಕ್ಕಳ ವಿದ್ಯಾಭ್ಯಾಸ ಮಾಡಿಸುತ್ತಿದ್ದೇನೆ. 70 ಸಾವಿರ ರೂ. ಮೌಲ್ಯದ ಹಸುಗಳು ಹುಲಿ ದಾಳಿಯಿಂದ ಸಾವಿಗೀಡಾಗಿರುವುದರಿಂದ ಜೀವನ ನಡೆಸಲು ಕಷ್ಟವಾಗಿದೆ. ಜಮೀನಿನಲ್ಲಿ ವ್ಯವಸಾಯ ಮಾಡಲು ಭಯವಾಗುತ್ತಿದೆ. ವಲಯ ಅರಣ್ಯ ಅಽಕಾರಿಗಳು ಮತ್ತು ಈ ಭಾಗದ ಶಾಸಕರಾದ ದರ್ಶನ್ ಧ್ರುವನಾರಾಯಣ ಅವರು ಹುಲಿ ಸೆರೆಗೆ ಬೋನು ಇರಿಸಿ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ರೈತ ನಿಜಲಿಂಗಪ್ಪ ಮಾತನಾಡಿ, ನಮ್ಮ ಹಸುವನ್ನು ಹುಲಿ ದಾಳಿ ಮಾಡಿ ಕೊಂದುಹಾಕಿದೆ. ಇದರಿಂದ ನಮ್ಮ ಜೀವನಕ್ಕೆ ತೊಂದರೆಯಾಗಿದೆ. ಶಾಸಕರು ಮತ್ತು ಸಂಸದರು ಆಗಮಿಸಿ ಅರಣ್ಯ ಅಽಕಾರಿಗಳ ಜೊತೆ ಮಾತನಾಡಿ ರೈತರಿಗೆ ರಕ್ಷಣೆಯನ್ನು ನೀಡಬೇಕು ಎಂದು ಮನವಿ ಮಾಡಿದರು.

ಗ್ರಾಮಸ್ಥರಾದ ಎಂ.ಬಿ.ಬಸವರಾಜ್ ಹಾಗೂ ರೈತ ಸಂಘದ ಸದಸ್ಯರು ಅಽಕಾರಿಗಳು ಮತ್ತು ರೈತರ ಜೊತೆ ಮಾತನಾಡಿ, ನಮಗೆ ಹೆಚ್ಚಿನ ರೀತಿಯಲ್ಲಿ ಪರಿಹಾರ ಕೊಡಿಸಬೇಕು. ಈ ಭಾಗದಲ್ಲಿ ೩-೪ ದಿನಗಳಿಂದಲೂ ಹುಲಿಗಳು ಓಡಾಡುತ್ತಿದ್ದು, ರೈತರಿಗೆ ಜಮೀನಿಗೆ ಬರಲು ಕಷ್ಟವಾಗುತ್ತಿದೆ. ರಾತ್ರಿ ವೇಳೆ ಜಮೀನಿಗೆ ಹೋಗಲು ರೈತರು ಭಯಪಡುತ್ತಿದ್ದಾರೆ. ಅಽಕಾರಿಗಳು ರಾತ್ರಿ ವೇಳೆ ನಮ್ಮ ಗ್ರಾಮದ ಸುತ್ತಮುತ್ತ ವಾಹನದಲ್ಲಿ ಗಸ್ತು ತಿರುಗಬೇಕು. ಹುಲಿಯನ್ನು ಸೆರೆಹಿಡಿಯಬೇಕು ಎಂದು ಒತ್ತಾಯಿಸಿದರು.

ಆಂದೋಲನ ಡೆಸ್ಕ್

Recent Posts

ಮಾದಕ ವಸ್ತು ಪತ್ತೆ ; ನಾಲ್ವರು ಸಿಸಿಬಿ ವಶಕ್ಕೆ

ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…

8 hours ago

ಏಳು ವಿದೇಶಿಯರ ಬಂಧಿಸಿದ ಎನ್‌ಐಎ

ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…

10 hours ago

ಮೈಸೂರು | ಆಕಸ್ಮಿಕ ಬೆಂಕಿಗೆ ವ್ಯಕ್ತಿ ಸಜೀವ ದಹನ

ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…

11 hours ago

ಎಸ್‌ಎಸ್‌ಎಲ್‌ಸಿ ಪರೀಕ್ಷೆ : ವಿದ್ಯಾರ್ಥಿಗಳಿಗೆ ಶುಭಕೋರಿದ ಸಿಎಂ

ಬೆಂಗಳೂರು : 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

11 hours ago

ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಸಂಭ್ರಮ : ಮಾದಪ್ಪನಿಗೆ ಎಣ್ಣೆಮಜ್ಜನ

ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…

11 hours ago

ಕುಡಿಯುವ ನೀರು ಸಮಸ್ಯೆಗೆ ಸರ್ಕಾರದ ಕ್ರಮವೇನು? : ಅಧಿವೇಶನದಲ್ಲಿ ಎಂಎಲ್‌ಎ ಮಂಜುನಾಥ್‌ ಪ್ರಶ್ನೆ

ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…

11 hours ago