ಮೈಸೂರು

ನಂಜನಗೂಡು : ಹುಲಿ ದಾಳಿಗೆ 3 ಹಸುಗಳು ಸಾವು

ಮಡುವಿನಹಳ್ಳಿ : ಹುಲಿ ದಾಳಿಗೆ ಮೂರು ಹಸುಗಳು ಬಲಿಯಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಮಡುವಿನಹಳ್ಳಿಯಲ್ಲಿ ನಡೆದಿದೆ.

ಶುಕ್ರವಾರ ಬೆಳಿಗ್ಗೆ 11 ಗಂಟೆ ಸಮಯದಲ್ಲಿ ಗ್ರಾಮದ ಜಮೀನಿನಲ್ಲಿ ಮೇಯುತ್ತಿದ್ದ ಹಸುಗಳ ಮೇಲೆ ಹುಲಿ ದಾಳಿ ನಡೆಸಿ 3 ಹಸುಗಳನ್ನು ಕೊಂದುಹಾಕಿದೆ.

ಗ್ರಾಮದ ಸುತ್ತಮುತ್ತ ಹುಲಿ ಸಂಚರಿಸುತ್ತಿರುವ ಕುರಿತು ಈಗಾಗಲೇ ಪತ್ರಿಕೆಗಳಲ್ಲಿ ವರದಿ ಪ್ರಕಟವಾಗಿದ್ದರೂ ಹುಲಿ ಸೆರೆಗೆ ಅರಣ್ಯ ಇಲಾಖೆಯ ಅಧಿಕಾರಿಗಳು ಮುಂದಾಗಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ. ಸ್ಥಳಕ್ಕೆ ಆಗಮಿಸಿದ ಹೆಡಿಯಾಲ ಉಪ ವಲಯ ಅರಣ್ಯ ಅಧಿಕಾರಿಗಳಾದ ಕಾರ್ತಿಕ್ ಮತ್ತು ಕಿರಣ್ ಅವರು ಸ್ಥಳವನ್ನು ಪರಿಶೀಲಿಸಿ, ಮೃತ ಹಸುಗಳ ಮಹಜರು ಮಾಡಿ, ಸರ್ಕಾರದ ವತಿಯಿಂದ ಪರಿಹಾರ ನೀಡಲು ವರದಿ ಸಲ್ಲಿಸಲಾಗುವುದು ಎಂದರು.

ರೈತ ಮಹೇಶ್ ಮಾತನಾಡಿ, ಸಾಲ ಮಾಡಿ ಹಸುವನ್ನು ತಂದು ಜೀವನ ನಡೆಸುತ್ತಾ, ಇಬ್ಬರು ಹೆಣ್ಣು ಮಕ್ಕಳ ವಿದ್ಯಾಭ್ಯಾಸ ಮಾಡಿಸುತ್ತಿದ್ದೇನೆ. 70 ಸಾವಿರ ರೂ. ಮೌಲ್ಯದ ಹಸುಗಳು ಹುಲಿ ದಾಳಿಯಿಂದ ಸಾವಿಗೀಡಾಗಿರುವುದರಿಂದ ಜೀವನ ನಡೆಸಲು ಕಷ್ಟವಾಗಿದೆ. ಜಮೀನಿನಲ್ಲಿ ವ್ಯವಸಾಯ ಮಾಡಲು ಭಯವಾಗುತ್ತಿದೆ. ವಲಯ ಅರಣ್ಯ ಅಽಕಾರಿಗಳು ಮತ್ತು ಈ ಭಾಗದ ಶಾಸಕರಾದ ದರ್ಶನ್ ಧ್ರುವನಾರಾಯಣ ಅವರು ಹುಲಿ ಸೆರೆಗೆ ಬೋನು ಇರಿಸಿ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ರೈತ ನಿಜಲಿಂಗಪ್ಪ ಮಾತನಾಡಿ, ನಮ್ಮ ಹಸುವನ್ನು ಹುಲಿ ದಾಳಿ ಮಾಡಿ ಕೊಂದುಹಾಕಿದೆ. ಇದರಿಂದ ನಮ್ಮ ಜೀವನಕ್ಕೆ ತೊಂದರೆಯಾಗಿದೆ. ಶಾಸಕರು ಮತ್ತು ಸಂಸದರು ಆಗಮಿಸಿ ಅರಣ್ಯ ಅಽಕಾರಿಗಳ ಜೊತೆ ಮಾತನಾಡಿ ರೈತರಿಗೆ ರಕ್ಷಣೆಯನ್ನು ನೀಡಬೇಕು ಎಂದು ಮನವಿ ಮಾಡಿದರು.

ಗ್ರಾಮಸ್ಥರಾದ ಎಂ.ಬಿ.ಬಸವರಾಜ್ ಹಾಗೂ ರೈತ ಸಂಘದ ಸದಸ್ಯರು ಅಽಕಾರಿಗಳು ಮತ್ತು ರೈತರ ಜೊತೆ ಮಾತನಾಡಿ, ನಮಗೆ ಹೆಚ್ಚಿನ ರೀತಿಯಲ್ಲಿ ಪರಿಹಾರ ಕೊಡಿಸಬೇಕು. ಈ ಭಾಗದಲ್ಲಿ ೩-೪ ದಿನಗಳಿಂದಲೂ ಹುಲಿಗಳು ಓಡಾಡುತ್ತಿದ್ದು, ರೈತರಿಗೆ ಜಮೀನಿಗೆ ಬರಲು ಕಷ್ಟವಾಗುತ್ತಿದೆ. ರಾತ್ರಿ ವೇಳೆ ಜಮೀನಿಗೆ ಹೋಗಲು ರೈತರು ಭಯಪಡುತ್ತಿದ್ದಾರೆ. ಅಽಕಾರಿಗಳು ರಾತ್ರಿ ವೇಳೆ ನಮ್ಮ ಗ್ರಾಮದ ಸುತ್ತಮುತ್ತ ವಾಹನದಲ್ಲಿ ಗಸ್ತು ತಿರುಗಬೇಕು. ಹುಲಿಯನ್ನು ಸೆರೆಹಿಡಿಯಬೇಕು ಎಂದು ಒತ್ತಾಯಿಸಿದರು.

ಆಂದೋಲನ ಡೆಸ್ಕ್

Recent Posts

ರೈಲ್ವೆ ಕೆಳಸೇತುವೆ ಶಿಥಿಲ

ಎಸ್.ಎಸ್.ಭಟ್ ನಂ.ಗೂಡು: ಕಳಚಿ ಬೀಳುತ್ತಿದೆ ಸೀಲಿಂಗ್ ಕಾಂಕ್ರೀಟ್; ವಾಹನ ಸವಾರರಲ್ಲಿ ಆತಂಕ  ನಂಜನಗೂಡು: ನಗರದ ರೈಲು ನಿಲ್ದಾಣಕ್ಕೆ ತಾಗಿದಂತೆ ಮಹಾತ್ಮ…

3 mins ago

ಜೆನ್ ಝೀಗಳಿಗೆ ಒಂದೆಡೆ ದೇಶಾಭಿಮಾನ; ಮತ್ತೊಂದೆಡೆ ಅಸಮಾಧಾನ

ಕೆ.ಎಸ್. ಚಂದ್ರಶೇಖರ ಮೂರ್ತಿ ಮೈಸೂರು: ಸ್ವಾತಂತ್ರ್ಯವೆಂದರೆ ಕೇವಲ ಧ್ವಜಾರೋಹಣ, ದೇಶಭಕ್ತಿ ಗೀತೆಗಳು ಮತ್ತು ಸಿಹಿ ಹಂಚಿಕೆಯ ಸಂಭ್ರಮವಲ್ಲ. ಅದು ಸ್ವಾತಂತ್ರ್ಯದ…

8 mins ago

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

9 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

13 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

17 hours ago