ಮೈಸೂರು

ನಂಜನಗೂಡು : ಹುಲಿ ದಾಳಿಗೆ 3 ಹಸುಗಳು ಸಾವು

ಮಡುವಿನಹಳ್ಳಿ : ಹುಲಿ ದಾಳಿಗೆ ಮೂರು ಹಸುಗಳು ಬಲಿಯಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಮಡುವಿನಹಳ್ಳಿಯಲ್ಲಿ ನಡೆದಿದೆ.

ಶುಕ್ರವಾರ ಬೆಳಿಗ್ಗೆ 11 ಗಂಟೆ ಸಮಯದಲ್ಲಿ ಗ್ರಾಮದ ಜಮೀನಿನಲ್ಲಿ ಮೇಯುತ್ತಿದ್ದ ಹಸುಗಳ ಮೇಲೆ ಹುಲಿ ದಾಳಿ ನಡೆಸಿ 3 ಹಸುಗಳನ್ನು ಕೊಂದುಹಾಕಿದೆ.

ಗ್ರಾಮದ ಸುತ್ತಮುತ್ತ ಹುಲಿ ಸಂಚರಿಸುತ್ತಿರುವ ಕುರಿತು ಈಗಾಗಲೇ ಪತ್ರಿಕೆಗಳಲ್ಲಿ ವರದಿ ಪ್ರಕಟವಾಗಿದ್ದರೂ ಹುಲಿ ಸೆರೆಗೆ ಅರಣ್ಯ ಇಲಾಖೆಯ ಅಧಿಕಾರಿಗಳು ಮುಂದಾಗಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ. ಸ್ಥಳಕ್ಕೆ ಆಗಮಿಸಿದ ಹೆಡಿಯಾಲ ಉಪ ವಲಯ ಅರಣ್ಯ ಅಧಿಕಾರಿಗಳಾದ ಕಾರ್ತಿಕ್ ಮತ್ತು ಕಿರಣ್ ಅವರು ಸ್ಥಳವನ್ನು ಪರಿಶೀಲಿಸಿ, ಮೃತ ಹಸುಗಳ ಮಹಜರು ಮಾಡಿ, ಸರ್ಕಾರದ ವತಿಯಿಂದ ಪರಿಹಾರ ನೀಡಲು ವರದಿ ಸಲ್ಲಿಸಲಾಗುವುದು ಎಂದರು.

ರೈತ ಮಹೇಶ್ ಮಾತನಾಡಿ, ಸಾಲ ಮಾಡಿ ಹಸುವನ್ನು ತಂದು ಜೀವನ ನಡೆಸುತ್ತಾ, ಇಬ್ಬರು ಹೆಣ್ಣು ಮಕ್ಕಳ ವಿದ್ಯಾಭ್ಯಾಸ ಮಾಡಿಸುತ್ತಿದ್ದೇನೆ. 70 ಸಾವಿರ ರೂ. ಮೌಲ್ಯದ ಹಸುಗಳು ಹುಲಿ ದಾಳಿಯಿಂದ ಸಾವಿಗೀಡಾಗಿರುವುದರಿಂದ ಜೀವನ ನಡೆಸಲು ಕಷ್ಟವಾಗಿದೆ. ಜಮೀನಿನಲ್ಲಿ ವ್ಯವಸಾಯ ಮಾಡಲು ಭಯವಾಗುತ್ತಿದೆ. ವಲಯ ಅರಣ್ಯ ಅಽಕಾರಿಗಳು ಮತ್ತು ಈ ಭಾಗದ ಶಾಸಕರಾದ ದರ್ಶನ್ ಧ್ರುವನಾರಾಯಣ ಅವರು ಹುಲಿ ಸೆರೆಗೆ ಬೋನು ಇರಿಸಿ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ರೈತ ನಿಜಲಿಂಗಪ್ಪ ಮಾತನಾಡಿ, ನಮ್ಮ ಹಸುವನ್ನು ಹುಲಿ ದಾಳಿ ಮಾಡಿ ಕೊಂದುಹಾಕಿದೆ. ಇದರಿಂದ ನಮ್ಮ ಜೀವನಕ್ಕೆ ತೊಂದರೆಯಾಗಿದೆ. ಶಾಸಕರು ಮತ್ತು ಸಂಸದರು ಆಗಮಿಸಿ ಅರಣ್ಯ ಅಽಕಾರಿಗಳ ಜೊತೆ ಮಾತನಾಡಿ ರೈತರಿಗೆ ರಕ್ಷಣೆಯನ್ನು ನೀಡಬೇಕು ಎಂದು ಮನವಿ ಮಾಡಿದರು.

ಗ್ರಾಮಸ್ಥರಾದ ಎಂ.ಬಿ.ಬಸವರಾಜ್ ಹಾಗೂ ರೈತ ಸಂಘದ ಸದಸ್ಯರು ಅಽಕಾರಿಗಳು ಮತ್ತು ರೈತರ ಜೊತೆ ಮಾತನಾಡಿ, ನಮಗೆ ಹೆಚ್ಚಿನ ರೀತಿಯಲ್ಲಿ ಪರಿಹಾರ ಕೊಡಿಸಬೇಕು. ಈ ಭಾಗದಲ್ಲಿ ೩-೪ ದಿನಗಳಿಂದಲೂ ಹುಲಿಗಳು ಓಡಾಡುತ್ತಿದ್ದು, ರೈತರಿಗೆ ಜಮೀನಿಗೆ ಬರಲು ಕಷ್ಟವಾಗುತ್ತಿದೆ. ರಾತ್ರಿ ವೇಳೆ ಜಮೀನಿಗೆ ಹೋಗಲು ರೈತರು ಭಯಪಡುತ್ತಿದ್ದಾರೆ. ಅಽಕಾರಿಗಳು ರಾತ್ರಿ ವೇಳೆ ನಮ್ಮ ಗ್ರಾಮದ ಸುತ್ತಮುತ್ತ ವಾಹನದಲ್ಲಿ ಗಸ್ತು ತಿರುಗಬೇಕು. ಹುಲಿಯನ್ನು ಸೆರೆಹಿಡಿಯಬೇಕು ಎಂದು ಒತ್ತಾಯಿಸಿದರು.

ಆಂದೋಲನ ಡೆಸ್ಕ್

Recent Posts

ಟಿವಿಕೆ ಗೆಲುವು : ಹನೂರಲ್ಲಿ ಸಂಭ್ರಮಾಚರಣೆ

ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…

5 hours ago

ಪ.ಬಂಗಾಳ | ವಿಟೋ ಅಧಿಕಾರ ಬಳಸಿ ಮಂತ್ರಿಮಂಡಳ ವಿಸರ್ಜಿಸಿದ ರಾಜ್ಯಪಾಲ ; ದೀದಿಗೆ ಹಿನ್ನೆಡೆ

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…

5 hours ago

ಹನೂರು | ಕಾಡು ಹಂದಿ ದಾಳಿ ; ರೈತನಿಗೆ ಗಂಭೀರ ಗಾಯ

ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…

5 hours ago

ಡಿಎಂಕೆ-ಎಐಎಡಿಎಂಕೆ ಮೈತ್ರಿ ವದಂತಿ ; ಸ್ಟಾಲಿನ್‌ ಹೇಳಿದ್ದೇನು?

ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…

6 hours ago

ಮೇಲು-ಕೀಳು ಕಳೆಯಲಿ ; ಸರ್ವರೂ ಒಂದೇ ಎಂಬ ಮನೋಭಾವ ಮೂಡಲಿ : ಮೋಹನ್‌ ಭಾಗವತ್‌

ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…

6 hours ago

ಬೆಂಗಳೂರು ಕೈತಪ್ಪಿದ ಐಪಿಎಲ್‌ ಫೈನಲ್‌ ಪಂದ್ಯ : ಕೆಎಸ್‌ಸಿಎ ಹೇಳಿದ್ದೇನು?

ಬೆಂಗಳೂರು : ಇಂಡಿಯನ್‌ ಪ್ರೀಮಿಯರ್‌ ಲೀಗ್‌(ಐಪಿಎಲ್) 2026ರ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಧಿಕೃತವಾಗಿ ಸ್ಥಳಾಂತರಿಸಿದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್…

6 hours ago