ಮೈಸೂರು

3ನೇ ಆಷಾಢ ಶುಕ್ರವಾರ : ಸಿಂಹವಾಹಿನಿ ಅಲಂಕಾರದಲ್ಲಿ ಕಂಗೊಳಿಸಿದ ಬೆಟ್ಟದ ತಾಯಿ

ಮೈಸೂರು : ಆಷಾಢ ಮಾಸದ ಪ್ರಯುಕ್ತ 3ನೇ ಶಕ್ರವಾರವೂ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭಕ್ತ ಸಾಗರ ಹರಿದುಬಂದಿದೆ. ಮುಂಜಾನೆ 3 ಗಂಟೆಯಿಂದಲೇ ನಾಡ ಅದಿದೇವತೆ ಚಾಮುಂಡಿ ದರ್ಶನಕ್ಕೆ ಭಕ್ತರು ಆಗಮಿಸಿದ್ದಾರೆ.

ಆಷಾಢ ಮಾಸದ ಶುಕ್ರವಾರದಂದು ನಾಡದೇವತೆ ಭಕ್ತರನ್ನ ಆಶೀರ್ವಾದಿಸಲು ಬರುತ್ತಾಳೆ ಎಂಬ ನಂಬಿಕೆ ಜನರಲ್ಲಿದೆ. ಈ ದಿನ ದೇವಿಯ ದರ್ಶನ ಪಡೆದರೆ ಸಹಸ್ರ ಪುಣ್ಯದ ಫಲ ದೊರೆಯಲಿದೆ ಎಂಬ ಪ್ರತೀತಿ ಕೂಡ ಇದೆ. ಇದೇ ಕಾರಣದಿಂದ ಸಾವಿರಾರು ಜನರು ಚಾಮುಂಡಿಬೆಟ್ಟಕ್ಕೆ ಆಗಮಿಸುತ್ತಿದ್ದಾರೆ. ಅಲ್ಲದೇ ಭಕ್ತರು ವಿವಿಧ ಸೇವೆಗಳನ್ನು ಹಾಗೂ ಪೂಜೆಗಳನ್ನು ನೆರವೇರಿಸುತ್ತಿದ್ದಾರೆ. ಹರಕೆ ಹೊತ್ತ ಭಕ್ತರು ಕಾಣಿಗೆ ನೀಡುತ್ತಿದ್ದಾರೆ.

ತಾಯಿ ಚಾಮುಂಡೇಶ್ವರಿ ಮೂರ್ತಿಯನ್ನು ಸಿಂಹವಾಹಿನಿ ಅಲಂಕಾರದಿಂದ ಕಂಗೊಳಿಸುವಂತೆ ಮಾಡಿದ್ದು, ಬಗೆಬಗೆಯ ಹೂವು, ಹಣ್ಣುಗಳಿಂದ ಅಲಂಕಾರ ಮಾಡಲಾಗಿದೆ. ಭಕ್ತರ ಸಂಖ್ಯೆ ಹೆಚ್ಚಾಗಿರುವುದರಿಂದ ಬೆಳಗ್ಗಿನ ಜಾವ 5:30ರಿಂದಲೇ ಚಾಮುಂಡೇಶ್ವರಿ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಮುಂಜಾನೆಯಿಂದಲೇ ರುದ್ರಾಭಿಷೇಕ, ಪಂಚಾಮೃತ, ಕುಂಕುಮಾರ್ಚನೆ, ಮಹಾಮಂಗಳಾರತಿ ಹಾಗೂ ವಿವಿಧ ಪೂಜಾ ಕೈಂಕರ್ಯಗಳು ನೇರವೇರುತ್ತಲೇ ಇವೆ.

ವಿಶೇಷ ದರ್ಶನಕ್ಕೆ 300 ರೂ. ಟಿಕೆಟ್ :3ನೇ ಶುಕ್ರವಾರವೂ ಸಹ ಪಾಸ್ ವ್ಯವಸ್ಥೆಗೆ ಬ್ರೇಕ್ ಹಾಕಲಾಗಿದೆ. ವಿಶೇಷ ದರ್ಶನಕ್ಕೆ 300 ರೂ. ಹಾಗೂ 50 ರೂ. ಟಿಕೆಟ್ ನಿಗದಿಪಡಿಸಲಾಗಿದೆ. 65 ವರ್ಷ ಮೇಲ್ಪಟ್ಟವರಿಗೆ 50 ರೂ. ಟಿಕೆಟ್ ಸಾಲಿನಲ್ಲಿ ನೇರ ಸಂದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಬೆಳಗ್ಗೆ 5.30 ರಿಂದ ರಾತ್ರಿ 11 ಗಂಟೆವರೆಗೆ ಭಕ್ತರ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ ಎಂದು ದೇವಸ್ಥಾನ ಆಡಳಿತ ಮಂಡಳಿ ತಿಳಿಸಿದೆ.

lokesh

Recent Posts

ಓದುಗರ ಪತ್ರ: ಬಸ್ ತಂಗುದಾಣ ನಿರ್ಮಿಸಿ

ಶ್ರೀರಂಗಪಟ್ಟಣ ತಾಲ್ಲೂಕಿನ ನಗುವನಹಳ್ಳಿಯ ರಾಜೀವ್ ಗಾಂಧಿ ನಗರದಲ್ಲಿ ಬಸ್ ತಂಗುದಾಣವಿಲ್ಲದೆ ಸಾರ್ವಜನಿಕರು ಬೇಸಿಗೆಯಲ್ಲಿ ಬಿಸಿಲಿನಲ್ಲಿ ಹಾಗೂ ಮಳೆಗಾಲದಲ್ಲಿ ಮಳೆಯಲ್ಲೇ ನಿಲ್ಲುವುದು…

2 hours ago

ಓದುಗರ ಪತ್ರ: ಜನರ ನಿರೀಕ್ಷೆಗಳಿಂದ ದೂರವಾಗುತ್ತಿರುವ ಶಾಸನಸಭೆಗಳು

ಲೋಕಸಭೆ ಮತ್ತು ವಿಧಾನಸಭೆ ಅಧಿವೇಶನಗಳು ಜನರ ಸಮಸ್ಯೆಗಳನ್ನು ಚರ್ಚಿಸಲು, ನೀತಿಗಳನ್ನು ರೂಪಿಸಲು ಹಾಗೂ ದೇಶ, ರಾಜ್ಯದ ಅಭಿವೃದ್ಧಿ ಕುರಿತು ಚರ್ಚಿಸಲು…

2 hours ago

ಓದುಗರ ಪತ್ರ: ಬೇಸರ ತರಿಸಿದ ಜನಪ್ರತಿನಿಧಿಗಳ ವರ್ತನೆ

ಇತ್ತೀಚೆಗೆ ನಡೆದ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನದಲ್ಲಿ ಕೆಲವು ಸದಸ್ಯರು ನಡೆದುಕೊಂಡ ರೀತಿ ತಲೆ ತಗ್ಗಿಸುವಂತಿದೆ. ಅವರು ಬಳಸಿದ ಪದ…

2 hours ago

ಸೈನ್ಯ ಯುದ್ಧ ಮಾಡುತ್ತದೆ, ತೀರ್ಮಾನ ಸರ್ಕಾರ ಮಾಡಬೇಕು…!

ಅತ್ಯಂತ ಅಪಾಯಕಾರಿ ಪರಿಸ್ಥಿತಿಯೊಂದನ್ನು ನನಗೆ ಹಸ್ತಾಂತರಿಸಲಾಗಿತ್ತು: ನರವಣೆ ‘ಜವಾಬ್ದಾರಿಯಿಂದ ಸಂಪೂರ್ಣವಾಗಿ ದೂರವೇ ಉಳಿದಿದ್ದ ಪ್ರಧಾನಿ’ ‘ಇಂದಿರಾ ಗಾಂದಿ, ವಾಜಪೇಯಿ ಪ್ರಧಾನಿಗಳಾಗಿದ್ದಾಗ…

2 hours ago

ಇಂದು ಶನಿವಾರಸಂತೆ ಬಸ್ ನಿಲ್ದಾಣ ಉದ್ಘಾಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಜನತೆಯ ೩೦ ವರ್ಷಗಳ ಕನಸು ಕೊನೆಗೂ ನನಸು; ೧.೦೫ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ನಿಲ್ದಾಣ ಸೋಮವಾರಪೇಟೆ:…

2 hours ago

ಮಡಹಳ್ಳಿ ಬಳಿಯ ಅಕ್ರಮ ಕ್ರಷರ್‌ನಿಂದ ಜನತೆ ಹೈರಾಣ

ಮಹೇಂದ್ರ ಹಸಗೂಲಿ ನಿಯಮಾವಳಿ ಪಾಲಿಸದ ಕ್ರಷರ್; ದೂಳು-ಶಬ್ದ ಮಾಲಿನ್ಯ ಆರೋಪ ಗುಂಡ್ಲುಪೇಟೆ: ತಾಲ್ಲೂಕಿನ ಮಡಹಳ್ಳಿ ಗ್ರಾಮದ ಬಳಿ ಇರುವ ಪಾರ್ವತಿ…

2 hours ago