ಮೈಸೂರು

3ನೇ ಆಷಾಢ ಶುಕ್ರವಾರ : ಸಿಂಹವಾಹಿನಿ ಅಲಂಕಾರದಲ್ಲಿ ಕಂಗೊಳಿಸಿದ ಬೆಟ್ಟದ ತಾಯಿ

ಮೈಸೂರು : ಆಷಾಢ ಮಾಸದ ಪ್ರಯುಕ್ತ 3ನೇ ಶಕ್ರವಾರವೂ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭಕ್ತ ಸಾಗರ ಹರಿದುಬಂದಿದೆ. ಮುಂಜಾನೆ 3 ಗಂಟೆಯಿಂದಲೇ ನಾಡ ಅದಿದೇವತೆ ಚಾಮುಂಡಿ ದರ್ಶನಕ್ಕೆ ಭಕ್ತರು ಆಗಮಿಸಿದ್ದಾರೆ.

ಆಷಾಢ ಮಾಸದ ಶುಕ್ರವಾರದಂದು ನಾಡದೇವತೆ ಭಕ್ತರನ್ನ ಆಶೀರ್ವಾದಿಸಲು ಬರುತ್ತಾಳೆ ಎಂಬ ನಂಬಿಕೆ ಜನರಲ್ಲಿದೆ. ಈ ದಿನ ದೇವಿಯ ದರ್ಶನ ಪಡೆದರೆ ಸಹಸ್ರ ಪುಣ್ಯದ ಫಲ ದೊರೆಯಲಿದೆ ಎಂಬ ಪ್ರತೀತಿ ಕೂಡ ಇದೆ. ಇದೇ ಕಾರಣದಿಂದ ಸಾವಿರಾರು ಜನರು ಚಾಮುಂಡಿಬೆಟ್ಟಕ್ಕೆ ಆಗಮಿಸುತ್ತಿದ್ದಾರೆ. ಅಲ್ಲದೇ ಭಕ್ತರು ವಿವಿಧ ಸೇವೆಗಳನ್ನು ಹಾಗೂ ಪೂಜೆಗಳನ್ನು ನೆರವೇರಿಸುತ್ತಿದ್ದಾರೆ. ಹರಕೆ ಹೊತ್ತ ಭಕ್ತರು ಕಾಣಿಗೆ ನೀಡುತ್ತಿದ್ದಾರೆ.

ತಾಯಿ ಚಾಮುಂಡೇಶ್ವರಿ ಮೂರ್ತಿಯನ್ನು ಸಿಂಹವಾಹಿನಿ ಅಲಂಕಾರದಿಂದ ಕಂಗೊಳಿಸುವಂತೆ ಮಾಡಿದ್ದು, ಬಗೆಬಗೆಯ ಹೂವು, ಹಣ್ಣುಗಳಿಂದ ಅಲಂಕಾರ ಮಾಡಲಾಗಿದೆ. ಭಕ್ತರ ಸಂಖ್ಯೆ ಹೆಚ್ಚಾಗಿರುವುದರಿಂದ ಬೆಳಗ್ಗಿನ ಜಾವ 5:30ರಿಂದಲೇ ಚಾಮುಂಡೇಶ್ವರಿ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಮುಂಜಾನೆಯಿಂದಲೇ ರುದ್ರಾಭಿಷೇಕ, ಪಂಚಾಮೃತ, ಕುಂಕುಮಾರ್ಚನೆ, ಮಹಾಮಂಗಳಾರತಿ ಹಾಗೂ ವಿವಿಧ ಪೂಜಾ ಕೈಂಕರ್ಯಗಳು ನೇರವೇರುತ್ತಲೇ ಇವೆ.

ವಿಶೇಷ ದರ್ಶನಕ್ಕೆ 300 ರೂ. ಟಿಕೆಟ್ :3ನೇ ಶುಕ್ರವಾರವೂ ಸಹ ಪಾಸ್ ವ್ಯವಸ್ಥೆಗೆ ಬ್ರೇಕ್ ಹಾಕಲಾಗಿದೆ. ವಿಶೇಷ ದರ್ಶನಕ್ಕೆ 300 ರೂ. ಹಾಗೂ 50 ರೂ. ಟಿಕೆಟ್ ನಿಗದಿಪಡಿಸಲಾಗಿದೆ. 65 ವರ್ಷ ಮೇಲ್ಪಟ್ಟವರಿಗೆ 50 ರೂ. ಟಿಕೆಟ್ ಸಾಲಿನಲ್ಲಿ ನೇರ ಸಂದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಬೆಳಗ್ಗೆ 5.30 ರಿಂದ ರಾತ್ರಿ 11 ಗಂಟೆವರೆಗೆ ಭಕ್ತರ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ ಎಂದು ದೇವಸ್ಥಾನ ಆಡಳಿತ ಮಂಡಳಿ ತಿಳಿಸಿದೆ.

lokesh

Recent Posts

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ : ಸಿ.ಎಂ ಡಿ.ಕೆ.ಶಿವಕುಮಾರ್*

ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…

4 mins ago

ಕ್ಯಾಪ್ಟನ್ ಅಭಿಮನ್ಯು ಆನೆಗೆ ರಾಜೋಚಿತ ಬೀಳ್ಕೊಡುಗೆ ನೀಡಿ : ಸಚಿವ ಖಂಡ್ರೆ

ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…

2 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…

3 hours ago

ಕೊಡಗಿನಲ್ಲಿ ಮುಂದುವರೆದ ಕಾಡಾನೆ ಸೆರೆ ಕಾರ್ಯಾಚರಣೆ

ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ…

6 hours ago

ಅಲಯನ್ಸ್ ಸ್ಕ್ವೇರ್ ಪ್ರಾಪರ್ಟೀಸ್‌ಗೆ 20ನೇ ವರ್ಷದ ಸಂಭ್ರಮ

ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…

7 hours ago

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

10 hours ago