ಮೈಸೂರು

3ನೇ ಆಷಾಢ ಶುಕ್ರವಾರ : ಸಿಂಹವಾಹಿನಿ ಅಲಂಕಾರದಲ್ಲಿ ಕಂಗೊಳಿಸಿದ ಬೆಟ್ಟದ ತಾಯಿ

ಮೈಸೂರು : ಆಷಾಢ ಮಾಸದ ಪ್ರಯುಕ್ತ 3ನೇ ಶಕ್ರವಾರವೂ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭಕ್ತ ಸಾಗರ ಹರಿದುಬಂದಿದೆ. ಮುಂಜಾನೆ 3 ಗಂಟೆಯಿಂದಲೇ ನಾಡ ಅದಿದೇವತೆ ಚಾಮುಂಡಿ ದರ್ಶನಕ್ಕೆ ಭಕ್ತರು ಆಗಮಿಸಿದ್ದಾರೆ.

ಆಷಾಢ ಮಾಸದ ಶುಕ್ರವಾರದಂದು ನಾಡದೇವತೆ ಭಕ್ತರನ್ನ ಆಶೀರ್ವಾದಿಸಲು ಬರುತ್ತಾಳೆ ಎಂಬ ನಂಬಿಕೆ ಜನರಲ್ಲಿದೆ. ಈ ದಿನ ದೇವಿಯ ದರ್ಶನ ಪಡೆದರೆ ಸಹಸ್ರ ಪುಣ್ಯದ ಫಲ ದೊರೆಯಲಿದೆ ಎಂಬ ಪ್ರತೀತಿ ಕೂಡ ಇದೆ. ಇದೇ ಕಾರಣದಿಂದ ಸಾವಿರಾರು ಜನರು ಚಾಮುಂಡಿಬೆಟ್ಟಕ್ಕೆ ಆಗಮಿಸುತ್ತಿದ್ದಾರೆ. ಅಲ್ಲದೇ ಭಕ್ತರು ವಿವಿಧ ಸೇವೆಗಳನ್ನು ಹಾಗೂ ಪೂಜೆಗಳನ್ನು ನೆರವೇರಿಸುತ್ತಿದ್ದಾರೆ. ಹರಕೆ ಹೊತ್ತ ಭಕ್ತರು ಕಾಣಿಗೆ ನೀಡುತ್ತಿದ್ದಾರೆ.

ತಾಯಿ ಚಾಮುಂಡೇಶ್ವರಿ ಮೂರ್ತಿಯನ್ನು ಸಿಂಹವಾಹಿನಿ ಅಲಂಕಾರದಿಂದ ಕಂಗೊಳಿಸುವಂತೆ ಮಾಡಿದ್ದು, ಬಗೆಬಗೆಯ ಹೂವು, ಹಣ್ಣುಗಳಿಂದ ಅಲಂಕಾರ ಮಾಡಲಾಗಿದೆ. ಭಕ್ತರ ಸಂಖ್ಯೆ ಹೆಚ್ಚಾಗಿರುವುದರಿಂದ ಬೆಳಗ್ಗಿನ ಜಾವ 5:30ರಿಂದಲೇ ಚಾಮುಂಡೇಶ್ವರಿ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಮುಂಜಾನೆಯಿಂದಲೇ ರುದ್ರಾಭಿಷೇಕ, ಪಂಚಾಮೃತ, ಕುಂಕುಮಾರ್ಚನೆ, ಮಹಾಮಂಗಳಾರತಿ ಹಾಗೂ ವಿವಿಧ ಪೂಜಾ ಕೈಂಕರ್ಯಗಳು ನೇರವೇರುತ್ತಲೇ ಇವೆ.

ವಿಶೇಷ ದರ್ಶನಕ್ಕೆ 300 ರೂ. ಟಿಕೆಟ್ :3ನೇ ಶುಕ್ರವಾರವೂ ಸಹ ಪಾಸ್ ವ್ಯವಸ್ಥೆಗೆ ಬ್ರೇಕ್ ಹಾಕಲಾಗಿದೆ. ವಿಶೇಷ ದರ್ಶನಕ್ಕೆ 300 ರೂ. ಹಾಗೂ 50 ರೂ. ಟಿಕೆಟ್ ನಿಗದಿಪಡಿಸಲಾಗಿದೆ. 65 ವರ್ಷ ಮೇಲ್ಪಟ್ಟವರಿಗೆ 50 ರೂ. ಟಿಕೆಟ್ ಸಾಲಿನಲ್ಲಿ ನೇರ ಸಂದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಬೆಳಗ್ಗೆ 5.30 ರಿಂದ ರಾತ್ರಿ 11 ಗಂಟೆವರೆಗೆ ಭಕ್ತರ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ ಎಂದು ದೇವಸ್ಥಾನ ಆಡಳಿತ ಮಂಡಳಿ ತಿಳಿಸಿದೆ.

lokesh

Recent Posts

‘ಕೊಲೆ ಬಗ್ಗೆ ನಮಗೆ ಗೊತ್ತೇ ಇರಲಿಲ್ಲ’

ಎಚ್.ಎಸ್.ದಿನೇಶ್ ಕುಮಾರ್ ನಿತ್ಯಾನಂದ ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಪಶ್ಚಾತ್ತಾಪದ ಕಣ್ಣೀರು ಮೈಸೂರು: ನಗರದ ಕುವೆಂಪುನಗರದಲ್ಲಿ ಪತ್ನಿಯಿಂದಲೇ ಹತ್ಯೆಯಾದ ನಿತ್ಯಾನಂದ…

3 hours ago

ಕೊಡಗು ಜಿಲ್ಲೆಯಾದ್ಯಂತ ಚುರುಕುಗೊಂಡ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು ಏರಿಕೆ ಕಂಡುಬಂದಿದೆ. ಹಾರಂಗಿ ಜಲಾಶಯಕ್ಕೆ…

5 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಮಹಾತ್ಮನ ಚಿಂತನೆಯ ಹಾದಿಯಲ್ಲಿ ನಡೆಯಬೇಕಿದೆ ನಾನು ಕಂಡ ಗಾಂಧಿಜಿಯವರಲ್ಲಿ, ಅವರ ಜೀವನದಲ್ಲಿ ನನ್ನನ್ನು ಅತ್ಯಂತ ಹೆಚ್ಚಾಗಿ ಆಕರ್ಷಿಸಿದ ವಿಷಯ ಎಂದರೆ…

6 hours ago

ಮನುಷ್ಯ ಕುಲದ ಪ್ರಜ್ಞಾವಂತಿಕೆ ವಿಕಾಸಕ್ಕೆ ಗಾಂಧೀಜಿ ಕೈಮರ

ಗಾಂಧಿಜಿಯವರ ಜೀವನ ಚರಿತ್ರೆ ದೇಶ, ಖಂಡಗಳ ಗಡಿ ದಾಟಿ ಮನುಷ್ಯರೆಲ್ಲರ ಒಳಿತನ್ನು ಬಯಸುವ ಬಯಕೆಯನ್ನು ಭಾವಿಸಿ, ಜೀವಿಸಿ ತೋರಿಸಿದವರ ಪುಣ್ಯ…

6 hours ago

ಗಾಂಧಿ ಮೈಮೇಲೆ ಬಂದಂತೆ ಬದುಕಿದ್ದ ಹುಚ್ಚೇಗೌಡರು

ಸ್ವಾಮಿ ಪೊನ್ನಾಚ್ಚಿ ನಾನು ಹುಚ್ಚೇಗೌಡರನ್ನು ನೋಡಿದ್ದು ಇತ್ತೀಚೆಗೆ. ಅದೂ ಅತ್ತಿಖಾನೆ ಎಸ್ಟೇಟ್ ಸ್ಥಾಪಕ ಮಾರಿಸ್ ಬಗ್ಗೆ ತಿಳಿಯಲು ಹೋದಾಗ. ಸಿಕ್ಕ…

6 hours ago

ವಿಲಾಯತಿಗೆ ಹೊರಟವನು ಜಾತಿ ಬಾಹಿರನಾದೆ

ನಮ್ಮ ಜಾತಿಯ ಜನರು ನನ್ನ ವಿದೇಶ ಪ್ರಯಾಣವನ್ನು ಕುರಿತು ಗೊಂದಲವನ್ನು ಎಬ್ಬಿಸಿದರು. ಅಲ್ಲಿಯವರೆಗೆ ಮೋಧ್ ಬನಿಯರ ಪೈಕಿ ಯಾರೂ ವಿಲಾಯತಿಗೆ…

6 hours ago