ಮೈಸೂರು

ವಿಜಯನಗರದಲ್ಲಿ 4 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಆರ್ಯ ಈಡಿಗರ ಸಂಘದ ಹಾಸ್ಟೆಲ್ ಕಟ್ಟಡ ಉದ್ಘಾಟನೆ

ಮೈಸೂರು: ಜ್ಞಾನಕ್ಕಿಂತ ದೊಡ್ಡ ಸಂಪತ್ತು ಬೇರೊಂದಿಲ್ಲ. ಸಂಪತ್ತಿನಿಂದ ಜ್ಞಾನ ಸಂಪಾದಿಸುವುದಕ್ಕೆ ಸಾಧ್ಯವಿಲ್ಲ. ಸಮಾಜದ ಬಡವರು, ಮಧ್ಯಮ ವರ್ಗದವರ ಮಕ್ಕಳ ಶಿಕ್ಷಣಕ್ಕಾಗಿ ಕೆಲಸ ಮಾಡುತ್ತಿರುವುದು ಪುಣ್ಯದ ಕೆಲಸವಾಗಿದೆ ಎಂದು ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹೇಳಿದರು.

ನಗರದ ವಿಜಯನಗರ ಮೂರನೇ ಹಂತದ ಸಪ್ತಮಾತೃಕಾ ದೇವಸ್ಥಾನದ ಎದುರು ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಆರ್ಯ ಈಡಿಗರ ಸಂಘದಿಂದ ನೂತನವಾಗಿ ನಿರ್ಮಿಸಿರುವ ವಿದ್ಯಾರ್ಥಿನಿಲಯದ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು, ಉತ್ತಮ ಸಂಸ್ಕಾರ ಬೆಳೆಸಿಕೊಳ್ಳಬೇಕು. ಸಮಾಜದ ಬೆಳವಣಿಗೆಗೆ ಎಲ್ಲರೂ ಕೈ ಜೋಡಿಸಬೇಕು. ಸಮಾಜ ಒಗ್ಗಟ್ಟಾಗಿ ನಿಂತರೆ ಏನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ಬೃಹತ್ ವಿದ್ಯಾರ್ಥಿನಿಲಯ ನಿರ್ಮಾಣವೇ ಸಾಕ್ಷಿಯಾಗಿದೆ ಎಂದು ಹೇಳಿದರು.

ಶಾಸಕ ಜಿ.ಟಿ.ದೇವೇಗೌಡ ವಿದ್ಯಾಸಿರಿ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿದರು. ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಆರ್ಯ  ಈಡಿಗರ ಸಂಘ ಅಧ್ಯಕ್ಷ ಡಾ.ಎಂ.ಕೆ.ಪೋತರಾಜ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಸೋಲೂರು ರೇಣುಕಾ ಪೀಠಾಧ್ಯಕ್ಷರಾದ ಶ್ರೀ ವಿಖ್ಯಾತನಂದ ಸ್ವಾಮೀಜಿ, ಕರ್ನಾಟಕ ಪ್ರದೇಶ ಆರ್ಯ  ಈಡಿಗರ ಸಂಘದ ಡಾ.ಎಂ.ತಿಮ್ಮೇಗೌಡ, ಉಪಾಧ್ಯಕ್ಷ ಟಿ.ಶಿವಕುವಾರ್, ಜೆಪಿಎನ್‌ಪಿ ಪ್ರತಿಷ್ಠಾನ ಗೌರವಾಧ್ಯಕ್ಷ ಜೆ.ಪಿ.ಸುಧಾಕರ್, ಜಿಲ್ಲಾ ಬಿಲ್ಲವ ಸಂಘದ ಅಧ್ಯಕ್ಷ ವೇದಕುವಾರ್, ಮೈಸೂರು ಜಿಲ್ಲಾ ಆರ್ಯ ಈಡಿಗರ ಮಹಿಳಾ ಸಂಘದ ಅಧ್ಯಕ್ಷೆ ಸರೋಜಮ್ಮ ಪಾಪೇಗೌಡ, ಸಂಘದ ಉಪಾಧ್ಯಕ್ಷ ರಾಜಶೇಖರ ಕದಂಬ, ಪ್ರಧಾನ ಕಾರ್ಯದರ್ಶಿ ಕೆ.ಎಸ್.ಕೃಷ್ಣಮೂರ್ತಿ, ಉಪಾಧ್ಯಕ್ಷರಾದ ಟಿ.ಶಿವಣ್ಣ, ಕೆ.ರಾಜು ಇನ್ನಿತರರು ಹಾಜರಿದ್ದರು. ನಂತರ ಕುವಾರಿ ಅನನ್ಯ ಅವರಿಂದ ಭರತನಾಟ್ಯ ಕಾರ್ಯಕ್ರಮ  ನಡೆಯಿತು.

ಉತ್ತಮವಾದ ಶಿಕ್ಷಣ ನೀಡಲು ವಿದ್ಯಾರ್ಥಿನಿಲಯ ನಿರ್ಮಾಣ ಮಾಡಿರುವುದು ಸಂತೋಷದ ಸಂಗತಿ. ಐವತ್ತು ದಾನಿಗಳು 50 ಕೊಠಡಿಗಳನ್ನು ನಿರ್ಮಿಸಿ ಕೊಟ್ಟಿರುವುದನ್ನು ನೋಡಿದರೆ ಸಮಾಜದ ಬೆಳವಣಿಗೆಗೆ ಯಾವ ರೀತಿ ಸೇವೆ ಸಲ್ಲಿಸುತ್ತಾರೆ ಎಂಬುದು ಅರ್ಥವಾಗುತ್ತದೆ. ಚಾಮುಂಡೇಶ್ವರಿ ಕ್ಷೇತ್ರದ ವ್ಯಾಪ್ತಿಗೆ ಬರುವ ವಿಜಯನಗರದಲ್ಲಿ ಭೂಮಿ ಮಂಜೂರು ಮಾಡಿಸುವಂತೆ ಕೇಳಿದಾಗ ಪ್ರಾಧಿಕಾರದ ಸಭೆಯಲ್ಲಿ ಚರ್ಚಿಸಿ ಒಪ್ಪಿಗೆ ಕೊಡಿಸಿದ್ದೇನೆ. ಮುಂದಿನ ದಿನಗಳಲ್ಲಿ ಹಾಸ್ಟೆಲ್‌ಗೆ ಮೂಲ ಸೌಕರ್ಯಗಳನ್ನು ಒದಗಿಸಲು ಅಗತ್ಯ ನೆರವು ನೀಡಲಾಗುವುದು.

 

-ಜಿ.ಟಿ.ದೇವೇಗೌಡ, ಶಾಸಕರು

 

 

 

andolana

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಸತ್ಯದ ಆರಾಧಕ ಮೌನವನ್ನು ಅವಲಂಬಿಸುವುದು ಅವಶ್ಯಕ

ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…

9 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 22 ಶನಿವಾರ  

9 hours ago

ಧಾವಂತ ಬದುಕಿಗೆ ಹೊಸ ಚೈತನ್ಯ ನೀಡುವ ಅರವಟ್ಟಿಗೆ

ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…

11 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧೀಜಿ ಆತ್ಮಕತೆಯ ಶತಮಾನೋತ್ಸವಕ್ಕೆ ಆಂದೋಲನ ಕೈಜೋಡಿಸಿರುವುದು ಐತಿಹಾಸಿಕ

ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…

11 hours ago

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

1 day ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

1 day ago