Mysore
28
broken clouds
Light
Dark

ಮೈಸೂರು: ಸಿಲಿಂಡರ್‌ ಸೋರಿಕೆ; ನಾಲ್ವರು ದುರ್ಮರಣ

ಮೈಸೂರು: ಇಲ್ಲಿನ ಯರಗನಹಳ್ಳಿಯಲ್ಲಿ ವಾಸವಿದ್ದ ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ. ಸಿಲಿಂಡರ್‌ ಸೋರಿಕೆಯಿಂದ ಉಸಿರುಗಟ್ಟಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

ಬಟ್ಟೆ ಐರನ್‌ ಕೆಲಸ ಮಾಡುತ್ತಿದ್ದ ಕುಮಾರಸ್ವಾಮಿ (45), ಮಂಜುಳಾ (39), ಅರ್ಚನಾ (19) ಮತ್ತು ಸ್ವಾತಿ (17) ಮೃತ ದುರ್ದೈವಿಗಳು. ಸ್ಥಳಕ್ಕೆ ಪೊಲೀಸ್‌ ಕಮಿಷನರ್‌ ರಮೇಶ್‌ ಬಾನೋತ್‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.