ಮೈಸೂರು: ಇಲ್ಲಿನ ರಾಮಾನುಜ ರಸ್ತೆಯಲ್ಲಿ ದುಷ್ಕರ್ಮಿಗಳಿಂದ ಹಲ್ಲೆಗೆ ಒಳಗಾಗಿ ಕೆ.ಆರ್.ಆಸ್ಪತ್ರೆಗೆ ದಾಖಲಾಗಿದ್ದ ನಾಲ್ವರು ದಿಢೀರ್ ನಾಪತ್ತೆಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಕಳೆದ ಎರಡು ದಿನಗಳ ಹಿಂದೆ ಆಟೋದಲ್ಲಿದ್ದ ಕುಮುದಾ, ವಿಶಾಲಾಕ್ಷಿ, ರೇಣುಕಮ್ಮ, ರಾಜಣ್ಣ ಎಂಬುವವರ ಮೇಲೆ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಏಕಾಏಕಿ ಹಲ್ಲೆ ನಡೆಸಿದ್ದರು.
ಹಲ್ಲೆಗೊಳಗಾದವರು ಕೆ.ಆರ್.ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಆಸ್ಪತ್ರೆಯಿಂದ ನಾಪತ್ತೆಯಾಗಿರುವ ನಾಲ್ವರು ಮನೆಯಲ್ಲಿ ಇಲ್ಲ ಎಂಬ ಮಾಹಿತಿ ಲಭ್ಯವಾಗಿದೆ.
ಹಲ್ಲೆಗೊಳಗಾದವರು ವೈದ್ಯರ ಅನುಮತಿಯನ್ನೂ ಪಡೆಯದೇ ಏಕಾಏಕಿ ಆಸ್ಪತ್ರೆಯಿಂದ ತೆರಳಿದ್ದಾರೆ ಎನ್ನಲಾಗಿದೆ. ನಾಲ್ವರ ನಾಪತ್ತೆಯಿಂದ ಹಲವು ಅನುಮಾನ ಹುಟ್ಟಿಕೊಂಡಿದೆ.





