ಮೈಸೂರು

40 ಮರ ಕಡಿದ ಪ್ರಕರಣ: ವರದಿ ನೀಡುವಂತೆ ಈಶ್ವರ್‌ ಖಂಡ್ರೆ ಸೂಚನೆ

ಮೈಸೂರು: ರಸ್ತೆ ಅಗಲೀಕರಣಕ್ಕಾಗಿ 40 ಮರಗಳ ಕಟಾವು ಮಾಡಿರುವ ಕುರಿತು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಅವರು ಮೈಸೂರಿನ ಅರಣ್ಯಾಧಿಕಾರಿಗಳಿಂದ ವರದಿ ಕೇಳಿದ್ದಾರೆ.

ಈ ಸಂಬಂಧ ಸಿಸಿಎಫ್‌ ದರ್ಜೆಯ ಅಧಿಕಾರಿಯಿಂದ ತನಿಖೆ ನಡೆಸಿ 7 ದಿನಗಳೊಳಗಾಗಿ ವರದಿ ಸಲ್ಲಿಸುವಂತೆಯೂ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯವರು ಅರಣ್ಯ ಪಡೆ ಮುಖ್ಯಸ್ಥರಿಗೆ ಸೂಚನೆ ನೀಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಅವರು, ಜಾಗತಿಕ ತಾಪಮಾನ ಏರಿಕೆ ಹಾಗೂ ಹವಾಮಾನ ಬದಲಾವಣೆಯ ಸವಾಲುಗಳನ್ನು ಇಡೀ ವಿಶ್ವ ಎದುರಿಸುತ್ತಿದೆ. ಈ ಪ್ರಸಕ್ತ ಸನ್ನಿವೇಶದಲ್ಲಿ ಮರಗಳ ಸಂರಕ್ಷಣೆ ಇಲಾಖೆಯ ಕರ್ತವ್ಯವಾಗಿದೆ. ಅಭಿವೃದ್ಧಿ ಜೊತೆ ಪರಿಸರ ಸಂರಕ್ಷಣೆ ಆಗಬೇಕು ಎಂದರು.

ಹೈದರಾಲಿ ರಸ್ತೆಯ ಅಗಲೀಕರಣದ ಅಗತ್ಯ ಇತ್ತೇ? ಮರ ಕಡಿಯುವ ಅಗತ್ಯವಿತ್ತೇ? ಮರ ಕಡಿತಲೆಗೆ ನಿಯಮಾನುಸಾರ ಕ್ರಮ ವಹಿಸಲಾಗಿದೆಯೇ ಎಂಬ ಬಗ್ಗೆ ಸಿಸಿಎಫ್‌ ದರ್ಜೆಯ ಅಧಿಕಾರಿಯಿಂದ ತನಿಖೆ ನಡೆಸುವಂತೆ ಸೂಚಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

41 mins ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

47 mins ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

50 mins ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

11 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

13 hours ago