ಮೈಸೂರು: ಈ ಬಾರಿಯ ದಸರಾ ದೀಪಾಲಂಕಾರಕ್ಕೆ ಪ್ರವಾಸಿಗರು ಸೇರಿದಂತೆ ಸಾರ್ವಜನಿಕರಿಂದ ನಿರೀಕ್ಷೆಗೂ ಮೀರಿ ಸ್ಪಂದನೆ ವ್ಯಕ್ತವಾಗಿದ್ದರಿಂದ ಸಾರ್ವಜನಿಕರ ಕೋರಿಕೆಯ ಮೇರೆಗೆ ಸೆಸ್ಕ್ ಅಧಿಕಾರಿಗಳು ದೀಪಾಲಂಕಾರವನ್ನು ವಿಸ್ತರಿಸಿದ್ದರು. ದಸರಾ ಉದ್ಘಾಟನೆಯಾದ ಸೆ.26ರಿಂದ ವಿಜಯದಶಮಿ ದಿನವಾದ ಅ.5ರವರೆಗೆ ಮೊದಲು ನಿಗದಿಯಾಗಿತ್ತು. ನಂತರ ಕೋರಿಗೆ ಮೇರೆಗೆ ಅ.10ರವರೆಗೆ ವಿಸ್ತರಿಸಲಾಯಿತು. ಬೇಡಿಕೆ ಹೆಚ್ಚಿದಾಗ ಇನ್ನೂ ಎರಡು ದಿನ (ಅ.12)ದೀಪಾಲಂಕಾರವನ್ನು ವಿಸ್ತರಿಸಿದ್ದರು. ಇದರಿಂದ 15 ದಿನಗಳಿಗೆ ಅಂತ್ಯಗೊಳ್ಳಬೇಕಿದ್ದ ದೀಪಾಲಂಕಾರ 17 ದಿನಗಳ ಕಾಲ ನಡೆಸುವ ಮೂಲಕ ಸಾರ್ವಜನಿಕರ ಮನಸೂರೆಗೊಳ್ಳುವ ಪ್ರಯತ್ನವನ್ನು ಸೆಸ್ಕ್ ಮಾಡಿತ್ತು.
ದಸರಾ ಮಹೋತ್ಸವದ ಪ್ರಯುಕ್ತ ಮೈಸೂರು ನಗರವನ್ನು ವಿದ್ಯುತ್ ದೀಪಗಳಿಂದ ಝಗಮಗಿಸುವಂತೆ ಮಾಡಿದ ಸೆಸ್ಕ್ಗೆ ಬರೋಬ್ಬರಿ 5.5 ಕೋಟಿ ರೂ. ವೆಚ್ಚವಾಗಿದೆ. 4.5 ಕೋಟಿ ರೂ. ಅಂದಾಜು ವೆಚ್ಚವಾಗಲಿದೆ ಎಂಬ ನಿರೀಕ್ಷೆಯಲ್ಲಿದ್ದ ಸೆಸ್ಕ್ಗೆ ಮತ್ತೆ 1 ಕೋಟಿ ರೂ.ಹೆಚ್ಚುವರಿಯಾಗಿ ಖರ್ಚಾಗಿದೆ. ಅವಧಿ ವಿಸ್ತರಣೆಯೊಂದಿಗೆ ಹೆಚ್ಚು ದಿನಗಳ ಕಾಲ ದೀಪಾಲಂಕಾರದ ವ್ಯವಸ್ಥೆ ಇದ್ದ ಪರಿಣಾಮ 2.3 ಲಕ್ಷ ಕಿಲೋವ್ಯಾಟ್ ವಿದ್ಯುತ್ ಬಳಕೆಯಾಗಿದೆ.
ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…
ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…
ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…
ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…
ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…
ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…