ಮೈಸೂರು: ಈ ಬಾರಿಯ ದಸರಾ ದೀಪಾಲಂಕಾರಕ್ಕೆ ಪ್ರವಾಸಿಗರು ಸೇರಿದಂತೆ ಸಾರ್ವಜನಿಕರಿಂದ ನಿರೀಕ್ಷೆಗೂ ಮೀರಿ ಸ್ಪಂದನೆ ವ್ಯಕ್ತವಾಗಿದ್ದರಿಂದ ಸಾರ್ವಜನಿಕರ ಕೋರಿಕೆಯ ಮೇರೆಗೆ ಸೆಸ್ಕ್ ಅಧಿಕಾರಿಗಳು ದೀಪಾಲಂಕಾರವನ್ನು ವಿಸ್ತರಿಸಿದ್ದರು. ದಸರಾ ಉದ್ಘಾಟನೆಯಾದ ಸೆ.26ರಿಂದ ವಿಜಯದಶಮಿ ದಿನವಾದ ಅ.5ರವರೆಗೆ ಮೊದಲು ನಿಗದಿಯಾಗಿತ್ತು. ನಂತರ ಕೋರಿಗೆ ಮೇರೆಗೆ ಅ.10ರವರೆಗೆ ವಿಸ್ತರಿಸಲಾಯಿತು. ಬೇಡಿಕೆ ಹೆಚ್ಚಿದಾಗ ಇನ್ನೂ ಎರಡು ದಿನ (ಅ.12)ದೀಪಾಲಂಕಾರವನ್ನು ವಿಸ್ತರಿಸಿದ್ದರು. ಇದರಿಂದ 15 ದಿನಗಳಿಗೆ ಅಂತ್ಯಗೊಳ್ಳಬೇಕಿದ್ದ ದೀಪಾಲಂಕಾರ 17 ದಿನಗಳ ಕಾಲ ನಡೆಸುವ ಮೂಲಕ ಸಾರ್ವಜನಿಕರ ಮನಸೂರೆಗೊಳ್ಳುವ ಪ್ರಯತ್ನವನ್ನು ಸೆಸ್ಕ್ ಮಾಡಿತ್ತು.
ದಸರಾ ಮಹೋತ್ಸವದ ಪ್ರಯುಕ್ತ ಮೈಸೂರು ನಗರವನ್ನು ವಿದ್ಯುತ್ ದೀಪಗಳಿಂದ ಝಗಮಗಿಸುವಂತೆ ಮಾಡಿದ ಸೆಸ್ಕ್ಗೆ ಬರೋಬ್ಬರಿ 5.5 ಕೋಟಿ ರೂ. ವೆಚ್ಚವಾಗಿದೆ. 4.5 ಕೋಟಿ ರೂ. ಅಂದಾಜು ವೆಚ್ಚವಾಗಲಿದೆ ಎಂಬ ನಿರೀಕ್ಷೆಯಲ್ಲಿದ್ದ ಸೆಸ್ಕ್ಗೆ ಮತ್ತೆ 1 ಕೋಟಿ ರೂ.ಹೆಚ್ಚುವರಿಯಾಗಿ ಖರ್ಚಾಗಿದೆ. ಅವಧಿ ವಿಸ್ತರಣೆಯೊಂದಿಗೆ ಹೆಚ್ಚು ದಿನಗಳ ಕಾಲ ದೀಪಾಲಂಕಾರದ ವ್ಯವಸ್ಥೆ ಇದ್ದ ಪರಿಣಾಮ 2.3 ಲಕ್ಷ ಕಿಲೋವ್ಯಾಟ್ ವಿದ್ಯುತ್ ಬಳಕೆಯಾಗಿದೆ.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…