ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಾದ ಐದು ಗ್ಯಾರಂಟಿಗಳು ದೇಶಾದ್ಯಂತ 5ಜಿ ಪ್ರೋಗ್ರಾಂ ಎಂದೇ ಖ್ಯಾತಿಯಾಗಿವೆ. ಗ್ಯಾರಂಟಿ ಬಗ್ಗೆ ಊಹಾಪೋಹ ಬೇಡ. ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವ ಮಾತೇ ಇಲ್ಲ ಎಂದು ಗ್ಯಾರಂಟಿ ಅನುಷ್ಠಾನ ಸಮಿತಿಯ ರಾಜ್ಯ ಉಪಾಧ್ಯಕ್ಷೆ ಪುಪ್ಪ ಅಮರನಾಥ್ ಹೇಳಿದರು.
ನಗರದ ಪತ್ರಕರ್ತರ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯಪಾಲರೇ ತನ್ನ ಭಾಷಣದಲ್ಲಿ ಗ್ಯಾರಂಟಿ ಯೋಜನೆಯಿಂದ 4.6ಕೋಟಿ ಜನರೊಗೆ ಅನುಕೂಲವಾಗಿದೆ ಎಂದು ಹೇಳಿದ್ದಾರೆ. ಮುಂದಿನ ದಿನಗಳಲ್ಲಿ ಮೈಸೂರಿನಲ್ಲಿ ಗ್ಯಾರಂಟಿ ಯೋಜನೆಗಳ ಪಧಾದಿಕಾರಿಗಳ ನೇತೃತ್ವದಲ್ಲಿ ಜನರಿಗೆ ಯೋಜನೆಗಳು ತಲುಪಿದೆಯಾ ಎಂಬ ಬಗ್ಗೆ ಸಮಿತಿ ಮಾಡಿ ಪರಿಶೀಲನೆ ಮಾಡುವ ಚಿಂತನೆ ಇದೆ ಎಂದರು.
ಇನ್ನು ಗ್ಯಾರಂಟಿ ಯೋಜನೆಗಳನ್ನು ಯಾರಾದರೂ ದುರುಪಯೋಗ ಪಡಿಸಿಕೊಳ್ಳುವುದು ಕಂಡು ಬಂದರೆ ಟೋಲ್ ಫ್ರೀ ನಂಬರ್ 8277000555 ಗೆ ಕರೆ ಮಾಡಿ ಮಾಹಿತಿ ನೀಡಿ ಎಂದು ತಿಳಿಸಿದರು.
ನಮ್ಮ ಸರ್ಕಾರ ನುಡಿದಂತೆ ನಡೆದ ಸರ್ಕಾರ. ಎಲ್ಲಾ ಯೋಜನೆಗಳನ್ನು ಜಾರಿಗೊಳಿಸಿ ಬಡಜನರಿಗೆ ನೆರವಾಗುತ್ತಿದೆ. ಗೃಹಲಕ್ಷ್ಮಿಗೆ ಕೆಲ ತಾಂತ್ರಿಕ ಸಮಸ್ಯೆಯಿಂದ ದೋಷ ಉಂಟಾಗಿತ್ತು. ಇದೀಗ ಅದು ಕೂಡ ಸರಿಯಾಗಿದ್ದು, ನೇರವಾಗಿ ಫಲಾನುಭವಿಗಳ ಖಾತೆಗೆ ಹಣ ಹೋಗ್ತಾ ಇದೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅರುಣ್ ಕುಮಾರ್, ಕ ಮಾರುತಿ ಸೇರಿದಂತೆ ಇನ್ನಿತರರು ಭಾಗಿಯಾಗಿದ್ದರು.
ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…
ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…
ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…
ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…
ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…