ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಾದ ಐದು ಗ್ಯಾರಂಟಿಗಳು ದೇಶಾದ್ಯಂತ 5ಜಿ ಪ್ರೋಗ್ರಾಂ ಎಂದೇ ಖ್ಯಾತಿಯಾಗಿವೆ. ಗ್ಯಾರಂಟಿ ಬಗ್ಗೆ ಊಹಾಪೋಹ ಬೇಡ. ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವ ಮಾತೇ ಇಲ್ಲ ಎಂದು ಗ್ಯಾರಂಟಿ ಅನುಷ್ಠಾನ ಸಮಿತಿಯ ರಾಜ್ಯ ಉಪಾಧ್ಯಕ್ಷೆ ಪುಪ್ಪ ಅಮರನಾಥ್ ಹೇಳಿದರು.
ನಗರದ ಪತ್ರಕರ್ತರ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯಪಾಲರೇ ತನ್ನ ಭಾಷಣದಲ್ಲಿ ಗ್ಯಾರಂಟಿ ಯೋಜನೆಯಿಂದ 4.6ಕೋಟಿ ಜನರೊಗೆ ಅನುಕೂಲವಾಗಿದೆ ಎಂದು ಹೇಳಿದ್ದಾರೆ. ಮುಂದಿನ ದಿನಗಳಲ್ಲಿ ಮೈಸೂರಿನಲ್ಲಿ ಗ್ಯಾರಂಟಿ ಯೋಜನೆಗಳ ಪಧಾದಿಕಾರಿಗಳ ನೇತೃತ್ವದಲ್ಲಿ ಜನರಿಗೆ ಯೋಜನೆಗಳು ತಲುಪಿದೆಯಾ ಎಂಬ ಬಗ್ಗೆ ಸಮಿತಿ ಮಾಡಿ ಪರಿಶೀಲನೆ ಮಾಡುವ ಚಿಂತನೆ ಇದೆ ಎಂದರು.
ಇನ್ನು ಗ್ಯಾರಂಟಿ ಯೋಜನೆಗಳನ್ನು ಯಾರಾದರೂ ದುರುಪಯೋಗ ಪಡಿಸಿಕೊಳ್ಳುವುದು ಕಂಡು ಬಂದರೆ ಟೋಲ್ ಫ್ರೀ ನಂಬರ್ 8277000555 ಗೆ ಕರೆ ಮಾಡಿ ಮಾಹಿತಿ ನೀಡಿ ಎಂದು ತಿಳಿಸಿದರು.
ನಮ್ಮ ಸರ್ಕಾರ ನುಡಿದಂತೆ ನಡೆದ ಸರ್ಕಾರ. ಎಲ್ಲಾ ಯೋಜನೆಗಳನ್ನು ಜಾರಿಗೊಳಿಸಿ ಬಡಜನರಿಗೆ ನೆರವಾಗುತ್ತಿದೆ. ಗೃಹಲಕ್ಷ್ಮಿಗೆ ಕೆಲ ತಾಂತ್ರಿಕ ಸಮಸ್ಯೆಯಿಂದ ದೋಷ ಉಂಟಾಗಿತ್ತು. ಇದೀಗ ಅದು ಕೂಡ ಸರಿಯಾಗಿದ್ದು, ನೇರವಾಗಿ ಫಲಾನುಭವಿಗಳ ಖಾತೆಗೆ ಹಣ ಹೋಗ್ತಾ ಇದೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅರುಣ್ ಕುಮಾರ್, ಕ ಮಾರುತಿ ಸೇರಿದಂತೆ ಇನ್ನಿತರರು ಭಾಗಿಯಾಗಿದ್ದರು.
ಭೇರ್ಯ ಮಹೇಶ್ ಬರಪೀಡಿತ ತಾಲ್ಲೂಕುಗಳು ಎಂದು ಘೋಷಿಸಲು ರೈತ ಮುಖಂಡರ ಆಗ್ರಹ ಕೆ.ಆರ್.ನಗರ: ಜಿಲ್ಲೆಯಲ್ಲಿ ಭತ್ತದ ಕಣಜ ಎಂದೇ ಪ್ರಸಿದ್ಧಿಯಾಗಿರುವ…
ಕೆ.ಬಿ.ರಮೇಶನಾಯಕ ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿಗೆ ಸಹಕಾರಿ; ಸ್ಥಳೀಯ ಉತ್ಪನ್ನಗಳ ಮಾರಾಟ, ಆದಾಯ, ಆರೋಗ್ಯ ವೃದ್ಧಿ ಮೈಸೂರು: ಜಗತ್ತಿಗೆ ಯೋಗವನ್ನು ಪರಿಚಯಿಸಿಕೊಡುವ…
ಎಚ್.ಎಸ್.ದಿನೇಶ್ಕುಮಾರ್ ಮೈಸೂರು: ಎರಡು ದಿನಗಳ ಹಿಂದೆ ಸುರಿದ ಮಳೆಗೆ ಮೈಸೂರು ನಗರದ ಹಲವೆಡೆ ಮರಉರುಳಿರುವುದೂ ಸೇರಿದಂತೆ ಅನೇಕ ಅನಾಹುತಗಳು ನಡೆದಿದೆ.…
ಮೈಸೂರು : ಕೆಎಸ್ಆರ್ಟಿಸಿ ನೌಕರರು ಮೇ 20ರಿಂದ ಅನಿಧಿಷ್ಟಾವಧಿಯ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆಗೆ…
ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ಸಂಘಟನೆಗಳು ಕರೆ ನೀಡಿರುವ ಬಸ್ ಬಂದ್ ಆಗುವುದು ನಿಶ್ಚಿತವಾಗಿದೆ. ಸೋಮವಾರ…