ದೇಶದ ಉತ್ಪಾದನೆಗೆ ಹೈನುಗಾರಿಕೆ ಇನ್ನೂ ಹೆಚ್ಚಿನ ಕೊಡುಗೆ ನೀಡಲಿ: ಡಾ.ಹೆಚ್.ಸಿ.ಮಹದೇವಪ್ಪ
ಮೈಸೂರು: ಮಾನವನ ಜೀವನದ ಜೊತೆಗೆ ಪಶುಗಳ ಸಾಕಾಣೆ ಹಾಗೂ ಹೈನುಗಾರಿಕೆ ಒಂದಕ್ಕೊಂದು ಬೆಸದುಕೊಂಡಿದೆ. ರಾಷ್ಟ್ರದ ಉತ್ಪಾದನೆಗೆ ಹೈನುಗಾರಿಕೆ ಇನ್ನೂ ಹೆಚ್ಚಿನ ಕೊಡುಗೆ ನೀಡುವಂತಾಗಲಿ ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಹೇಳಿದರು.
ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಮತ್ತು ಕರ್ನಾಟಕ ಪಶುವೈದ್ಯಕೀಯ ಸಂಘದ ವತಿಯಿಂದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಘಟಿಕೋತ್ಸವ ಭವನದಲ್ಲಿ ಶನಿವಾರ ಆಯೋಜಿಸಿದ್ದ “ಪಶುವೈದ್ಯರ ರಾಜ್ಯ ಮಟ್ಟದ ತಾಂತ್ರಿಕ ವಿಚಾರ ಸಂಕಿರಣ ಹಾಗೂ 6ನೇ ಸುತ್ತಿನ ಕಾಲುಬಾಯಿಜ್ವರ ಲಸಿಕಾ ಕಾರ್ಯಕ್ರಮ” ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪಶುಪಾಲನೆಯಿಂದ ಶೇ5 ರಷ್ಟು ಜಿಡಿಪಿ ವೃದ್ಧಿಯಾಗುತ್ತಿರುವುದು ಪ್ರಶಂಸೆಯ ವಿಚಾರ. ಹೆಣ್ಣು ಕರುಗಳೇ ಜನಿಸುವಂತೆ ಗರ್ಭ ಧರಿಸುವಷ್ಟು ತಂತ್ರಜ್ಞಾನ ಮುಂದುವರೆದಿದೆ. ಸಂತಾನಾಭಿವೃದ್ಧಿಯ ಜೊತೆಗೆ ಉತ್ಪಾದನಾ ಸಾಮರ್ಥ್ಯ ಹೆಚ್ಚಿಸಬೇಕು ಎಂದು ಹೇಳಿದರು.
ಕೃಷಿ ಕ್ಷೇತ್ರದಲ್ಲಿ ಪಶುಗಳಿಗಿಂತ ಯಂತ್ರದ ಬಳಕೆ ಹೆಚ್ಚಾಗಿದೆ. ಪ್ರಾಣಿಗಳ ಗೊಬ್ಬರವನ್ನು ಹೆಚ್ಚು ಬಳಸದೆ, ರಾಸಾಯನಿಕದ ಮೊರೆ ಹೋಗಲಾಗುತ್ತದೆ. ಇದು ಮನುಷ್ಯನ ಆರೋಗ್ಯದ ಮೇಲೆ ಪರಿಣಾಮ ಬೀರಲಿದೆ. ಆದಷ್ಟು ಈ ಕ್ರಮವನ್ನು ತಡೆಗಟ್ಟುವಂತೆ ಜಾಗೃತಿ ಮೂಡಿಸಬೇಕು ಎಂದರು.
ಟಿಪ್ಪು ಸುಲ್ತಾನ್ ಕೂಡ ಹಳ್ಳಕಾರ್ ತಳಿಗಳ ಬೆಳವಣಿಗೆಗೆ ಕೊಡುಗೆ ನೀಡಿದ್ದಾರೆ. ನಮ್ಮ ದೊಡ್ಡಪ್ಪ ಏನೂ ಓದಿರಲಿಲ್ಲ. ಅವರು ಕೂಡ ಊರಿನಲ್ಲಿ ಅನಾರೋಗ್ಯಕ್ಕೆ ತುತ್ತಾದ ಪಶುಗಳಿಗೆ ಔಷಧಿ ನೀಡುತ್ತಿದ್ದರು. ಆದರೆ ಇಂದು ವೈಜ್ಞಾನಿಕತೆ ಪರಿಣಾಮಕಾರಿಯಾಗಿ ಬೆಳೆದಿದೆ ಎಂದು ಹೇಳಿದರು.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಏಪ್ರಿಲ್ನಿಂದ ಅನ್ವಯವಾಗುವಂತೆ ಫಾಸ್ಟ್ಟ್ಯಾಗ್ ವಾರ್ಷಿಕ ಪಾಸ್ ದರವನ್ನು ೩೦೦೦ ರೂ.ನಿಂದ ೩೦೭೫ ರೂ. ಗೆ ಏರಿಸಿರುವುದು…
ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ ಕ್ರಿಕೆಟ್ ಪಂದ್ಯಕ್ಕೆ ಟಿಕೆಟ್ ಕೊಡಿಸಿ ಎಂದು ಎಲ್ಲಾ ಪಕ್ಷಗಳ ಕೆಲವು ಶಾಸಕರು…
ಎಸ್ಎಸ್ಎಲ್ಸಿ ಹಿಂದಿ ಭಾಷೆಯ ಪರೀಕ್ಷೆ ಮಾ.೩೧ರಂದು ನಡೆಯಲಿದ್ದು, ಪರೀಕ್ಷೆ ಸಂದರ್ಭದಲ್ಲಿಯೇ ಸರ್ಕಾರ ಹಿಂದಿ ವಿಷಯದಲ್ಲಿ ಅಂಕಗಳನ್ನು ಪರಿಗಣಿಸುವುದಿಲ್ಲ, ಬದಲಾಗಿ ಗ್ರೇಡ್…
ಜನರಿಂದ ಚುನಾಯಿತರಾದ ಜನಪ್ರತಿನಿಧಿಗೆ ತನ್ನ ಕ್ಷೇತ್ರಕ್ಕೆ ಮಾಡಬೇಕಾಗಿರುವ ಯೋಜನೆಗಳ ಬಗ್ಗೆ ಸಾಕಷ್ಟು ಒಲವಿರಬೇಕು ಹಾಗೂ ಬದ್ಧತೆ ಇರಬೇಕು ಎನ್ನುವುದಕ್ಕೆ ತಮಗೆ…
‘ಸಾಮ್ರಾಜ್ಯಶಾಹಿ ದಾಳಿ ಹಾಗೂ ಅದರ ಪರಿಣಾಮಗಳು’ ಕುರಿತ ವಿಚಾರಸಂಕಿರಣ ಹೊಸದಿಲ್ಲಿ: ಪಶ್ಚಿಮ ಏಷ್ಯದಲ್ಲಿ ತಲೆದೋರಿರುವ ಬಿಕ್ಕಟ್ಟಿನ ಸಂದರ್ಭದಲ್ಲಿ ಭಾರತದ ಬದಲಾದ…
ನವೀನ್ ಡಿಸೋಜ ೩ ತಿಂಗಳಲ್ಲಿ ೧೩೮ ಎನ್ಡಿಪಿಎಸ್ ಪ್ರಕರಣ ದಾಖಲು; ೬ ಕೆ.ಜಿ. ೬೬೪ ಗ್ರಾಂ ಗಾಂಜಾ, ೩೫.೬೬ ಗ್ರಾಂ…