ಮೈಸೂರು

5 ಹುಲಿ ಸಾವು ಪ್ರಕರಣ : ನಿ.ಡಿಸಿಎಫ್‌ ಪೂವಯ್ಯ ಹೇಳಿದಿಷ್ಟು?

ಮೈಸೂರು: ಹನೂರಿನ ಸಮೀಪದ ಅರಣ್ಯದಲ್ಲಿ 5 ಹುಲಿಗಳ ಸಾವಿಗೆ ವಿಷಪ್ರಶಾನದ ಶಂಕೆ ದೃಢವಾಗಿದೆ. ಹೀಗಾಗಿ, ತಪ್ಪಿತಸ್ತರಿಗೆ ಸುಮಾರು 7 ವರ್ಷ ಜೈಲು ಶಿಕ್ಷೆಯಾಗಲಿದೆ ಎಂದ ಹಿರಿಯ ಅರಣ್ಯಧಿಕಾರಿ ಹಾಗೂ ನಿವೃತ್ತ ಡಿಸಿಎಫ್ ಪೂವಯ್ಯ ಹೇಳಿದ್ದಾರೆ.

ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಷ ಹಾಕಿರಬಹುದು ಎಂಬ ಶಂಕೆ ದೃಢವಾಗಿದೆ. ಫಾರೆನ್ಸಿಕ್ ಲ್ಯಾಬ್ ನಿಂದ ವರದಿ ಬರಲು ಒಂದುವಾರ ಆಗಲಿದೆ. ಬಳಿಕ ಘಟನೆ ಬಗ್ಗೆ ಸಂಪೂರ್ಣ ಮಾಹಿತಿ ಸಿಗಲಿದೆ ಎಂದು ಹೇಳಿದರು.

ಹುಲಿಗಳು ಒಂದು ಪ್ರಾಣಿಯನ್ನು ಕೊಂದ ಬಳಿಕ ಅದು ಸಂಪೂರ್ಣ ಮುಗಿಯುವವರೆಗೂ ಬೇರೆ ಪ್ರಾಣಿಯನ್ನು ಕೊಲ್ಲುವುದಿಲ್ಲ. ಹಾಗೆಯೇ ಇತ್ತೀಚಿಗೆ ಈ ಭಾಗದಲ್ಲಿ ಒಂದು ಹಸು ಬಲಿ ಪಡೆದಿದೆ ಎನ್ನುವ ಮಾಹಿತಿ ಇದೆ. ವಾಚರ್‌ಗಳಿಗೆ ಸಂಬಳ ನೀಡದಿರುವುದೇ ಇದಕ್ಕೆಲ್ಲ ಕಾರಣ ಎಂದು ಹೇಳಲು ಸಾಧ್ಯವಿಲ್ಲ ಎಂದರು.

5 ಹುಲಿ ಸಾವು ದೊಡ್ಡ ನಷ್ಟ: ನನ್ನ ಅವಧಿಯಲ್ಲೂ ಈ ಹಿಂದೆ ಚಿರತೆಗೆ ವಿಷ ಹಾಕಿದ್ದ ಪ್ರಕರಣ ಗುಂಡ್ಲುಪೇಟೆಯಲ್ಲಿ ಜರುಗಿತ್ತು. ಆ ವೇಳೆ ಕಾನೂನು ಶಿಕ್ಷೆಯಾಗಿತ್ತು. ಈ ಪ್ರಕಾರಣದಲ್ಲೂ ಅದೇ ಮಾದರಿ ಶಿಕ್ಷೆ ಆಗಲಿದೆ. 5 ಹುಲಿ ಸಾವು ದೊಡ್ಡ ನಷ್ಟ. ಇದರಲ್ಲಿ ಅಧಿಕಾರಿಗಳ ಪಾತ್ರವೇನಿಲ್ಲ. ಸಾವಿಗೆ ವಿಷ ಹಾಕಿದವರೇ ನೇರ ಹೊಣೆಯಾಗುತ್ತಾರೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಹಾರ್ಮುಜ್‌ ಜಲಸಂಧಿ ಬಳಿ ಅಮೇರಿಕಾ ಅಬ್ಬರ: ಇರಾನ್‌ನ 16 ನೌಕೆಗಳು ಧ್ವಂಸ

ಟೆಹರಾನ್:‌ ವಿಶ್ವದ ಪ್ರಮುಖ ಇಂಧನ ಸಾಗಣೆ ಮಾರ್ಗವಾದ ಹಾರ್ಮುಜ್‌ ಜಲಸಂಧಿಯ ಬಳಿ ನೌಕಾ ಮೈನ್‌ಗಳನ್ನು ಅಳವಡಿಸಲು ಸಜ್ಜಾಗಿದ್ದ ಇರಾನ್‌ನ 16…

2 hours ago

90 ದಿನದೊಳಗೆ ಅಂಗನವಾಡಿ ಖಾಲಿ ಹುದ್ದೆ ಭರ್ತಿಗೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಬೆಂಗಳೂರು: ಅಂಗನವಾಡಿ ಕೇಂದ್ರಗಳಲ್ಲಿ ಯಾವುದೇ ಹುದ್ದೆ ಖಾಲಿಯಾದ 90 ದಿನಗಳ ಒಳಗಾಗಿ ಭರ್ತಿ ಮಾಡಬೇಕು ಎಂದು ಕಳೆದ ಡಿಸೆಂಬರ್‌ನಲ್ಲೇ ಜಿಲ್ಲಾಧಿಕಾರಿಗಳು…

2 hours ago

ಗೃಹ ಬಳಕೆಯ ಗ್ಯಾಸ್‌‍ ಸಿಲಿಂಡರ್‌ನ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಇಲ್ಲ: ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು: ಗೃಹ ಬಳಕೆಯ ಗ್ಯಾಸ್‌‍ ಸಿಲಿಂಡರ್‌ನ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ…

2 hours ago

ಮಂಡ್ಯ: ಕುಡಿಯುವ ನೀರಿನ ಗುಣಮಟ್ಟಕ್ಕೆ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ಕುಡಿಯುವ ನೀರಿನ ಗುಣಮಟ್ಟವು ನೇರವಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುವುದರಿಂದ ಸುರಕ್ಷಿತ, ಶುದ್ಧ ಮತ್ತು ರಾಸಾಯನಿಕ ಮುಕ್ತ ನೀರನ್ನು…

3 hours ago

ನಾಳೆ ಮೈಸೂರಿಗೆ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಜೆಟ್‌ ಅಧಿವೇಶನದ ನಡುವೆಯೇ ಸಿಎಂ ಸಿದ್ದರಾಮಯ್ಯ ನಾಳೆ ಮೈಸೂರಿಗೆ ಆಗಮಿಸಲಿದ್ದಾರೆ. ನಾಳೆ ಬೆಳಿಗ್ಗೆ 10 ಗಂಟೆಗೆ ಎಚ್‌ಎಎಲ್‌ ವಿಮಾನ…

3 hours ago

ಎಲ್‌ಪಿಜಿ ಸಿಲಿಂಡರ್‌ ಪೂರೈಕೆಯಲ್ಲಿ ವ್ಯತ್ಯಯ: ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಇರಾನ್‌-ಇಸ್ರೇಲ್‌ ಯುದ್ಧ ಭಾರತದ ಮೇಲೂ ಪರಿಣಾಮ ಬೀರಿದ್ದು, ಗ್ಯಾಸ್‌ ಸಿಲಿಂಡರ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಈ ಬಗ್ಗೆ ಗೃಹ…

5 hours ago