Death of 5 Tigers; Forest Department Needs to Wake Up
ಮೈಸೂರು: ಹನೂರಿನ ಸಮೀಪದ ಅರಣ್ಯದಲ್ಲಿ 5 ಹುಲಿಗಳ ಸಾವಿಗೆ ವಿಷಪ್ರಶಾನದ ಶಂಕೆ ದೃಢವಾಗಿದೆ. ಹೀಗಾಗಿ, ತಪ್ಪಿತಸ್ತರಿಗೆ ಸುಮಾರು 7 ವರ್ಷ ಜೈಲು ಶಿಕ್ಷೆಯಾಗಲಿದೆ ಎಂದ ಹಿರಿಯ ಅರಣ್ಯಧಿಕಾರಿ ಹಾಗೂ ನಿವೃತ್ತ ಡಿಸಿಎಫ್ ಪೂವಯ್ಯ ಹೇಳಿದ್ದಾರೆ.
ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಷ ಹಾಕಿರಬಹುದು ಎಂಬ ಶಂಕೆ ದೃಢವಾಗಿದೆ. ಫಾರೆನ್ಸಿಕ್ ಲ್ಯಾಬ್ ನಿಂದ ವರದಿ ಬರಲು ಒಂದುವಾರ ಆಗಲಿದೆ. ಬಳಿಕ ಘಟನೆ ಬಗ್ಗೆ ಸಂಪೂರ್ಣ ಮಾಹಿತಿ ಸಿಗಲಿದೆ ಎಂದು ಹೇಳಿದರು.
ಹುಲಿಗಳು ಒಂದು ಪ್ರಾಣಿಯನ್ನು ಕೊಂದ ಬಳಿಕ ಅದು ಸಂಪೂರ್ಣ ಮುಗಿಯುವವರೆಗೂ ಬೇರೆ ಪ್ರಾಣಿಯನ್ನು ಕೊಲ್ಲುವುದಿಲ್ಲ. ಹಾಗೆಯೇ ಇತ್ತೀಚಿಗೆ ಈ ಭಾಗದಲ್ಲಿ ಒಂದು ಹಸು ಬಲಿ ಪಡೆದಿದೆ ಎನ್ನುವ ಮಾಹಿತಿ ಇದೆ. ವಾಚರ್ಗಳಿಗೆ ಸಂಬಳ ನೀಡದಿರುವುದೇ ಇದಕ್ಕೆಲ್ಲ ಕಾರಣ ಎಂದು ಹೇಳಲು ಸಾಧ್ಯವಿಲ್ಲ ಎಂದರು.
5 ಹುಲಿ ಸಾವು ದೊಡ್ಡ ನಷ್ಟ: ನನ್ನ ಅವಧಿಯಲ್ಲೂ ಈ ಹಿಂದೆ ಚಿರತೆಗೆ ವಿಷ ಹಾಕಿದ್ದ ಪ್ರಕರಣ ಗುಂಡ್ಲುಪೇಟೆಯಲ್ಲಿ ಜರುಗಿತ್ತು. ಆ ವೇಳೆ ಕಾನೂನು ಶಿಕ್ಷೆಯಾಗಿತ್ತು. ಈ ಪ್ರಕಾರಣದಲ್ಲೂ ಅದೇ ಮಾದರಿ ಶಿಕ್ಷೆ ಆಗಲಿದೆ. 5 ಹುಲಿ ಸಾವು ದೊಡ್ಡ ನಷ್ಟ. ಇದರಲ್ಲಿ ಅಧಿಕಾರಿಗಳ ಪಾತ್ರವೇನಿಲ್ಲ. ಸಾವಿಗೆ ವಿಷ ಹಾಕಿದವರೇ ನೇರ ಹೊಣೆಯಾಗುತ್ತಾರೆ ಎಂದು ಹೇಳಿದರು.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…