Death of 5 Tigers; Forest Department Needs to Wake Up
ಮೈಸೂರು: ಹನೂರಿನ ಸಮೀಪದ ಅರಣ್ಯದಲ್ಲಿ 5 ಹುಲಿಗಳ ಸಾವಿಗೆ ವಿಷಪ್ರಶಾನದ ಶಂಕೆ ದೃಢವಾಗಿದೆ. ಹೀಗಾಗಿ, ತಪ್ಪಿತಸ್ತರಿಗೆ ಸುಮಾರು 7 ವರ್ಷ ಜೈಲು ಶಿಕ್ಷೆಯಾಗಲಿದೆ ಎಂದ ಹಿರಿಯ ಅರಣ್ಯಧಿಕಾರಿ ಹಾಗೂ ನಿವೃತ್ತ ಡಿಸಿಎಫ್ ಪೂವಯ್ಯ ಹೇಳಿದ್ದಾರೆ.
ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಷ ಹಾಕಿರಬಹುದು ಎಂಬ ಶಂಕೆ ದೃಢವಾಗಿದೆ. ಫಾರೆನ್ಸಿಕ್ ಲ್ಯಾಬ್ ನಿಂದ ವರದಿ ಬರಲು ಒಂದುವಾರ ಆಗಲಿದೆ. ಬಳಿಕ ಘಟನೆ ಬಗ್ಗೆ ಸಂಪೂರ್ಣ ಮಾಹಿತಿ ಸಿಗಲಿದೆ ಎಂದು ಹೇಳಿದರು.
ಹುಲಿಗಳು ಒಂದು ಪ್ರಾಣಿಯನ್ನು ಕೊಂದ ಬಳಿಕ ಅದು ಸಂಪೂರ್ಣ ಮುಗಿಯುವವರೆಗೂ ಬೇರೆ ಪ್ರಾಣಿಯನ್ನು ಕೊಲ್ಲುವುದಿಲ್ಲ. ಹಾಗೆಯೇ ಇತ್ತೀಚಿಗೆ ಈ ಭಾಗದಲ್ಲಿ ಒಂದು ಹಸು ಬಲಿ ಪಡೆದಿದೆ ಎನ್ನುವ ಮಾಹಿತಿ ಇದೆ. ವಾಚರ್ಗಳಿಗೆ ಸಂಬಳ ನೀಡದಿರುವುದೇ ಇದಕ್ಕೆಲ್ಲ ಕಾರಣ ಎಂದು ಹೇಳಲು ಸಾಧ್ಯವಿಲ್ಲ ಎಂದರು.
5 ಹುಲಿ ಸಾವು ದೊಡ್ಡ ನಷ್ಟ: ನನ್ನ ಅವಧಿಯಲ್ಲೂ ಈ ಹಿಂದೆ ಚಿರತೆಗೆ ವಿಷ ಹಾಕಿದ್ದ ಪ್ರಕರಣ ಗುಂಡ್ಲುಪೇಟೆಯಲ್ಲಿ ಜರುಗಿತ್ತು. ಆ ವೇಳೆ ಕಾನೂನು ಶಿಕ್ಷೆಯಾಗಿತ್ತು. ಈ ಪ್ರಕಾರಣದಲ್ಲೂ ಅದೇ ಮಾದರಿ ಶಿಕ್ಷೆ ಆಗಲಿದೆ. 5 ಹುಲಿ ಸಾವು ದೊಡ್ಡ ನಷ್ಟ. ಇದರಲ್ಲಿ ಅಧಿಕಾರಿಗಳ ಪಾತ್ರವೇನಿಲ್ಲ. ಸಾವಿಗೆ ವಿಷ ಹಾಕಿದವರೇ ನೇರ ಹೊಣೆಯಾಗುತ್ತಾರೆ ಎಂದು ಹೇಳಿದರು.
ಛತ್ತೀಸಗಢ : ನಾರಾಯಣಪುರ ಗಡಿ ಪ್ರದೇಶದಲ್ಲಿ ನೆಲಬಾಂಬ್ ತೆಗೆಯುವ ಕಾರ್ಯಾಚರಣೆಯ ಸಮಯದಲ್ಲಿ ಐಇಡಿ ಸ್ಛೋಟಗೊಂಡಿದ್ದು ನಾಲ್ವರು ಡಿಆರ್ಜಿ ಯೋಧರು ಹುತಾತ್ಮರಾಗಿದ್ದಾರೆ.…
ಮಂಡ್ಯ : ತಾಲ್ಲೂಕಿನ ಜವನಹಳ್ಳಿ ಗ್ರಾಮದಲ್ಲಿ ನೀರಿನ ಕೊಳದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯ ಮೃತ ದೇಹ ಪತ್ತೆಯಾಗಿದ್ದು, ಕೊಲೆ ಶಂಕೆ…
ಮದ್ದೂರು : ಜಾಗತಿಕ ತಾಪಮಾನ ಏರಿಕೆಗೆ ವೃಕ್ಷ ಸಂವರ್ಧನೆ, ಸಂರಕ್ಷಣೆಯೇ ಮಾರ್ಗವಾಗಿದ್ದು, ಹಸಿರು ಹೊದಿಕೆ ಹೆಚ್ಚಿಸುವಂತೆ ಮತ್ತು ಮಂಡ್ಯ ನಗರದ…
ಬೆಂಗಳೂರು : ಬಜೆಟ್ನಲ್ಲಿ ಘೋಷಿಸಿದ ಯೋಜನೆಗಳು ಘೋಷಣೆಯಾಗಿಯೇ ಉಳಿಯಬಾರದು. ಅನುಷ್ಠಾನದಲ್ಲಿ ವಿಳಂಬವಾದರೆ ಸಂಬಂಧಪಟ್ಟ ಕಾರ್ಯದರ್ಶಿಗಳೇ ಹೊಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಹನೂರು : ಮಲೆ ಮಹದೇಶ್ವರ ಬೆಟ್ಟದಿಂದ ತಮಿಳುನಾಡಿನ ಮೆಟ್ಟೂರಿಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸವಾರನಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ…
ಬೆಂಗಳೂರು : ದೇಶದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್ ಯುಜಿ ಭಾನುವಾರ…