ಮೈಸೂರು

ಕಬಿನಿ ಹಿನ್ನೀರಿನಲ್ಲಿ 5 ರಣಹದ್ದು, ಸಾಕುನಾಯಿ ಕಳೇಬರ ಪತ್ತೆ

ಎಚ್.ಡಿ.ಕೋಟೆ : ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗುಂಡ್ರೆ ವನ್ಯಜೀವಿ ವಲಯದ ಕಬಿನಿ ಹಿನ್ನೀರಿನ ಅರಣ್ಯ ಪ್ರದೇಶದಲ್ಲಿ 5 ರಣಹದ್ದುಗಳು ಮತ್ತು 1 ಸಾಕು ನಾಯಿಯ ಕಳೇಬರ ಪತ್ತೆಯಾಗಿದೆ.

ಅರಣ್ಯ ಸಿಬ್ಬಂದಿ ಎಂದಿನಂತೆ ಗಸ್ತು ನಡೆಸುತ್ತಿದ್ದಾಗ ಮಧ್ಯ ಹಿನ್ನೀರಿನ ತೀರ ಪ್ರದೇಶದಲ್ಲಿ 5 ರಣಹದ್ದುಗಳು ಮತ್ತು 1 ಸಾಕು ನಾಯಿಯ ಕಳೇಬರ ಇರುವುದು ಗೊತ್ತಾಗಿದೆ. ಕೂಡಲೇ ಸಿಬ್ಬಂದಿ ವಲಯ ಅರಣ್ಯಾಧಿಕಾರಿಗಳಿಗೆ ತಿಳಿಸಿದ್ದು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ನಂತರ ಶನಿವಾರ ಹೆಡಿಯಾಲ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪರಮೇಶ್, ಬಂಡೀಪುರ ಇಲಾಖಾ ಪಶು ವೈದ್ಯಾಧಿಕಾರಿ ಅಮೃತೇಶ್ ಮರಣೋತ್ತರ ಪರೀಕ್ಷೆ ನಡೆಸಿದ್ದು, ಮೇಲ್ನೋಟಕ್ಕೆ ಇದು ಸಾಕು ನಾಯಿಗೆ ವಿಷ ಪ್ರಾಶನ ಮಾಡಿದ್ದು, ಅದನ್ನು ತಿಂದ ರಣಹದ್ದುಗಳು ಅಸುನೀಗಿವೆ ಎಂದು ಅಭಿಪ್ರಾಯ ಪಡಲಾಗಿದೆ.

ನಾಯಿ ಮತ್ತು ರಣಹದ್ದುಗಳ ದೇಹದ ಒಳ ಅಂಗಾಂಗಗಳ ಮಾದರಿಗಳನ್ನು ಸಂಗ್ರಹಿಸಿ ಹೆಚ್ಚಿನ ತನಿಖೆಗೆ ವಿಧಿ ವಿಜ್ಞಾನ ಪ್ರಾದೇಶಿಕ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಈ ಸಂಬಂಧ ವನ್ಯಜೀವಿ ಅರಣ್ಯ ಪ್ರಕರಣ ದಾಖಲಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

20 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

20 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

20 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

20 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

20 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

23 hours ago