kabini
ಎಚ್.ಡಿ.ಕೋಟೆ : ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗುಂಡ್ರೆ ವನ್ಯಜೀವಿ ವಲಯದ ಕಬಿನಿ ಹಿನ್ನೀರಿನ ಅರಣ್ಯ ಪ್ರದೇಶದಲ್ಲಿ 5 ರಣಹದ್ದುಗಳು ಮತ್ತು 1 ಸಾಕು ನಾಯಿಯ ಕಳೇಬರ ಪತ್ತೆಯಾಗಿದೆ.
ಅರಣ್ಯ ಸಿಬ್ಬಂದಿ ಎಂದಿನಂತೆ ಗಸ್ತು ನಡೆಸುತ್ತಿದ್ದಾಗ ಮಧ್ಯ ಹಿನ್ನೀರಿನ ತೀರ ಪ್ರದೇಶದಲ್ಲಿ 5 ರಣಹದ್ದುಗಳು ಮತ್ತು 1 ಸಾಕು ನಾಯಿಯ ಕಳೇಬರ ಇರುವುದು ಗೊತ್ತಾಗಿದೆ. ಕೂಡಲೇ ಸಿಬ್ಬಂದಿ ವಲಯ ಅರಣ್ಯಾಧಿಕಾರಿಗಳಿಗೆ ತಿಳಿಸಿದ್ದು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ನಂತರ ಶನಿವಾರ ಹೆಡಿಯಾಲ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪರಮೇಶ್, ಬಂಡೀಪುರ ಇಲಾಖಾ ಪಶು ವೈದ್ಯಾಧಿಕಾರಿ ಅಮೃತೇಶ್ ಮರಣೋತ್ತರ ಪರೀಕ್ಷೆ ನಡೆಸಿದ್ದು, ಮೇಲ್ನೋಟಕ್ಕೆ ಇದು ಸಾಕು ನಾಯಿಗೆ ವಿಷ ಪ್ರಾಶನ ಮಾಡಿದ್ದು, ಅದನ್ನು ತಿಂದ ರಣಹದ್ದುಗಳು ಅಸುನೀಗಿವೆ ಎಂದು ಅಭಿಪ್ರಾಯ ಪಡಲಾಗಿದೆ.
ನಾಯಿ ಮತ್ತು ರಣಹದ್ದುಗಳ ದೇಹದ ಒಳ ಅಂಗಾಂಗಗಳ ಮಾದರಿಗಳನ್ನು ಸಂಗ್ರಹಿಸಿ ಹೆಚ್ಚಿನ ತನಿಖೆಗೆ ವಿಧಿ ವಿಜ್ಞಾನ ಪ್ರಾದೇಶಿಕ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಈ ಸಂಬಂಧ ವನ್ಯಜೀವಿ ಅರಣ್ಯ ಪ್ರಕರಣ ದಾಖಲಿಸಲಾಗಿದೆ.
ರಾಮನಗರ: ಬೆಂಗಳೂರು ಮತ್ತು ಮೈಸೂರು ನಡುವೆ ನಿತ್ಯ ಸಂಚರಿಸುವ ಒಡೆಯರ್ ಎಕ್ಸ್ಪ್ರೆಸ್ ರೈಲಿಗೆ ಈಗ ರಾಮನಗರ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ…
ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಟಿವಿಕೆ ಪಕ್ಷವು ಇದೀಗ ಸರ್ಕಾರ ರಚನೆ ಮಾಡಲು ಮುಂದಾಗಿದೆ. ಚೆನ್ನೈನ ಪಣಿಯೂರಿನಲ್ಲಿರುವ…
ಬೆಂಗಳೂರು: ತಮಿಳುನಾಡಿನ ಮತದಾರರು ಬದಲಾವಣೆ ಬಯಸಿದ್ದರು. ಅದರಂತೆ ಬದಲಾವಣೆಗೆ ಮತ ಹಾಕಿದ್ದಾರೆ. ಈ ಫಲಿತಾಂಶ ತುಂಬಾ ಆಶ್ಚರ್ಯಕರವಾಗಿದೆ ಎಂದು ಸಿಎಂ…
ಚೆನ್ನೈ: ಡಿಎಂಕೆ ಅಧ್ಯಕ್ಷ ಎಂ ಕೆ ಸ್ಟಾಲಿನ್ ಅವರಿಂದು ತಮಿಳುನಾಡು ಸಿಎಂ ಹುದ್ದಗೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಲೋಕಭವನದಲ್ಲಿರುವ…
ಮೈಸೂರು: ಸೂರ್ಯ ಉದಯಿಸುವ ಮುನ್ನವೇ ಮೈಸೂರಿನ ಉದಯಗಿರಿಯಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ. ಉದಯಗಿರಿ ಪೊಲೀಸ್ ಠಾಣೆಯಿಂದ ಕೇವಲ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಮಾಪುರ ವ್ಯಾಪ್ತಿಯಲ್ಲಿ ಜಮೀನುಗಳಲ್ಲಿ ಇರುತ್ತಿದ್ದ ನೀರೆತ್ತುವ ಪಂಪ್ ಸೆಟ್ ಮೋಟಾರ್ಗಳನ್ನು…