ಮೈಸೂರು

ಸವಾರರೇ ಎಚ್ಚರ: ಮೈಸೂರಲ್ಲಿ ಇನ್ಮುಂದೆ ಟ್ರಾಫಿಕ್‌ನಲ್ಲಿ ಕಾರ್ಯ ನಿರ್ವಹಿಸಲಿದೆ ಎಐ ಕ್ಯಾಮರಾಗಳು.!

ಮೈಸೂರು: ರಸ್ತೆ ಅಪಘಾತ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾ ಪೊಲೀಸ್‌ ಇಲಾಖಾ ವತಿಯಿಂದ ಸ್ಥಳೀಯ ಠಾಣಾ ವ್ಯಾಪ್ತಿಯ 23 ಸ್ಥಳಗಳಲ್ಲಿ 50 ಕೃತಕ ಬುದ್ದಿಮತ್ತೆ (ಎಐ) ಕ್ಯಾಮರಾಗಳನ್ನು ಅಳವಡಿಸಲಾಗಿದೆ.

ಈ ಎಐ ಕ್ಯಾಮರಾಗಳು ಇದೇ ಜುಲೈ. 7ರಿಂದ ತನ್ನ ಕಾರ್ಯನಿರ್ವಹಿಸಲಿದೆ ಎಂದು ಮಾಹಿತಿ ನೀಡಿದೆ.

ಇನ್ಮುಂದೆ ಟ್ರಾಫಿಕ್‌ ಉಲ್ಲಂಘನೆ ಮಾಡುವವರು ಅಧಿಕೃತ ವೆಬ್‌ಸೈಟ್‌ ಮೂಲಕ ದಂಡದ ಮೊತ್ತವನ್ನು ಸ್ಥಳೀಯ ಠಾಣೆಯಲ್ಲಿ ಪಾವತಿಸಬೇಕು ಎಂದು ಇಲಾಖೆ ತಿಳಿಸಿದೆ.

ಜಿಲ್ಲಾ ವ್ಯಾಪ್ತಿಯಲ್ಲಿ ಪ್ರತಿನಿತ್ಯ ಒಂದೆರೆಡು ರಸ್ತೆ ಅಪಘಾತಗಳಿಂದ ಸಾವು ನೋವುಗಳಾಗುತ್ತಿವೆ. ಇವುಗಳನ್ನು ನಿಯಂತ್ರಿಸಲು ಕ್ಯಾಮರಾಗಳನ್ನು ಅಳವಡಿಸಲಾಗಿದೆ. ನಿಯಮ ಉಲ್ಲಂಘಿಸಿ ಚಾಲನೆ ಮಾಡುವವರನ್ನು ಕ್ಯಾಮರಾ ಮೂಲಕ ಸೆರೆಹಿಡಿದು ದಂಡ ವಿಧಿಸಲಾಗುವುದು. ಅಥವಾ http://payfine.mchallan.com:7271 ವೆಬ್‌ಸೈಟ್‌ ಮೂಲಕ ಅಥವಾ ಸ್ಥಳೀಯ ಠಾಣೆಗಳಿಗೆ ತೆರಳಿ ದಂಡ ಪಾವತಿಸಬಹುದು ಎಂದು ಪೊಲೀಸ್‌ ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಶಿವೈಕ್ಯ ಶಿವಕುಮಾರ ಶ್ರೀಗಳ 119ನೇ ಜಯಂತ್ಯೋತ್ಸವ: ಸಿದ್ಧಗಂಗಾ ಮಠದಲ್ಲಿ ಸಂಭ್ರಮ

ತುಮಕೂರು: ಸಿದ್ಧಗಂಗಾ ಮಠದ ಶಿವೈಕ್ಯ ಶಿವಕುಮಾರ ಶ್ರೀಗಳ 119ನೇ ಜನ್ಮದಿನೋತ್ಸವದ ಹಿನ್ನೆಲೆಯಲ್ಲಿಂದು ಮಠದಲ್ಲಿ ಸಂಭ್ರಮ ಕಳೆಗಟ್ಟಿದೆ. ಇಂದು ಬೆಳಿಗ್ಗೆಯಿಂದಲೇ ಪೂಜಾ…

51 mins ago

ಕಾಪಿರೈಟ್‌ ಉಲ್ಲಂಘನೆ ಆರೋಪ ಪ್ರಕರಣ: ನಟ ರಕ್ಷಿತ್‌ ಶೆಟ್ಟಿಗೆ 25 ಲಕ್ಷ ರೂ ದಂಡ ವಿಧಿಸಿ ಹೈಕೋರ್ಟ್‌ ಆದೇಶ

ಬೆಂಗಳೂರು: ಕಾಪಿ ರೈಟ್‌ ಉಲ್ಲಂಘನೆ ಆರೋಪ ಪ್ರಕರಣದಲ್ಲಿ ನಟ ರಕ್ಷಿತ್‌ ಶೆಟ್ಟಿ ಅವರಿಗೆ ದೆಹಲಿ ಹೈಕೋರ್ಟ್‌ 25 ಲಕ್ಷ ದಂಡ…

2 hours ago

ಹನೂರು| ಪೊನ್ನಾಚಿ ಗ್ರಾಮದಲ್ಲಿ ಜರುಗಿದ ಕುಳ್ಳುಮಾರಮ್ಮ ಹಾಗೂ ಬಸವೇಶ್ವರ ಸ್ವಾಮಿ ಕೊಂಡೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪೊನ್ನಾಚಿ ಗ್ರಾಮದಲ್ಲಿ ಗ್ರಾಮ ದೇವತೆ ಹಬ್ಬದ ಅಂಗವಾಗಿ ಶ್ರೀ…

2 hours ago

ಹನೂರು| ಹಿಟಾಚಿ ವಾಹನಗಳಲ್ಲಿ ಬ್ಯಾಟರಿ, ಡೀಸೆಲ್‌ ಕಳ್ಳತನ: ದೂರು ದಾಖಲು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಿಂಗನ ಕಟ್ಟೆ ಬಸ್ ನಿಲ್ದಾಣದ ಬಳಿ ನಿಲ್ಲಿಸಿದ್ದ ಹಿಟಾಚಿ ವಾಹನಗಳಲ್ಲಿ…

2 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಅಪಹರಣ ಸಂತ್ರಸ್ತೆಯರ ಕಡಿದ ಬದುಕನ್ನು ಜೋಡಿಸುವ ನಸೀಮಾ

ನಾಲ್ಕು ಸಾವಿರಕ್ಕೂ ಹೆಚು ಜನರಿಗೆ ಬದುಕು ರೂಪಿಸಿದ ಉತ್ಥಾನ್ ಕಲೆಕ್ಟಿವ್ ‘ಉತ್ಥಾನ್ ಕಲೆಕ್ಟಿವ್’ ಎಂಬುದು ಅಪಹರಣ ಸಂತ್ರಸ್ತೆಯರಿಗೆ ಆಶ್ರಯ ನೀಡಿ,…

2 hours ago

ಚಾಮರಾಜನಗರ ಜಿಲ್ಲೆಯಲ್ಲಿ ಜಾನುವಾರುಗಳಿಗೆ ನೀರು, ಲಸಿಕೆಗೆ ಸಜ್ಜು

ಬೇಸಿಗೆ ಕಾರಣ ಗ್ರಾಮಮಟ್ಟದ ಸಿಮೆಂಟ್ ತೊಟ್ಟಿಗಳಿಗೆ ನೀರು ತುಂಬಿಸಲು ಜಿಲ್ಲಾಧಿಕಾರಿ, ಸಿಇಒ ಸೂಚನೆ  ಚಾಮರಾಜನಗರ: ಬೇಸಿಗೆಯ ಈ ದಿನಗಳಲ್ಲಿ ಜಾನುವಾರುಗಳಿಗೆ…

2 hours ago